Don't Miss!
- Technology HMD ಪಲ್ಸ್ ನ ಕಲರ್ ಹಾಗೂ ಫೀಚರ್ಸ್ ಲೀಕ್! ಶೀಘ್ರದಲ್ಲೇ ಲಾಂಚ್...
- Lifestyle ರಾಮನವಮಿ ವಿಶೇಷ: ಬಾಲರಾಮನಿಗೆ ಸೂರ್ಯರಶ್ಮಿ ಅಭಿಷೇಕದ ಅದ್ಭುತ ದೃಶ್ಯಾವಳಿ..!
- Finance ಬೆಂಗಳೂರಿನಲ್ಲಿ ನಮ್ಮ ಯಾತ್ರಿ ಕ್ಯಾಬ್ ಸೇವೆ ಪ್ರಾರಂಭ, ಶೂನ್ಯ ಕಮಿಷನ್ ಭರವಸೆ
- Automobiles ಭಾರತದಲ್ಲಿ ಎಪ್ರಿಲಿಯಾ ಶ್ರೇಣಿಯ ನವೀಕರಣ... ಸೂಪರ್ ಬೈಕ್ ಸಂಸ್ಕೃತಿಗೆ ಅಡಿಪಾಯ
- Sports RCB: ಇದೇ ಆರ್ಸಿಬಿ ಸಮಸ್ಯೆ ಮೂಲ; ವಿದೇಶಿ ಕೋಚಿಂಗ್ ಸ್ಟಾಫ್ ವಿರುದ್ಧ ಸಿಡಿಮಿಡಿಗೊಂಡ ವೀರೇಂದ್ರ ಸೆಹ್ವಾಗ್
- News ಕಾಂಗ್ರೆಸ್ ಬಿಗ್ ಶಾಕ್ : ಮಾಜಿ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಬಿಜೆಪಿ ಸೇರ್ಪಡೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ದರ್ಶನ್ ರದ್ದು ಅವತ್ತು ಅದೇ ಮಾತು, ಇವತ್ತು ಅದೇ ಮಾತು
Recommended Video
ಮಂಡ್ಯ ಚುನಾವಣಾ ಫಲಿತಾಂಶದ ಬಗ್ಗೆ ನಟ ದರ್ಶನ್ ಹಾಗೂ ಯಶ್ ಏನು ಹೇಳುತ್ತಾರೆ ಎನ್ನುವ ಕುತೂಹಲ ಇತ್ತು. ಇದೀಗ ದರ್ಶನ್ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ವಿಡಿಯೋ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ.
''ಎಲ್ಲರಿಗೂ ನಮಸ್ಕಾರ. ಮಂಡ್ಯ ಲೋಕಸಭೆಯಲ್ಲಿ ಎಷ್ಟು ಊರುಗಳು, ಸಣ್ಣ ಸಣ್ಣ ಹಳ್ಳಿಗಳು ಬರುತ್ತದೆಯೋ ಪ್ರತಿಯೋಬ್ಬರಿಗೆ ಹೃತ್ಪೂರ್ವಕ ಧನ್ಯವಾದ. ಧನ್ಯವಾದ ಎನ್ನುವುದು ತುಂಬ ಸಣ್ಣ ಪದ ಆಗುತ್ತದೆ. ನಿಮ್ಮೆಲ್ಲರಿಗೆ ಸಾಷ್ಟಾಂಗ ನಮಸ್ಕಾರ ಹೇಳುತ್ತೇನೆ.'' ಎಂದು ತಮ್ಮ ಮಾತು ಶುರು ಮಾಡಿದರು.
ದರ್ಶನ್ ಮಂಡ್ಯದಲ್ಲಿ ಸುಮಲತಾ ಪ್ರಚಾರ ಮಾಡಿದ್ದು, ಕೊನೆಗೂ ಅವರಿಗೆ ವಿಜಯ ದಕ್ಕಿದೆ. ಈ ಬಗ್ಗೆ ಮಾತನಾಡಿ ''ಅಮ್ಮನಿಗೆ ಈ ದೊಡ್ಡ ಗೆಲುವು ನೀಡಿದ್ದೀರಿ. ಇದಕ್ಕೆ ಸಾಯುವವರೆಗೆ ಚಿರಋಣಿ ಆಗಿರುತ್ತೇವೆ. ಅವತ್ತು ಅದೇ ಮಾತನ್ನು ಹೇಳಿದ್ದೆ, ಇವತ್ತು ಅದೇ ಮಾತು ಹೇಳ್ತಾ ಇದ್ದೀನಿ.'' ಎಂದರು.
''ನೀವು ತೋರಿಸಿದ ಪ್ರೀತಿಗೆ ಪದಗಳು ಬರುವುದಿಲ್ಲ. ನೀವು ಕೊಟ್ಟ ಈ ಗೆಲುವನ್ನು ಅಮ್ಮ ತುಂಬ ಜೋಪಾನವಾಗಿ ಕಾಪಾಡುತ್ತಾರೆ. ನಿಮ್ಮೆಲ್ಲರಿಗೆ ಅವರ ಕೈಲಾದ ಕೆಲವನ್ನು ಐದು ವರ್ಷದಲ್ಲಿ ಮಾಡುತ್ತಾರೆ. ಮತ ಹಾಕಿದ ಎಲ್ಲ ದೇವರಿಗೆ ಚಿರಋಣಿ. ನಿಮ್ಮೆಲ್ಲರಿಗೆ ತುಂಬ ತುಂಬ ತುಂಬ ಧನ್ಯವಾದಗಳು.'' ಎಂದು ಹೇಳುವ ಮೂಲಕ ಇಡೀ ಮಂಡ್ಯದ ಜನರಿಗೆ ದರ್ಶನ್ ನೆನೆದರು.
ಸುಮಲತಾ ಅಂಬರೀಶ್ ಅಮ್ಮ ರವರ ಅಭೂತಪೂರ್ವ ಗೆಲುವಿಗೆ ಕಾರಣರಾದ ಮಂಡ್ಯದ ಆತ್ಮೀಯ ಮತದಾರ ಬಂಧುಗಳೆ ಮತ್ತು ನನ್ನೆಲ್ಲಾ ಪ್ರೀತಿಯ ಅಭಿಮಾನಿಗಳಿಗೆ ಹೃದಯ ಪೂರ್ವಕ ಧನ್ಯವಾದಗಳು.🙏🙏🙏🙏 @sumalathaA pic.twitter.com/qfM4dZPARz
— Darshan Thoogudeepa (@dasadarshan) May 23, 2019
ಅಂದಹಾಗೆ, ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿದ್ದ ಸುಮಲತಾ, ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರ್ ವಿರುದ್ಧ 125622 ಮತಗಳ ಅಂತರದಿಂದ ಗೆದಿದ್ದಾರೆ.