Don't Miss!
- News Soumya Reddy in Tirupati:ಸೌಮ್ಯ ರೆಡ್ಡಿ ಫೋಟೋ ಹಿಡಿದು ತಿರುಪತಿ ದೇವಸ್ಥಾನದ ಮುಂದೆ ಫೋಸ್ ಕೊಟ್ಟ ಭಕ್ತ!
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Automobiles ಬೈಕಿನಂತೆ ಮೈಲೇಜ್ ಕೊಡೋದ್ರಿಂದ ಈ ಹ್ಯುಂಡೈ ಕಾರಿನ ಮಾಲೀಕರು ಫುಲ್ ಖುಷ್
- Sports LSG vs CSK IPL 2024: ಐಪಿಎಲ್ನಲ್ಲಿ ಇತಿಹಾಸ ಸೃಷ್ಟಿಸಿದ ಎಂಎಸ್ ಧೋನಿ
- Technology Samsung: ಭಾರತದಲ್ಲಿ ಹೊಸ ವೇರಿಯಂಟ್ನಲ್ಲಿ ಸ್ಯಾಮ್ಸಂಗ್ ಗ್ಯಾಲಕ್ಸಿ F15 5G! ಬೆಲೆ ಎಷ್ಟು?
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸಂಕಷ್ಟದಲ್ಲಿರುವ ಗೆಳೆಯನಿಗೆ ಧೈರ್ಯ ತುಂಬಿದ ದಾಸ ದರ್ಶನ್
ಕಿರುತೆರೆ, ರಂಗಭೂಮಿ, ಮತ್ತು ಸಿನಿಮಾ ಕಲಾವಿದ ಅನಿಲ್ ಕುಮಾರ್ ತೀವ್ರ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮಾತು ಕೂಡ ಬಾರದ ಸ್ಥಿತಿಯಲ್ಲಿರುವ ಅನಿಲ್ ಕುಮಾರ್ ಅವರಿಗೆ ಸೂಕ್ತ ಚಿಕಿತ್ಸೆ ಕೊಡಿಸಲು ಕುಟಂಬದ ಬಳಿ ಅಗತ್ಯವಾದ ಹಣವಿಲ್ಲದೇ ನೋವು ಅನುಭವಿಸುತ್ತಿದ್ದಾರೆ.
ಈ ವಿಷ್ಯವನ್ನ ನಟ ದರ್ಶನ್ ಗೆ ತಿಳಿಸಿ ಎಂದು ಸ್ವತಃ ಕುಟುಂಬದವರೇ ಮನವಿ ಮಾಡಿದ್ದರು. ಈ ಬಗ್ಗೆ ಫಿಲ್ಮಿಬೀಟ್ ಕನ್ನಡ ಕೂಡ ವರದಿ ಮಾಡಿತ್ತು. ಇದೀಗ, ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು, ಗೆಳೆಯ ಅನಿಲ್ ಕುಮಾರ್ ಅವರ ಕಷ್ಟಕ್ಕೆ ಸ್ಪಂದಿಸಿದ್ದು, ''ನಾನು ಬರ್ತೀನಿ ಧೈರ್ಯವಾಗಿರಿ'' ಎಂದು ಫೋನ್ ಮಾಡಿ ತಿಳಿಸಿದ್ದಾರೆ ಎನ್ನಲಾಗಿದೆ.
ಚಿಕಿತ್ಸೆಗೆ ಹಣವಿಲ್ಲದೆ ಕಲಾವಿದ ಪರದಾಟ : ದರ್ಶನ್ ಗಾಗಿ ಕಾಯುತ್ತಿದೆ ಕುಟುಂಬ
ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಸುಮಲತಾ ಅವರ ಪರವಾಗಿ ಪ್ರಚಾರ ಮಾಡುತ್ತಿರುವ ನಟ ದರ್ಶನ್ ಬ್ಯುಸಿ ಇದ್ದಾರೆ. ಜೊತೆಗೆ ಹೈದ್ರಾಬಾದ್ ನಲ್ಲಿ ಒಡೆಯ ಚಿತ್ರದ ಚಿತ್ರೀಕರಣ ನಡೆಯುತ್ತಿದೆ. ಎರಡನ್ನ ಬ್ಯಾಲೆನ್ಸ್ ಮಾಡುತ್ತಿರುವ ದರ್ಶನ್, ಬಿಡುವು ಮಾಡಿಕೊಂಡು ಭೇಟಿ ಮಾಡುವುದಾಗಿ ಹೇಳಿದ್ದಾರಂತೆ.
ಅಂದ್ಹಾಗೆ, ನಟ ದರ್ಶನ್ ಮತ್ತು ಅನಿಲ್ ಕುಮಾರ್ ಅವರು ನೀನಾಸಂನಲ್ಲಿ ಸಹಪಾಠಿಗಳು. ದರ್ಶನ್ ನೀನಾಸಂನಲ್ಲಿ ಅಭ್ಯಾಸ ಮಾಡುತ್ತಿದ್ದ ಅನಿಲ್ ಕೂಡ ದಾಸನ ಜೊತೆಯಲ್ಲೇ ಇದ್ದರಂತೆ. ಆಗಿನಿಂದಲೂ ದರ್ಶನ್ ಜೊತೆ ಒಡನಾಟ ಮುಂದುರವರಿಸಿದ್ದರು ಅನಿಲ್ ಕುಮಾರ್.
ಕೆಜಿಎಫ್ ಕೋಟೆ ಅಲುಗಾಡಿಸಿ 'ಬಾಸ್' ಆದ ಯಜಮಾನ
ರಂಗಭೂಮಿ, ಕಿರುತೆರೆ ಹಾಗೂ ಅಲ್ಲೊಂದು ಇಲ್ಲೊಂದು ಸಿನಿಮಾ ಎಂದು ಜೀವನ ಮಾಡುತ್ತಿದ್ದ ಅನಿಲ್ ಈಗ ಆನಾರೋಗ್ಯದಿಂದ ಆಸ್ಪತ್ರೆಯಲ್ಲಿ ಮಲಗುವಂತೆ ಆಗಿದೆ. 'ಮೂಡಲ ಮನೆ' ಧಾರವಾಹಿಯಿಂದ ಕಿರುತೆರೆ ಪಯಣ ಪ್ರಾರಂಭಿಸಿದ ಅನಿಲ್ ಕುಮಾರ್ ಸದ್ಯ ಪ್ರಸಾರವಾಗುತ್ತಿರುವ 'ಬ್ರಹ್ಮಗಂಟು' ಧಾರವಾಹಿಯಲ್ಲಿಯೂ ಅಭಿನಯಿಸುತ್ತಿದ್ದಾರೆ.