Just In
Don't Miss!
- Education
BEL Recruitment 2021: 205 ಟೆಕ್ನೀಶಿಯನ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Automobiles
ಟಾಟಾ ಆಲ್ಟ್ರೊಜ್ ಐಟರ್ಬೋ ಕಾರಿನ ಟೀಸರ್ ಬಿಡುಗಡೆ ಮಾಡಿದ ಟಾಟಾ ಮೋಟಾರ್ಸ್
- Sports
ಐಎಸ್ಎಲ್: ಪ್ಲೇ ಆಫ್ ನಿರೀಕ್ಷೆಯಲ್ಲಿ ಜೆಮ್ಷೆಡ್ಪುರ, ನಾರ್ಥ್ ಈಸ್ಟ್
- News
ಭಾರತದಲ್ಲಿ ಮೊದಲ ದಿನ ಕೊರೊನಾ ಲಸಿಕೆ ಪಡೆದವರೆಷ್ಟು ಮಂದಿ?
- Lifestyle
ಆರೋಗ್ಯಕರ ಋತುಚಕ್ರಕ್ಕೆ ಇಲ್ಲಿವೆ ಕೆಲವೊಂದು ಯೋಗಾಸನಗಳು
- Finance
ಬಜೆಟ್ 2021: MSME ವಲಯಕ್ಕೆ ಏನು ಸಿಗಬಹುದು?
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಅಂಬರೀಶ್ ಕಂಚಿನ ಪುತ್ಥಳಿ ಅನಾವರಣ ಮಾಡಿದ ಡಿ-ಬಾಸ್
ರೆಬೆಲ್ ಸ್ಟಾರ್ ಅಂಬರೀಶ್ ಅವರ ಎರಡನೇ ವರ್ಷದ ಪುಣ್ಯ ತಿಥಿ ಹಿನ್ನೆಲೆ ಮಂಡ್ಯದಲ್ಲಿ ಅಂಬರೀಶ ಅವರ ಕಂಚಿನ ಪುತ್ಥಳಿ ನಿರ್ಮಿಸಲಾಗಿದೆ. ಈ ಕಂಚಿನ ಪುತ್ಥಳಿಯನ್ನು ಚಾಲೆಂಜಿಂಗ್ ಸ್ಟಾರ್ ದರ್ಶನ್, ಅಂಬರೀಶ್ ಮಗ ಅಭಿಷೇಕ್ ಹಾಗೂ ಸುಮಲತಾ ಅಂಬರೀಶ್ ಅನಾವರಣಗೊಳಿಸಿದ್ದಾರೆ.
ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ಹೊಟ್ಟೇಗೌಡನದೊಡ್ಡಿ ಗ್ರಾಮದಲ್ಲಿ ಅಂಬರೀಶ ಅವರ ಕಂಚಿನ ಪುತ್ಥಳಿ ನಿರ್ಮಿಸಲಾಗಿದೆ. ಪುತ್ಥಳಿ ಅನಾವರಣಕ್ಕಾಗಿ ಗ್ರಾಮಕ್ಕೆ ಬಂದ ದರ್ಶನ್, ಅಭಿಷೇಕ್ ಅವರನ್ನು ಭರ್ಜರಿಯಾಗಿ ಸ್ವಾಗತ ಮಾಡಲಾಗಿದೆ.
ಅಂಬರೀಶ್ ಪುಣ್ಯಸ್ಮರಣೆ; ಸಮಾಧಿಗೆ ಪೂಜೆ ಸಲ್ಲಿಸಿದ ಸುಮಲತಾ, ಅಭಿಷೇಕ್, ದರ್ಶನ್ ಮತ್ತು ಗಣ್ಯರು
ರಸ್ತೆಯುದ್ದಕ್ಕೂ ದರ್ಶನ್, ಸುಮಲತಾ ಹಾಗು ಅಭಿಷೇಕ ಅವರ ಮೇಲೆ ಹೂವಿನ ಮಳೆ ಸುರಿಸಿ ಅದ್ಧೂರಿಯಾಗಿ ಕರೆದುಕೊಂಡು ಬರಲಾಯಿತು. ಈ ವಿಡಿಯೋ ಮತ್ತು ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ.
ದರ್ಶನ್, ಅಭಿಷೇಕ್ ಅವರನ್ನು ನೋಡಲು ಜನಸಾಗರವೇ ಸೇರಿತ್ತು. ನೂರಾರು ಸಂಖ್ಯೆಯಲ್ಲಿ ಜನರು ಜಮಾಯಿಸಿದ್ದು, ಜನರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡಬೇಕಾಯಿತು.
ಕಂಚಿನ ಪುತ್ಥಳಿ ಅನಾವರಣಕ್ಕೂ ಮುಂಚೆ ಕಂಠೀರವ ಸ್ಟುಡಿಯೋದಲ್ಲಿರುವ ಅಂಬರೀಶ್ ಅವರ ಸಮಾಧಿ ಬಳಿ ಭೇಟಿ ನೀಡಿದ ದರ್ಶನ್, ಸುಮಲತಾ ಹಾಗೂ ಅಭಿಷೇಕ್ ಅಂಬರೀಷ್ ಜೊತೆ ಪೂಜೆ ಸಲ್ಲಿಸಿದರು ಪೂಜೆ ಸಲ್ಲಿಸಿದರು.