Don't Miss!
- Lifestyle ಮಳೆ ನಿರೀಕ್ಷೆಯಲ್ಲಿದ್ದವರಿಗೆ ಶಾಕ್ ಕೊಟ್ಟ ಹವಾಮಾನ ಇಲಾಖೆ..!
- News ಕರ್ನಾಟಕಕ್ಕೆ ವಸೂಲಿಗೆ ಬಂದಿದ್ದ ರಣದೀಪ್ ಸುರ್ಜೇವಾಲ: ಪ್ರಹ್ಲಾದ್ ಜೋಶಿ
- Automobiles Tata: ಒಬ್ಬರೇ ಬಂದು 2 ಸಾವಿರ ಟಾಟಾ ಎಲೆಕ್ಟ್ರಿಕ್ ಕಾರುಗಳನ್ನು ಖರೀದಿಸಿ ಹೋಗಿಬಿಟ್ಟರು!
- Technology ಮೇ 1 ರಂದು ವಿವೋ T3x 5G ಮೊಬೈಲ್ ಮತ್ತೆ ಖರೀದಿಗೆ ಲಭ್ಯ!..ಅಗ್ಗದ ಬೆಲೆ ಇದೆ!
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ದರ್ಶನ್ ನ ನೋಡಲು ಅಭಿಮಾನಿಗಳ ನೂಕುನುಗ್ಗಲು, ಲಘು ಲಾಠಿ ಪ್ರಹಾರ.!
Recommended Video
ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿರುವ ಆಭರಣ ಮಳಿಗೆಯ ಉದ್ಘಾಟನೆ ಸಮಾರಂಭಕ್ಕೆ ಮುಖ್ಯ ಅತಿಥಿಯಾಗಿ ಇಂದು 'ದಾಸ' ದರ್ಶನ್ ಭಾಗವಹಿಸಿದರು. ರೇಷ್ಮೆ ನಗರಿ ರಾಮನಗರದಲ್ಲಿ ಎಂ.ಎಸ್.ಗೋಲ್ಡ್ ಅಂಡ್ ಡೈಮಂಡ್ಸ್ ನೂತನ ಆಭರಣ ಮಳಿಗೆಯನ್ನ ಚಾಲೆಂಜಿಂಗ್ ಸ್ಟಾರ್ ದರ್ಶನ್ ಉದ್ಘಾಟಿಸಿದರು.
ನೆಚ್ಚಿನ ನಟನನ್ನ ನೋಡಲು ಜಿಲ್ಲೆಯ ಮೂಲೆ ಮೂಲೆಯಿಂದಲೂ ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳು ನೆರೆದಿದ್ದರು. ಅಭಿಮಾನಿಗಳು ದರ್ಶನ್ ನ ನೋಡಲು ಮುಗಿಬಿದ್ದಿದ್ರಿಂದ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಕೆಲ ಕಾಲ ಸಂಚಾರ ಅಸ್ತವ್ಯಸ್ತಗೊಂಡಿತ್ತು.
ಇದೇ ವೇಳೆ ಹೆದ್ದಾರಿಗೆ ನುಗ್ಗಿದ ಅಭಿಮಾನಿಗಳನ್ನು ತಡೆಯಲು ಹರಸಾಹಸ ಪಟ್ಟ ಪೊಲೀಸರು ಕಡೆಗೆ ಲಘು ಲಾಠಿ ಪ್ರಹಾರ ನಡೆಸಿ ಪರಿಸ್ಥಿತಿಯನ್ನ ನಿಭಾಯಿಸಿದರು.
ರಾಮನಗರದಲ್ಲಿ ದರ್ಶನ್ ನೋಡಲು ಜನವೋ ಜನ, ಲಾಠಿ ರುಚಿ ಕಂಡ ಅಭಿಮಾನಿಗಳು
ಇನ್ನೂ ಆಭರಣ ಮಳಿಗೆ ಉದ್ಘಾಟನೆಯನ್ನ ಕೆಲ ಕ್ಷಣಗಳಲೇ ಮುಗಿಸಿದ ದರ್ಶನ್ ಅಲ್ಲಿಂದ ತೆರಳಿದ ಬಳಿಕ ಕೂಪನ್ ಹಾಕಿದ್ದ ಸಾರ್ವಜನಿಕರಿಗೆ ಲಕ್ಕಿ ಡಿಪ್ ಮೂಲಕ ಆಯ್ಕೆ ಮಾಡಲಾಯಿತು. ವಿಜೇತ ಮೂರು ಜನರಿಗೆ ಡೈಮಂಡ್ ನೆಕ್ಲೇಸ್, ಐಫೋನ್ ಹಾಗೂ ಚಿನ್ನದ ನಾಣ್ಯವನ್ನ ನೀಡಲಾಯಿತು.
ಇದೇ ವೇಳೆ ಮಾತನಾಡಿದ ಆಭರಣ ಮಳಿಗೆಯ ವ್ಯವಸ್ಥಾಪಕ ನಿರ್ದೇಶಕ ಮುನೀರ್, ''ರಾಮನಗರದಲ್ಲಿ ಹೆಚ್ಚು ದರ್ಶನ್ ಅಭಿಮಾನಿಗಳಿರುವ ಕಾರಣ ಅವರನ್ನ ಆಹ್ವಾನ ಮಾಡಲಾಯಿತು. ಇನ್ನೂ ಒಂದು ತಿಂಗಳ ಕಾಲ ಹಲವು ವಿಶೇಷ ಆಫರ್ ಗಳನ್ನು ಗ್ರಾಹಕರಿಗೆ ನೀಡಲಾಗುವುದು'' ಎಂದು ತಿಳಿಸಿದರು.