Don't Miss!
- News Bengaluru Rain: ಸುದೀರ್ಘ ಕಾಯುವಿಕೆ ಅಂತ್ಯ: ಬೆಂಗಳೂರಿಗೆ ಎಂಟ್ರಿ ಕೊಟ್ಟ ಮಳೆ; ವಿಡಿಯೋ ನೋಡಿ
- Automobiles ಹ್ಯುಂಡೈನ ಈ ಕಾರಿಗೆ ಭಾರತದಲ್ಲಿ ಭರ್ಜರಿ ಡಿಸ್ಕೌಂಟ್: ಇದಕ್ಕಿಂತ ಉತ್ತಮ ಆಫರ್ ಸದ್ಯಕ್ಕಿಲ್ಲ!
- Lifestyle 5 ನಿಮಿಷದಲ್ಲಿ ಪಾತ್ರೆಯನ್ನು ಹೊಳೆಯುವಂತೆ ಮಾಡಿ..! ಸುಲಭದ ಟಿಪ್ಸ್ ಇಲ್ಲಿದೆ
- Technology oneplus: ಒನ್ಪ್ಲಸ್ನಿಂದ ಫ್ಲ್ಯಾಗ್ಶಿಪ್ ಕ್ಯಾಮೆರಾ ಸೌಲಭ್ಯದೊಂದಿಗೆ ಫ್ಲಿಪ್ ಫೋನ್!
- Sports LSG vs CSK IPL 2024: ಲಕ್ನೋ vs ಚೆನ್ನೈ ಪಂದ್ಯದ ವರದಿ, ಫ್ಯಾಂಟಸಿ ಡ್ರೀಮ್ ಟೀಂ, ಸಂಭಾವ್ಯ ಆಡುವ 11ರ ಬಳಗ
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ದರ್ಶನ್ ನ ನೋಡಲು ಅಭಿಮಾನಿಗಳ ನೂಕುನುಗ್ಗಲು, ಲಘು ಲಾಠಿ ಪ್ರಹಾರ.!
Recommended Video
ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿರುವ ಆಭರಣ ಮಳಿಗೆಯ ಉದ್ಘಾಟನೆ ಸಮಾರಂಭಕ್ಕೆ ಮುಖ್ಯ ಅತಿಥಿಯಾಗಿ ಇಂದು 'ದಾಸ' ದರ್ಶನ್ ಭಾಗವಹಿಸಿದರು. ರೇಷ್ಮೆ ನಗರಿ ರಾಮನಗರದಲ್ಲಿ ಎಂ.ಎಸ್.ಗೋಲ್ಡ್ ಅಂಡ್ ಡೈಮಂಡ್ಸ್ ನೂತನ ಆಭರಣ ಮಳಿಗೆಯನ್ನ ಚಾಲೆಂಜಿಂಗ್ ಸ್ಟಾರ್ ದರ್ಶನ್ ಉದ್ಘಾಟಿಸಿದರು.
ನೆಚ್ಚಿನ ನಟನನ್ನ ನೋಡಲು ಜಿಲ್ಲೆಯ ಮೂಲೆ ಮೂಲೆಯಿಂದಲೂ ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳು ನೆರೆದಿದ್ದರು. ಅಭಿಮಾನಿಗಳು ದರ್ಶನ್ ನ ನೋಡಲು ಮುಗಿಬಿದ್ದಿದ್ರಿಂದ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಕೆಲ ಕಾಲ ಸಂಚಾರ ಅಸ್ತವ್ಯಸ್ತಗೊಂಡಿತ್ತು.
ಇದೇ ವೇಳೆ ಹೆದ್ದಾರಿಗೆ ನುಗ್ಗಿದ ಅಭಿಮಾನಿಗಳನ್ನು ತಡೆಯಲು ಹರಸಾಹಸ ಪಟ್ಟ ಪೊಲೀಸರು ಕಡೆಗೆ ಲಘು ಲಾಠಿ ಪ್ರಹಾರ ನಡೆಸಿ ಪರಿಸ್ಥಿತಿಯನ್ನ ನಿಭಾಯಿಸಿದರು.
ರಾಮನಗರದಲ್ಲಿ ದರ್ಶನ್ ನೋಡಲು ಜನವೋ ಜನ, ಲಾಠಿ ರುಚಿ ಕಂಡ ಅಭಿಮಾನಿಗಳು
ಇನ್ನೂ ಆಭರಣ ಮಳಿಗೆ ಉದ್ಘಾಟನೆಯನ್ನ ಕೆಲ ಕ್ಷಣಗಳಲೇ ಮುಗಿಸಿದ ದರ್ಶನ್ ಅಲ್ಲಿಂದ ತೆರಳಿದ ಬಳಿಕ ಕೂಪನ್ ಹಾಕಿದ್ದ ಸಾರ್ವಜನಿಕರಿಗೆ ಲಕ್ಕಿ ಡಿಪ್ ಮೂಲಕ ಆಯ್ಕೆ ಮಾಡಲಾಯಿತು. ವಿಜೇತ ಮೂರು ಜನರಿಗೆ ಡೈಮಂಡ್ ನೆಕ್ಲೇಸ್, ಐಫೋನ್ ಹಾಗೂ ಚಿನ್ನದ ನಾಣ್ಯವನ್ನ ನೀಡಲಾಯಿತು.
ಇದೇ ವೇಳೆ ಮಾತನಾಡಿದ ಆಭರಣ ಮಳಿಗೆಯ ವ್ಯವಸ್ಥಾಪಕ ನಿರ್ದೇಶಕ ಮುನೀರ್, ''ರಾಮನಗರದಲ್ಲಿ ಹೆಚ್ಚು ದರ್ಶನ್ ಅಭಿಮಾನಿಗಳಿರುವ ಕಾರಣ ಅವರನ್ನ ಆಹ್ವಾನ ಮಾಡಲಾಯಿತು. ಇನ್ನೂ ಒಂದು ತಿಂಗಳ ಕಾಲ ಹಲವು ವಿಶೇಷ ಆಫರ್ ಗಳನ್ನು ಗ್ರಾಹಕರಿಗೆ ನೀಡಲಾಗುವುದು'' ಎಂದು ತಿಳಿಸಿದರು.