Don't Miss!
- News ಮಳೆ.. ಮಳೆ.. ಮುಂದಿನ 24 ಗಂಟೆಯಲ್ಲಿ ಭರ್ಜರಿ ಮಳೆ!
- Sports IPL 2024: ಚಹಾಲ್ ಬಿಟ್ಟುಕೊಟ್ಟಿದರ ಬಗ್ಗೆ ಕಾರಣ ತಿಳಿಸಿದ ಆರ್ಸಿಬಿ ಮಾಜಿ ನಿರ್ದೇಶಕ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Lifestyle ಮೊಬೈಲ್ ಬೇಡ..ಗ್ಯಾಜೆಟ್ ಬೇಡ..ಹಸ್ತದಿಂದ ಪೇಮೆಂಟ್ ಮಾಡಿ..! ಇದು ಟಿಜಿಟಲ್ ಕ್ರಾಂತಿ..!
- Automobiles Kia Carens: ಗ್ಲೋಬಲ್ ಎನ್ಸಿಎಪಿ ಸುರಕ್ಷತಾ ಪರೀಕ್ಷೆ.. 3-ಸ್ಟಾರ್ ಪಡೆದ ಕಿಯಾ ಕ್ಯಾರೆನ್ಸ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ದರ್ಶನ್ ಸೆರೆಹಿಡಿದ ವನ್ಯಜೀವಿ ಛಾಯಾಚಿತ್ರ ಪ್ರದರ್ಶನಕ್ಕೆ ಚಾಲನೆ
Recommended Video
ವಿಶ್ವ ವನ್ಯಜೀವಿ ದಿನ ಹಿನ್ನೆಲೆ ಮೈಸೂರಿನ ಸಂದೇಶ್ ಪ್ರಿನ್ಸ್ ಹೊಟೆಲ್ನಲ್ಲಿ ಮೂರು ದಿನಗಳ ಕಾಲ ನಟ ದರ್ಶನ್ ಸೆರೆ ಹಿಡಿದ ವನ್ಯಜೀವಿ ಛಾಯಾಚಿತ್ರಗಳ ಪ್ರದರ್ಶನ ಮಾಡಲಾಗುತ್ತಿದೆ.
ದರ್ಶನ್ ಕಾಡಿನಲ್ಲಿ ಸೆರೆ ಹಿಡಿದ 75 ಆಯ್ದ ಛಾಯಾಚಿತ್ರಗಳನ್ನ ಪ್ರದರ್ಶನ ಇಡಲಾಗಿದ್ದು ಇದರಿಂದ ಬಂದ ಹಣವನ್ನ ವನ್ಯಜೀವಿ ಸಂರಕ್ಷಣಾ ನಿಧಿಗೆ ನೀಡಲು ನಿರ್ಧರಿಸಲಾಗಿದೆ.
ದರ್ಶನ್ ತೆಗೆದಿರುವ ವನ್ಯಜೀವಿ ಛಾಯಚಿತ್ರ ಪ್ರದರ್ಶನ ಮಾರಾಟಕ್ಕೆ ಮೃಗಾಲಯ ಪ್ರಾಧಿಕಾರ ಕಾರ್ಯದರ್ಶಿ ಬಿ.ಪಿ.ರವಿ ಚಾಲನೆ ನೀಡಿದ್ದು, ಈ ವೇಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್, ಅರಣ್ಯ ಅಧಿಕಾರಿಗಳಾದ ಎಡುಕುಂಡಲು, ಮೃಗಾಲಯ ಸಿಇಓ ಅಜಿತ್ ಕುಲಕರ್ಣಿ, ಡಿಎಫ್ ಓಗಳಾದ ಸಿದ್ದರಾಮಪ್ಪ, ಪ್ರಶಾಂತ್ ಸೇರಿ ಹಲವರು ಭಾಗಿಯಾಗಿದ್ದರು.
ಚಾಲೆಂಜಿಂಗ್ ಸ್ಟಾರ್ ದರ್ಶನ್ ಸೆರೆ ಹಿಡಿದ ಫೋಟೋಗಳ ಪ್ರದರ್ಶನ ಹಾಗೂ ಮಾರಾಟ
ದರ್ಶನ್ ತೆಗೆದಿರುವ ಪ್ರತಿ ಚಿತ್ರಕ್ಕೆ 2000 ಬೆಲೆ ನಿಗದಿ ಪಡಿಸಲಾಗಿದ್ದು, ಈ ಪೋಟೋ ಜೊತೆಗೆ ದರ್ಶನ್ ಆಟೋಗ್ರಾಫ್ ಬೇಕು ಅಂದ್ರೆ 500 ಹೆಚ್ಚುವರಿ ಹಣ ನಿಗದಿಗೊಳಿಸಲಾಗಿದೆ. ಮೂರು ದಿನಗಳ ಕಾಲ ಪ್ರದರ್ಶನದ ಜಾಗದಲ್ಲಿ ಇದ್ದು ಸ್ವತಃ ದರ್ಶನ್ ಅವರೇ ಆಟೋಗ್ರಾಫ್ ನೀಡಲಿದ್ದಾರೆ.
ನಾಗರಹೊಳೆ ಅಭಯಾರಣ್ಯದಲ್ಲಿ ಡಿ ಬಾಸ್ ಕ್ಲಿಕ್ಕಿಸಿದ ಫೋಟೋಗಳು ಇವು !
ಈ ವೇಳೆ ವಿಂಗ್ ಕಮಾಂಡರ್ ಅಭಿನಂದನ್ ಬಗ್ಗೆ ಮಾತನಾಡಿದ ದರ್ಶನ್ ''ವಿಂಗ್ ಕಮಾಂಡರ್ ಅಭಿನಂದನ್ ನಿಜವಾದ ಹೀರೋ, ನಾವು ಅವರ ಮುಂದೆ ಡಮ್ಮಿ. ಅವರಿಗೆ ನನ್ನ ಸಲ್ಯೂಟ್'' ಎಂದು ಹೆಮ್ಮೆ ವ್ಯಕ್ತಪಡಿಸಿದರು.