twitter
    For Quick Alerts
    ALLOW NOTIFICATIONS  
    For Daily Alerts

    ದರ್ಶನ್ ಆರೋಗ್ಯದ ಬಗ್ಗೆ ನಿರ್ಮಾಪಕ ಮುನಿರತ್ನ ಏನಂತಾರೆ.?

    By ಯಶಸ್ವಿನಿ.ಎಂ.ಕೆ
    |

    Recommended Video

    ದರ್ಶನ್ ಆರೋಗ್ಯ ವಿಚಾರಿಸಿದ ಮುನಿರತ್ನ..! | Filmibeat Kannada

    ಕಾರು ಅಪಘಾತದಲ್ಲಿ ನಟ ದರ್ಶನ್, ಪ್ರಜ್ವಲ್ ದೇವರಾಜ್ ಹಾಗೂ ದೇವರಾಜ್ ಗಾಯಗೊಂಡಿದ್ದರು. ಮೈಸೂರಿನ ಕೊಲಂಬಿಯಾ ಏಷಿಯಾ ಆಸ್ಪತ್ರೆಯಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಚಿಕಿತ್ಸೆ ಪಡೆಯುತ್ತಿದ್ದಾರೆ. ದರ್ಶನ್ ರವರ ಕೈ ಮೂಳೆ ಮುರಿದಿದ್ದು ಶಸ್ತ್ರ ಚಿಕಿತ್ಸೆ ಮಾಡಲಾಗಿದೆ.

    ಗಾಯಗೊಂಡಿದ್ದ ದೇವರಾಜ್ ಹಾಗೂ ಪ್ರಜ್ವಲ್ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದ ಕಾರಣ, ಇಬ್ಬರನ್ನೂ ಇಂದು ಸಂಜೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಯಿತು.

    ಅಪಘಾತ ಪ್ರಕರಣಕ್ಕೆ ತಿರುವು: ದರ್ಶನ್ ಜೊತೆಗಿದ್ದ ರಾಯ್ ಅಂಟೋನಿಗೆ ಈಗ ಕಂಟಕಅಪಘಾತ ಪ್ರಕರಣಕ್ಕೆ ತಿರುವು: ದರ್ಶನ್ ಜೊತೆಗಿದ್ದ ರಾಯ್ ಅಂಟೋನಿಗೆ ಈಗ ಕಂಟಕ

    ಇತ್ತ ದರ್ಶನ್ ಇನ್ನೂ ಆಸ್ಪತ್ರೆಯಲ್ಲೇ ವಿಶ್ರಾಂತಿ ಪಡೆಯುತ್ತಿದ್ದಾರೆ. ದರ್ಶನ್ ಆರೋಗ್ಯ ವಿಚಾರಿಸಲು ಇಂದು ಕೊಲಂಬಿಯಾ ಏಷಿಯಾ ಆಸ್ಪತ್ರೆಗೆ ನಿರ್ಮಾಪಕ ಮುನಿರತ್ನ ಭೇಟಿ ಕೊಟ್ಟಿದ್ದರು.

    Darshan is fine says Producer Muniratna

    'ದಾಸ' ದರ್ಶನ್ ಅಪಘಾತದ ಸುತ್ತ ಹಲವು ಅನುಮಾನಗಳ ಹುತ್ತ.!'ದಾಸ' ದರ್ಶನ್ ಅಪಘಾತದ ಸುತ್ತ ಹಲವು ಅನುಮಾನಗಳ ಹುತ್ತ.!

    ದರ್ಶನ್ ಯೋಗಕ್ಷೇಮ ವಿಚಾರಿಸಿದ ಬಳಿಕ, ''ದರ್ಶನ್ ಈಗ ಆರಾಮಾಗಿದ್ದಾರೆ. ಕೈಗೆ ಸ್ವಲ್ಪ ಪೆಟ್ಟಾಗಿದೆ ಎಂಬುದು ಬಿಟ್ಟರೆ, ಬೇರೆ ಯಾವ ಸಮಸ್ಯೆಯೂ ಇಲ್ಲ. ಶೀಘ್ರದಲ್ಲೇ ಅವರು ಗುಣಮುಖರಾಗುತ್ತಾರೆ. 'ಕುರುಕ್ಷೇತ್ರ'ದಲ್ಲಿ ದರ್ಶನ್ ಭಾಗದ ಚಿತ್ರೀಕರಣ ಮುಗಿದಿದೆ. ಡಬ್ಬಿಂಗ್ ಸಹ ಮುಗಿಸಿಕೊಟ್ಟಿದ್ದಾರೆ. ಗ್ರಾಫಿಕ್ಸ್ ಕೆಲಸದಿಂದಾಗಿ ಬಿಡುಗಡೆ ತಡವಾಗುತ್ತಿದೆ'' ಎಂದು ಮಾಧ್ಯಮಗಳ ಮುಂದೆ ನಿರ್ಮಾಪಕ ಮುನಿರತ್ನ ಹೇಳಿದರು.

    English summary
    Kannada Actor Darshan is fine says Producer Muniratna.
    Tuesday, September 25, 2018, 19:38
    IIFA

    Kannada Photos

    Go to : More Photos
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    X