Don't Miss!
- News ಮೀಸಲಾತಿ ಅಸ್ತ್ರ ಪ್ರಯೋಗಿಸಿದ ಮೋದಿಗೆ ಬಿಜೆಪಿಯ ಹೊಸ ಸಂಗಾತಿಯನ್ನ ಕೇಳಿ ಎಂದು ಟಾಂಗ್ ಕೊಟ್ಟ ಸಿದ್ದರಾಮಯ್ಯ
- Automobiles XUV300: ಮಹೀಂದ್ರಾ ಎಕ್ಸ್ಯುವಿ300 ಕಾರನ್ನು ನಿಮ್ಮ ಮನೆಗೆ ತರಬೇಕೇ.. ಆನ್-ರೋಡ್ ಬೆಲೆ ಎಷ್ಟು, EMI ಏನು?
- Finance ಲೋಕಸಭಾ ಚುನಾವಣೆ 2024: ಟಾಪ್ 10 ಶ್ರೀಮಂತ ಅಭ್ಯರ್ಥಿಗಳು ಇವರು
- Technology OnePlus: ಒನ್ಪ್ಲಸ್ ವಾಚ್ 2 ನಾರ್ಡಿಕ್ ಬ್ಲೂ ಆವೃತ್ತಿ ಲಾಂಚ್! ಬೆಲೆ ಎಷ್ಟು?
- Sports IPL 2024: ಮತ್ತೊಂದು ರೋಚಕ ಪಂದ್ಯದಲ್ಲಿ SRH vs RCB ಕದನ; ಪಂದ್ಯದ ವಿವರ, ಸಂಭಾವ್ಯ ಆಡುವ 11ರ ಬಳಗ
- Lifestyle ಮಲೆನಾಡ ಶೈಲಿನ ಮೃದುವಾದ ಕಡುಬು ಮಾಡೋದು ಹೇಗೆ.? ಸಿಂಪಲ್ ತಿಂಡಿ ರೆಸಿಪಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ವಿಡಿಯೋ ವೈರಲ್: ಕುದುರೆ ಆರೈಕೆಯಲ್ಲಿ ಡಿ ಬಾಸ್ ದರ್ಶನ್
ಚಾಲೆಂಜಿಂಗ್ ಸ್ಟಾರ್ ದರ್ಶನ್ ಸದ್ಯ ಮನೆಯಲ್ಲಿಯೇ ಇದ್ದಾರೆ. ಲಾಕ್ ಡೌನ್ ನಲ್ಲಿ ಡಿ ಬಾಸ್ ಹೆಚ್ಚಾಗಿ ಮೈಸೂರಿನ ಫಾರ್ಮ್ ಹೌಸ್ ನಲ್ಲಿ, ಪ್ರಾಣಿಗಳ ಜೊತೆ ಸಮಯ ಕಳೆಯುತ್ತಿದ್ದಾರೆ. ನೆಚ್ಚಿನ ಪ್ರಾಣಿಗಳ ಆರೈಕೆಯಲ್ಲಿ ಬ್ಯುಸಿಯಾಗಿದ್ದಾರೆ.
Recommended Video
ಇತ್ತೀಚಿಗಷ್ಟೆ ನಟ ದೇವರಾಜ್ ಕುಟುಂಬ ದರ್ಶನ್ ತೋಟದ ಮನೆಗೆ ಭೇಟಿ ಮಾಡಿದ್ದರು. ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಆದರೀಗ ದರ್ಶನ್ ಕುದುರೆಯ ಆರೈಕೆಯಲ್ಲಿ ತೊಡಗಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಮುಂದೆ ಓದಿ...
ದರ್ಶನ್ ಫಾರ್ಮ್ ಹೌಸ್ ನಲ್ಲಿ ದೇವರಾಜ್ ಕುಟುಂಬ: ಫೋಟೋ ವೈರಲ್
ತೋಟದ ಮನೆಯಲ್ಲಿ ದರ್ಶನ್
ದರ್ಶನ್ ಮೈಸೂರಿನ ತೋಟದ ಮನೆಯಲ್ಲಿ ಕಾಲಕಳೆಯುತ್ತಿದ್ದಾರೆ. ಚಿತ್ರೀಕರಣ ಇಲ್ಲದ ಕಾರಣ ದರ್ಶನ್ ತೋಟದ ಮನೆಯಲ್ಲಿಯೆ, ಪ್ರಾಣಿ ಪಕ್ಷಿಗಳ ಜೊತೆ ಇದ್ದಾರೆ. ನೆಚ್ಚಿನ ಪ್ರಾಣಿಗಳನ್ನು ಪ್ರೀತಿಯಿಂದ ಆರೈಕೆ ಮಾಡುತ್ತಿದ್ದಾರೆ. ದರ್ಶನ್ ಗೆ ಕುದುರೆ ಎಂದರೆ ತುಂಬ ಇಷ್ಟ. ಫಾರ್ಮ್ ಹೌಸ್ ನಲ್ಲಿ ಸಾಕಷ್ಟು ಕುದುರೆಗಳನ್ನು ಸಾಕಿದ್ದಾರೆ.
ಅನಾರೋಗ್ಯಕ್ಕೆ ತುತ್ತಾಗಿದ್ದ ದಾಸ ದರ್ಶನ್ ನೆಚ್ಚಿನ ಬಸವ ಇನ್ನಿಲ್ಲ
ಕುದುರೆ ಆರೈಕೆಯಲ್ಲಿ ದರ್ಶನ್
ದರ್ಶನ್ ತೋಟದ ಮನೆಯಲ್ಲಿರುವ ಕುದುರೆಗಳ ಆರೈಕೆ ಮಾಡುತ್ತಿದ್ದಾರೆ. ದರ್ಶನ್ ಮತ್ತು ತೋಟದ ಮನೆಯಲ್ಲಿರುವ ಸ್ನೇಹಿತರು ಕುದುರೆಯನ್ನು ಆರೈಕೆ ಮಾಡುತ್ತಿದ್ದಾರೆ. ಕುದುರೆ ಜೊತೆ ಕಾಲಕಳೆಯುತ್ತಿರುವ ದರ್ಶನ್ ವಿಡಿಯೋ ಎಲ್ಲಾ ಕಡೆ ಹರಿದಾಡುತ್ತಿದೆ. ದರ್ಶನ್ ಕುದುರೆ ಪ್ರೀತಿಗೆ ಅಭಿಮಾನಿಗಳು ಫಿದಾ ಆಗಿದ್ದಾರೆ.
ದರ್ಶನ್ ತೋಟದ ಮನೆಯಲ್ಲಿ ದೇವರಾಜ್
ಇತ್ತೀಚಿಗೆ ದೇವರಾಜ್ ಕುಟುಂಬ ದರ್ಶನ್ ಫಾರ್ಮ್ ಹೌಸ್ ನಲ್ಲಿ ಕಾಣಿಸಿಕೊಂಡು ಅಚ್ಚರಿ ಮೂಡಿಸಿದ್ದರು. ದೇವರಾಜ್ ಮತ್ತು ಮಕ್ಕಳು ಪ್ರಜ್ವಲ್ ಹಾಗೂ ಪ್ರಣವ್ ದೇವರಾಜ್ ಜೊತೆಗೆ ಯಶಸ್ ಸೂರ್ಯ ಮತ್ತು ಚಿಕ್ಕಣ್ಣ ತೋಟದ ಮನೆಗೆ ಭೇಟಿ ನೀಡಿದ್ದಾರೆ. ದೇವರಾಜ್ ಕುಟುಂಬದ ಜೊತೆ ಕಾಣಿಸಿಕೊಂಡಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.
ವೀರ ಮದಕರಿ ನಾಯಕ ಸಿನಿಮಾ: ದರ್ಶನ್ ಅಭಿಮಾನಿಗಳಿಗೆ ಸಿಹಿ ಸುದ್ದಿ
|
ರಾಬರ್ಟ್ ಸಿನಿಮಾ ರಿಲೀಸ್ ಗೆ ರೆಡಿಯಾಗಿದೆ
ದರ್ಶನ್ ಅಭಿನಯದ ರಾಬರ್ಟ್ ಸಿನಿಮಾ ರಿಲೀಸ್ ಗೆ ರೆಡಿಯಾಗಿದ್ದು, ಭಾರಿ ನಿರೀಕ್ಷೆ ಮೂಡಿಸಿದೆ. ಅಂದುಕೊಂಡಂತೆ ಆಗಿದ್ದರೆ ಸಿನಿಮಾ ಈಗಾಗಲೆ ರಿಲೀಸ್ ಆಗಬೇಕಿತ್ತು. ಆದರೆ ಕೊರೊನಾ ಹಾವಳಿಯ ಪರಿಣಾಮ ಸಿನಿಮಾ ಮುಂದಕ್ಕೆ ಹೋಗಿದೆ. ಇನ್ನೂ ದರ್ಶನ್ ಮದಕರಿನಾಯಕ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಲಾಕ್ ಡೌನ್ ಮುಗಿಯುತ್ತಿದ್ದಂತೆ ದರ್ಶನ್ ಚಿತ್ರೀಕರಣಕ್ಕೆ ಹೊರಡುವ ಸಾಧ್ಯತೆ ಇದೆ.