Don't Miss!
- News 2024ರ ಲೋಸಕಭೆ ಚುನಾವಣೆಗೆ ಮತ ಹಾಕುವುದು ಹೇಗೆ?
- Sports IPL 2024: ಆರ್ಸಿಬಿಗೆ ವಿರಾಟ್, ಪಾಟಿದಾರ್ ಆಸರೆ: ಹೈದರಾಬಾದ್ಗೆ ಸವಾಲಿನ ಟಾರ್ಗೆಟ್
- Lifestyle ಪುಟ್ಟ ಕಂದಮ್ಮಗಳ ಮುಖದಲ್ಲಿ ನಗು ತರಿಸಲು ಟೀಚರ್ ಮಾಡಿದ ಕೆಲಸ ನೋಡಿ, ಮಕ್ಕಳ ಪಾಲಿನ ದೇವತೆ ಇವರು
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನ.1ಕ್ಕೆ 'ರಾಯಣ್ಣ' ಬ್ಲ್ಯಾಕ್ ಟಿಕೆಟ್ ಸಿಗೋದು ಕಷ್ಟ ಸಾರ್
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳಿಗೆ ಈ ಶುಕ್ರವಾರವೂ (ಅ.26) ನಿರಾಸೆ ತಪ್ಪಿಲ್ಲ. ಕಾರಣ ದರ್ಶನ್ ಅಭಿನಯದ ಭಾರಿ ನಿರೀಕ್ಷೆಯ ಚಿತ್ರ 'ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ' ಈ ವಾರವೂ ಬಿಡುಗಡೆಯಾಗುತ್ತಿಲ್ಲ. ಈ ಮೆಗಾ ಬಜೆಟ್ ಚಿತ್ರ ನವೆಂಬರ್ 1ರ ಕನ್ನಡ ರಾಜ್ಯೋತ್ಸವದಂದು ಪ್ರೇಕ್ಷಕರ ಮುಂದೆ ಬರುತ್ತಿದೆ.
ರಾಜ್ಯದಾದ್ಯಂತ ಸರಿಸುಮಾರು 200ಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ 'ರಾಯಣ್ಣ' ಅಬ್ಬರಿಸಿ ಬೊಬ್ಬಿರಿಯಲಿದ್ದಾನೆ. ಈ ಚಿತ್ರದ ವಿತರಣೆ ಹಕ್ಕುಗಳನ್ನು ಎಚ್ ಡಿ ಗಂಗರಾಜು ಪಡೆದಿದ್ದಾರೆ. ಮೊದಲ ವಾರದಲ್ಲಿ ಟಿಕೆಟ್ ಬೆಲೆ ಏರಿಸಲಾಗುತ್ತಿದೆ. ಆದರೆ ಅಭಿಮಾನಿಗಳಿಗೆ ಬ್ಲ್ಯಾಕ್ ಟಿಕೆಟ್ ಸಿಗುವುದೂ ಅನುಮಾನ ಎಂಬ ಮಾತುಗಳು ಕೇಳಿಬರುತ್ತಿವೆ.
ಎಲ್ಲಾ ಅಂದುಕೊಂಡಂತೆ ನಡೆದಿದ್ದರೆ ಅ.19ಕ್ಕೆ ಚಿತ್ರ ತೆರೆಕಾಣಬೇಕಾಗಿತ್ತು. ಆದರೆ ಚಿತ್ರದಲ್ಲಿ ಅನೇಕ ಪ್ರಾಣಿಗಳನ್ನು ಬಳಸಿಕೊಳ್ಳಲಾಗಿದೆ ಎಂದು ಪ್ರಾಣಿ ದಯಾ ಸಂಘ ಆಕ್ಷೇಪ ವ್ಯಕ್ತಪಡಿಸಿತ್ತು. ಹಾಗಾಗಿ ಚಿತ್ರ ತೆರೆಗೆ ಬರುವುದು ಸ್ವಲ್ಪ ತಡವಾಗುತ್ತಿದೆ ಎನ್ನುತ್ತಿವೆ ಮೂಲಗಳು.
ಕಿತ್ತೂರು ಚೆನ್ನಮ್ಮನಾಗಿ ಡಾ. ಜಯಪ್ರದಾ, ಮಲ್ಲಮ್ಮನಾಗಿ ತಾರೆ ನಿಖಿತಾ ತುಕ್ರಲ್ ಸೇರಿದಂತೆ ಶ್ರೀನಿವಾಸಮೂರ್ತಿ, ಉಮಾಶ್ರೀ, ಬ್ಯಾಂಕ್ ಜನಾರ್ದನ್, ಶಶಿಕುಮಾರ್ ಒಳಗೊಂಡಂತೆ 25ಕ್ಕೂ ಹೆಚ್ಚು ಕಲಾವಿದರ ಬಳಗವೇ ಚಿತ್ರದಲ್ಲಿದೆ.
ರಾಯಣ್ಣನ ತ್ಯಾಗ, ಬಲಿದಾನ ಸ್ವಾತಂತ್ರ್ಯ ಹೋರಾಟಗಾರರಿಗೆ ಸ್ಫೂರ್ತಿಯಾಗಿತ್ತು. ಈಗಾಗಲೆ ರಾಯಣ್ಣನ ಬಗ್ಗೆ ಅನೇಕ ಚಿತ್ರಗಳು ಬಂದಿದ್ದರೂ ಇಷ್ಟೊಂದು ಬಜೆಟ್ ನಲ್ಲಿ ಯಾರೂ ನಿರ್ಮಿಸಿರಲಿಲ್ಲ. ಸಾಲು ಸಾಲು ರಜೆಗಳು, ರಾಜ್ಯೋತ್ಸವ ಸಂಭ್ರಮ ಸಡಗರದ ನಡುವೆ 'ರಾಯಣ್ಣ' ಚಿತ್ರ ಬಿಡುಗಡೆಯಾಗುತ್ತಿದೆ. ನಾಗಣ್ಣ ನಿರ್ದೇಶನದ ಚಿತ್ರಕ್ಕೆ ಯಶೋವರ್ಧನ್ ಅವರ ಸಂಗೀತ ಹಾಗೂ ಕೇಶವಾದಿತ್ಯ ಅವರ ಸಾಹಿತ್ಯ ಚಿತ್ರಕ್ಕಿದೆ. ಚಿತ್ರದ ಟ್ರೇಲರ್ ನೋಡಿ. (ಒನ್ಇಂಡಿಯಾ ಕನ್ನಡ)