Don't Miss!
- Sports CSK vs LSG IPL 2024: ಮಾರ್ಕಸ್ ಸ್ಟೋಯಿನಿಸ್ ಆರ್ಭಟಕ್ಕೆ ಸಿಎಸ್ಕೆ ಥಂಡಾ; ಚೆನ್ನೈಗೆ ನೀರು ಕುಡಿಸಿದ ಲಕ್ನೋ
- News ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ: ಕಾರಣ ತಿಳಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ದರ್ಶನ್ 'ಸಂಗೊಳ್ಳಿ ರಾಯಣ್ಣ' ಬಿಡುಗಡೆ ಗೊಂದಲ?
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಬರಲಿರುವ ಚಿತ್ರ 'ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ" ಬಿಡುಗಡೆ ಯಾವಾಗ ಎಂಬುದಕ್ಕೆ ಸಂಬಂಧಿಸಿದಂತೆ ಗಾಂಧಿನಗರದಲ್ಲಿ ಗೊಂದಲಮಯ ಚರ್ಚೆಗಳು ಆರಂಭವಾಗಿವೆ. ಕಾರಣ, ಈ ಚಿತ್ರ ಮುಂದಿನ ತಿಂಗಳು, ಅಂದರೆ ಆಗಷ್ಟ್ 15, 2012 ರಂದು ತೆರೆಗೆ ಬರಲಿದೆ ಎಂಬ ಚಿತ್ರತಂಡದ ಮಾತನ್ನು ಗಾಂಧಿನಗರ ಒಪ್ಪುತ್ತಿಲ್ಲ.
ಚಿತ್ರತಂಡ ಹೇಳುತ್ತಿರುವ ಪ್ರಕಾರ, ಸ್ವಾತಂತ್ರ್ರ ಹೋರಾಟಗಾರ ಸಂಗೊಳ್ಳಿ ರಾಯಣ್ಣ ಹುಟ್ಟಿದ ದಿನ ಹಾಗೂ ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕಿದ ದಿನವಾದ ಆಗಷ್ಟ್ 15 ರಂದೇ 'ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ' ಚಿತ್ರವನ್ನು ಬಿಡುಗಡೆ ಮಾಡಲಾಗುವುದು. ಅಂದೇ ಬಿಡುಗಡೆ ಮಾಡಿದರೆ ಅದಕ್ಕೊಂದು ಅಪೂರ್ವ ಅರ್ಥವೂ ಸಿಗಲಿದೆ. ಅದಕ್ಕಾಗಿ ಭರ್ಜರಿ ಸಿದ್ಧತೆಗಳೂ ನಡೆಯುತ್ತಿವೆ.
ಆದರೆ ಈಗಿನ ಚಿತ್ರತಂಡದ ಪರಿಸ್ಥಿತಿ ಗಮನಿಸಿದರೆ ಆಗಸ್ಟ್ 15ಕ್ಕೆ ಚಿತ್ರ ತೆರೆಗೆ ಬರುವ ಸಾಧ್ಯತೆಗಳು ತೀರಾ ಕಡಿಮೆ. ಕಾರಣ, ಈ ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು. ತೀರಾ ಇತ್ತೀಚೆಗಷ್ಟೇ ಚಾಲೆಂಜಿಂಗ್ ಸ್ಟಾರ್ ದರ್ಶನ್ ತುಂಬಾ ಕಷ್ಟಪಟ್ಟು ತಮ್ಮ ಡಬ್ಬಿಂಗ್ ಮುಗಿಸಿದ್ದಾರೆ. ಐತಿಹಾಸಿಕ ಚಿತ್ರದ ಪಾತ್ರವಾದ ಕಾರಣ ಡಬ್ಬಿಂಗ್ ಅಷ್ಟು ಸುಲಭವಲ್ಲ. ಹೀಗಾಗಿ ದರ್ಶನ್ ಅವರಿಗೆ ಡಬ್ಬಿಂಗ್ ಮಾಡಲು ಸುಮಾರು 20 ದಿನಗಳೇ ಬೇಕಾಗಿದೆಯಂತೆ.
ಚಿತ್ರದಲ್ಲಿನ ಬೇರೆ ಕಲಾವಿದರ ಡಬ್ಬಿಂಗ್ ಕೂಡ ಮುಗಿದಿದೆ. ಆದರೆ, ಕಂಪ್ಯೂಟರ್ ಗ್ರಾಫಿಕ್ಸ್, ಡಿಟಿಎಸ್, ರೀ-ರೆಕಾರ್ಡಿಂಗ್ ಕೆಲಸಗಳು ಇನ್ಮುಂದೆ ನಡೆಯಬೇಕಿದೆ. ಇವು ಅರ್ಜೆಂಟ್ ನಲ್ಲಿ ಮುಗಿಯುವ ಕೆಲಸಗಳಲ್ಲ. ಹೀಗಿರುವಾಗ, ಆಗಸ್ಟ್ 15ರಂದೇ ಬಿಡುಗಡೆ ಅಸಾಧ್ಯದ ಮಾತು ಎಂಬುದು ಗಾಂಧಿನಗರದಲ್ಲಿನ ಕೆಲವು ಪಂಡಿತರ ಮಾತು.
ಆನಂದ್ ಅಪ್ಪುಗೋಳ್ ನಿರ್ಮಾಣ, ನಾಗಣ್ಣ ನಿರ್ದೇಶನದ 'ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ' ಚಿತ್ರಕ್ಕೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಾಯಕ. ರಾಣಿ ಕಿತ್ತೂರು ಚೆನ್ನಮ್ಮ ಪಾತ್ರದಲ್ಲಿ ಜಯಪ್ರದಾ ನಟಿಸಿದ್ದಾರೆ. ದರ್ಶನ್ ಅವರಿಗೆ ಜೋಡಿಯಾಗಿ ನಿಖಿತಾ ತುಕ್ರಾಲ್ ಇದ್ದಾರೆ. ಶ್ರೀನಿವಾಸ ಮೂರ್ತಿ, ಶಶಿಕುಮಾರ್, ಧರ್ಮ, ಉಮಾಶ್ರೀ, ಕರಿಬಸವಯ್ಯ ಮುಂತಾದವರು ಪ್ರಮುಖ ಪೋಷಕವರ್ಗದಲ್ಲಿ ನಟಿಸಿದ್ದಾರೆ.
ಬರೋಬ್ಬರಿ 30 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಈ ಚಿತ್ರಕ್ಕೆ ಗ್ರಾಫಿಕ್ಸ್ ಕೆಲಸವೇ ತೀರಾ ವೇಳೆಯನ್ನು ಕಬಳಿಸಲಿದೆ. ಪೋಸ್ಟ್ ಪ್ರೊಡಕ್ಷನ್ ಉಸ್ತುವಾರಿ ನೋಡಿಕೊಳ್ಳುತ್ತಿರುವ ಕೇಶವ್ ಆದಿತ್ಯರ ಪ್ರಕಾರ, ಚಿತ್ರ ಆಗಸ್ಟ್ 15ಕ್ಕೂ ಮೊದಲು ಸಿದ್ಧವಾಗಲಿದೆ. ಚಿತ್ರದ ತಂತ್ರಜ್ಞರು ಹಗಲಿರುಳು ಶ್ರಮಿಸುತ್ತಿದ್ದಾರೆ. ಆದರೆ ತೀರಾ ತರಾತುರಿಯಲ್ಲಿ ಮಾಡಿ ಮುಗಿಸಲಾಗದು ಎಂಬ ಸಂದೇಶವನ್ನೂ ಅವರು ನೀಡಿದ್ದಾರೆ.
ನಿರ್ದೇಶಕ ನಾಗಣ್ಣ, ಕೇಶವ್ ಆದಿತ್ಯರ ಮಾತನ್ನು ಅನುಮೋದಿಸಿದ್ದಾರೆ. "ನಮಗೆ ಚಿತ್ರವನ್ನು ಆಗಸ್ಟ್ 15ರಂದೇ ಬಿಡುಗಡೆ ಮಾಡುವುದೇ ಮುಖ್ಯವಲ್ಲ. ಎಲ್ಲಕ್ಕಿಂತಲೂ ಹೆಚ್ಚಾಗಿ, ನಾವು ಮಾಡಿದ ಚಿತ್ರ ಮೊದಲು ನಮಗೆ ತೃಪ್ತಿ ಕೊಡುವಂತಿರಬೇಕು. ಬಿಡುಗಡೆ ನಂತರ ಪ್ರೇಕ್ಷಕರಿಂದ ಬರುವ ಫಲಿತಾಂಶ ನಮಗೆ ಮುಖ್ಯ" ಎಂದಿದ್ದಾರೆ ನಾಗಣ್ಣ.
ಹೀಗೆ ವಾದ-ವಿವಾದಗಳು, ಚರ್ಚೆಗಳ ಮಧ್ಯೆ 'ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ' ತೆರೆಯ ಮೇಲೆ ಬರುವುದು ಯಾವಾಗ ಎಂಬುದಕ್ಕೆ ಪಕ್ಕಾ ಉತ್ತರವಿಲ್ಲ. ಚಿಂಗಾರಿ ನಂತರ ದರ್ಶನ್ ಅಭಿಮಾನಿಗಳಿಗೆ ದರ್ಶನ್ ಅವರ ಯಾವ ಚಿತ್ರವೂ ಬಾರದಿರುವುದರಿಂದ ಈ ಚಿತ್ರದ ಮೇಲೆ ಭಾರೀ ನಿರೀಕ್ಷೆ ಸಹಜವಾಗಿದೆ. ಆದರೆ ಬಿಡಗಡೆ ದಿನಾಂಕ ಎಂದು..? (ಒನ್ ಇಂಡಿಯಾ ಕನ್ನಡ)