Don't Miss!
- Sports DC vs GT IPL 2024: ಅಕ್ಷರ್, ಪಂತ್ ಭರ್ಜರಿ ಬ್ಯಾಟಿಂಗ್; ಗುಜರಾತ್ಗೆ ಸವಾಲಿನ ಗುರಿ ನೀಡಿದ ಡೆಲ್ಲಿ
- News ಎಸ್ಸಿ, ಎಸ್ಟಿ ಮೀಸಲಾತಿ ಮುಸ್ಲಿಮರಿಗೆ ಹಂಚಿಕೆ: ಸ್ಪಷ್ಟನೆ ನೀಡಿದ ಸಿಎಂ ಸಿದ್ದರಾಮಯ್ಯ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹುಲಿ ದಿನಾಚರಣೆಯಲ್ಲಿ 'ಡಿ-ಬಾಸ್' ಸಾರಿದ್ರು ಉತ್ತಮ ಸಂದೇಶ
Recommended Video
ವಿಶ್ವ ಹುಲಿ ದಿನಾಚರಣೆಯನ್ನು ನಿನ್ನೆ(ಜುಲೈ 30) ಎಲ್ಲೆಡೆ ಆಚರಣೆ ಮಾಡಲಾಯಿತು. ಮೈಸೂರಿನ ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿಯೂ ವಿಶ್ವ ಹುಲಿ ದಿನಾಚರಣೆಯನ್ನು ವಿಶೇಷವಾಗಿ ಆಚರಣೆ ಮಾಡಿದ್ರು. ಸಮಾರಂಭದ ಮುಖ್ಯ ಅತಿಥಿಯಾಗಿ ಕನ್ನಡ ಸಿನಿಮಾರಂಗದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಭಾಗಿ ಆಗಿದ್ದರು.
ಅರಣ್ಯ ಇಲಾಖೆಯ ರಾಯಭಾರಿ ಆಗಿರುವ ಡಿ ಬಾಸ್ ಇತ್ತೀಚಿನ ದಿನಗಳಲ್ಲಿ ಅರಣ್ಯ ಮತ್ತು ಪರಿಸರಕ್ಕೆ ಸಂಬಂಧಿಸಿದ ಸಮಾರಂಭದಲ್ಲಿ ಭಾಗಿ ಆಗುತ್ತಿದ್ದಾರೆ. ಈ ಮೂಲಕ ಸಾಮಾನ್ಯ ಜನರಿಗೆ ಪರಿಸರದ ಮೇಲಿನ ಕಾಳಜಿ ಹೆಚ್ಚಾಗಲಿ ಎನ್ನುವುದು ಅರಣ್ಯ ಅಧಿಕಾರಿಗಳು ಮತ್ತು ದರ್ಶನ್ ಅವರ ಉದ್ದೇಶವಾಗಿದೆ.
ನಿನ್ನೆ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದ ದರ್ಶನ್ ಈ ಮೂಲಕ ಎಲ್ಲರಿಗೂ ಉತ್ತಮ ಸಂದೇಶವನ್ನು ಸಾರಿದ್ದಾರೆ. ಈ ಮಾತನ್ನು ಕೇಳಿದ ಪ್ರತಿಯೊಬ್ಬರು ಹೌದು ನಾವು ಹೀಗೆ ಬದುಕಬೇಕು ಎನ್ನುವ ನಿರ್ಧಾರಕ್ಕೆ ಬರುತ್ತಿದ್ದಾರೆ, ಹಾಗಾದರೆ ಡಿ ಬಾಸ್ ಕೊಟ್ಟ ಸಂದೇಶವೇನು? ಇಲ್ಲಿದೆ ಸಂಪೂರ್ಣ ಮಾಹಿತಿ. ಮುಂದೆ ಓದಿ
ದರ್ಶನ್ ಪ್ರಕಾರ ಇವರೇ ಪರಿಸರ ಪ್ರೇಮಿ
ಚಾಲೆಂಜಿಂಗ್ ಸ್ಟಾರ್ ದರ್ಶನ್ ನಿಜವಾದ ಪ್ರಾಣಿ ಪ್ರೇಮಿ ಯಾರು ಎನ್ನುವುದನ್ನು ತಿಳಿಸಿ ಹೇಳಿದ್ದಾರೆ. ಪ್ರಾಣಿ ಪಕ್ಷಿಗಳನ್ನ ಮನೆಯಲ್ಲಿ ಸಾಕಿಕೊಂಡರೆ ಅವರು ಪರಿಸರ ಪ್ರೇಮಿ ಆಗುವುದಿಲ್ಲ ಎನ್ನುವುದು ದರ್ಶನ್ ಅವರ ನಿರ್ಧಾರ.
ನಿಜವಾದ ಪರಿಸರ ಪ್ರೇಮಿ ಯಾರು?
ನಿಜವಾದ ಪರಿಸರ ಪ್ರೇಮಿ ಅವನ ಸುತ್ತಾ ಮುತ್ತ ಸಮಾಜವನ್ನು ಸ್ವಚ್ಛವಾಗಿ ಇಟ್ಟುಕೊಳ್ಳುವವನು. ಪ್ರಾಣಿ ಪಕ್ಷಿಗಳಿಗೆ ಯಾವುದೇ ರೀತಿಯಲ್ಲಿ ಸಮಸ್ಯೆ ಆಗದಂತೆ ಪ್ಲಾಸ್ಟಿಕ್ ಮುಕ್ತವಾಗಿರುವಂತೆ ನೋಡಿಕೊಳ್ಳುವವನೇ ನಿಜವಾದ ಪರಿಸರ ಪ್ರೇಮಿ ಎನ್ನುವುದು ದರ್ಶನ್ ಅವರ ಮಾತು.
ಪ್ಲಾಸ್ಟಿಕ್ ಮುಕ್ತ ಪರಿಸರ ಮಾಡೋಣ
ಈ ಮೂಲಕ ದರ್ಶನ್ ನಮ್ಮ ಸುತ್ತಾ ಮುತ್ತ ಪ್ರದೇಶವನ್ನು ಪ್ಲಾಸ್ಟಿಕ್ ಮುಕ್ತವನ್ನಾಗಿ ಮಾಡಿಕೊಳ್ಳೋಣ ಎನ್ನುವ ಸಂದೇಶವನ್ನು ಸಾರಿದ್ದಾರೆ. ದರ್ಶನ್ ಅವರ ಸ್ಪೂರ್ತಿ ಮಾತುಗಳಿಂದ ಅಭಿಮಾನಿಗಳು ಸಂತಸವನ್ನು ವ್ಯಕ್ತ ಪಡಿಸಿದ್ದಾರೆ.
ದರ್ಶನ್ ಆಶ್ರಯದಲ್ಲಿ ಸಾಕಷ್ಟು ಪ್ರಾಣಿಗಳು
ಚಾಲೆಂಜಿಂಗ್ ಸ್ಟಾರ್ ಫಾರ್ಮ್ ಹೌಸ್ ನಲ್ಲಿ ಸಾಕಷ್ಟು ಪ್ರಾಣಿ ಪಕ್ಷಿಗಳು ಆಶ್ರಯ ಪಡೆಯುತ್ತಿವೆ. ಇವುಗಳನ್ನು ನೋಡಿಕೊಳ್ಳು ಸಾಕಷ್ಟು ಜನರನ್ನು ಕೆಲಸಕ್ಕೆ ಇಟ್ಟಿದ್ದಾರೆ ದಾಸ ದರ್ಶನ್.