Don't Miss!
- News Gold Price: ಚಿನ್ನ ಮತ್ತು ಬೆಳ್ಳಿ ದರದಲ್ಲಿ ಭಾರೀ ಇಳಿಕೆ, ಇಂದಿನ ಬೆಲೆ ವಿವರ
- Lifestyle ಬಾಯಿ ಚಪ್ಪರಿಸಿ ಸವಿಯುವ ನೆಲ್ಲಿಕಾಯಿ ಉಪ್ಪಿನಕಾಯಿ..!
- Finance BMRCL: ಇಂದು ನಮ್ಮ ಮೆಟ್ರೋ ಕಾರ್ಯಾಚರಣೆ ಅವಧಿ ವಿಸ್ತರಣೆ, ಸಮಯ ವಿವರ
- Sports IPL 2024 :ಬಲಿಷ್ಠ ಹೈದರಾಬಾದ್ ಬಗ್ಗು ಬಡಿದ ಆರ್ಸಿಬಿ: ಕಮಿನ್ಸ್ ಪಡೆಗೆ ಹೀನಾಯ ಸೋಲು
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನೀವು ಸ್ಟಾರ್, ನೀವು ಚೆನ್ನಾಗಿರಬೇಕು: ಗಡ್ಡಪ್ಪ ಭೇಟಿ ಮಾಡಿದ ದರ್ಶನ್
Recommended Video
ಮಂಡ್ಯದಲ್ಲಿ ಪ್ರಚಾರ ಮಾಡುತ್ತಿರುವ ನಟ ದರ್ಶನ್, ಇಂದು ಶ್ರೀರಂಗಪಟ್ಟಣದ ಸುತ್ತಮುತ್ತಲಿನ ಹಳ್ಳಿಗಳಲ್ಲಿ ಮತಯಾಚನೆ ಮಾಡಿದರು. ಇದೇ ವೇಳೆ ಹಿರಿಯ ನಟ, ತಿಥಿ ಖ್ಯಾತಿಯ ಗಡ್ಡಪ್ಪ ಅವರ ಊರಿಗೆ ಭೇಟಿ ನೀಡಿದ ದರ್ಶನ್, ಅವರ ಯೋಗಕ್ಷೇಮ ವಿಚಾರಿಸಿದರು.
ನಿಮ್ಮ ಮತವನ್ನ ಪಕ್ಷೇತರ ಅಭ್ಯರ್ಥಿ ಸುಮಲತಾ ಅವರಿಗೆ ಹಾಕಿ ಎಂದು ಮನವಿ ಮಾಡಿಕೊಂಡರು. ಅದಕ್ಕೆ ಗಡ್ಡಪ್ಪ ಕೂಡ 'ನನ್ನ ವೋಟ್ ಸುಮಲತಾಗೆ ಹೋಗಿ' ಎಂದರು.
'ಮಾಯಾಂಗನೆ ಸುಮಲತಾ' ಟೀಕೆಗೆ ದರ್ಶನ್ ಹೇಳಿದ್ದು ಮತ್ತದೇ ಉತ್ತರ
ಇನ್ನು ಗಡ್ಡಪ್ಪ ಅವರ ಬಳಿ ಮಾತನಾಡುತ್ತಿದ್ದಾಗ ಕೆಲವು ಅಭಿಮಾನಿಗಳು ದರ್ಶನ್ ಅವರಿಗೆ ಹೂವಿನ ಹಾರ ಹಾಕಲು ಮುಂದಾದರು. ಆ ಹಾರವನ್ನ ತೆಗೆದುಕೊಂಡ ದರ್ಶನ್, ಗಡ್ಡಪ್ಪ ಅವರಿಗೆ ಹಾಕಿ, ನೀವು ಸ್ಟಾರ್ ನೀವು ಚೆನ್ನಾಗಿರಬೇಕು' ಎಂದರು.
ಹಸುವಿನ ಹಾಲು ಕರೆದು 'ರೈತ' ಎಂದು ಸಾಬೀತು ಮಾಡಿದ ದರ್ಶನ್
ಬಳಿಕ ಮಾತನಾಡಿದ ಗಡ್ಡಪ್ಪ 'ದರ್ಶನ್ ಅವರ ಬಂದು ಸುಮಲತಾ ಅವರಿಗೆ ಮತ ಕೇಳಿದ್ರು. ನಾನು ಅವರಿಗೆ ವೋಟ್ ಹಾಕೋದು. ನಾನು ಕೂಡ ಅವರ ಪರವಾಗಿ ಪ್ರಚಾರ ಮಾಡ್ತಿದ್ದೀನಿ' ಎಂದು ತಿಳಿಸಿದರು.
ಏಪ್ರಿಲ್ 14 ರಂದು ಮದ್ದೂರ್ ಮತ್ತು ಏಪ್ರಿಲ್ 15 ರಂದು ಪಾಂಡವಪುರದಲ್ಲಿ ಪ್ರಚಾರ ಮಾಡಲಿರುವ ನಟ ದರ್ಶನ್, ಏಪ್ರಿಲ್ 16 ರಂದು ಬೃಹತ್ ಜಾಥ ನಡೆಸಲಿದ್ದಾರೆ.