Don't Miss!
- News ಮೀಸಲಾತಿ ಅಸ್ತ್ರ ಪ್ರಯೋಗಿಸಿದ ಮೋದಿ; ಮುಸ್ಲಿಂ ಸಮುದಾಯಕ್ಕೆ 4% ಮೀಸಲಾತಿ: ಸಿದ್ದರಾಮಯ್ಯ
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- Finance Lok Sabha Election 2024: ಮತದಾನ ಮಾಡಿ ಹೋಟೆಲ್ಗಳಲ್ಲಿ ಫ್ರೀಯಾಗಿ, ರಿಯಾಯಿತಿಯಲ್ಲಿ ಟಿಫನ್ ತಿನ್ನಿ!
- Technology Qubo InstaView ವಿಡಿಯೋ ಡೋರ್ ಫೋನ್ ಲಾಂಚ್!..ಬೆಲೆ ಎಷ್ಟು, ಫೀಚರ್ಸ್ ಏನಿವೆ?
- Automobiles ಭರ್ಜರಿ ಸಿಹಿಸುದ್ದಿ: ಸ್ಕೋಡಾ ಕೊಡಿಯಾಕ್ ಎಸ್ಯುವಿಯ ಮೇಲೆ ಭರ್ಜರಿ ಡಿಸ್ಕೌಂಟ್
- Lifestyle ಖುಲಾಯಿಸಿತು ಅದೃಷ್ಟ: ಫ್ಯಾಂಟಸಿ ಗೇಮ್ನಲ್ಲಿ ₹1.5 ಕೋಟಿ ಗೆದ್ದ ಮೆಕ್ಯಾನಿಕ್..!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕಿಡ್ನಿ ವೈಫಲ್ಯದಿಂದ ಬಳಲುತಿದ್ದ ಪುಟ್ಟ ಅಭಿಮಾನಿಯ ಆಸೆ ಈಡೇರಿಸಿದ ಡಿ ಬಾಸ್
Recommended Video
ಕಷ್ಟ ಎಂದವರ ಪಾಲಿಗೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಸದಾ ಅಭಯಹಸ್ತ ಚಾಚುತ್ತಾರೆ. ಸಾಕಷ್ಟು ಜನರ ಕಷ್ಟಕ್ಕೆ ನೆರವಾಗುವ ದರ್ಶನ್ ಇತ್ತೀಚಿಗೆ ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಪುಟ್ಟ ಪೋರನ ಆಸೆ ಈಡೇರಿಸುವ ಮೂಲಕ ಮತ್ತೊಮ್ಮೆ ಮಾನವೀಯತೆ ಮೆರೆದಿದ್ದಾರೆ. ಸಹಾಯದ ಗುಣದಿಂದನೆ ಅಭಿಮಾನಿಗಳ ಹೃದಯಕ್ಕೆ ತೀರ ಹತ್ತಿರವಾಗಿರುವ ದಾಸ ಅಪಾರ ಸಂಖ್ಯೆಯ ಅಭಿಮಾನಿ ಬಳಗ ಹೊಂದಿದ್ದಾರೆ.
ಇಂದು ಸಹ ಚಾಲೆಂಜಿಂಗ್ ಸ್ಟಾರ್ ದರ್ಶನ್ ಪುಟ್ಟ ಅಭಿಮಾನಿಯ ಆಸೆ ಈಡೇರಿಸಿ ಆ ಪೋರನ ಮುಖದಲ್ಲಿ ನಗು ಮೂಡಿಸಿದ್ದಾರೆ. ಹೌದು, ಸಾವು ಬದುಕಿನ ನಡುವೆ ಹೋರಾಡುತ್ತಿರುವ ಡಿ ಬಾಸ್ ಪುಟ್ಟ ಅಭಿಮಾನಿ ರತನ್ ನನ್ನು ಭೇಟಿಯಾಗಿ ಆತನ ಬಹುದಿನದ ಕನಸನ್ನು ಈಡೇರಿಸಿದ್ದಾರೆ.
ಕನ್ವರ್ ಲಾಲ್ ಜೊತೆಗೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಸೆಲ್ಫಿ.!
ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ರತನ್ ಗೆ ದರ್ಶನ್ ಅಂದರೆ ತುಂಬಾ ಇಷ್ಟವಂತೆ. ಒಮ್ಮೆಯಾದರು ದರ್ಶನ್ ಅವರನ್ನು ಭೇಟಿ ಮಾಡಬೇಕೆನ್ನುವುದು ಆಸೆಯಂತೆ. ಬಾಲಕನ ಆಸೆ ಪಡುತ್ತಿರುವ ಸುದ್ದಿ ದರ್ಶನ್ ಗೆ ಗೊತ್ತಾಗುತ್ತಿದ್ದಂತೆ ಆ ಪುಟ್ಟ ಪೋರನಿಗಾಗಿ ಸಮಯ ಮೀಸಲಿಡಲು ನಿರ್ಧರಿಸಿದ್ದಾರೆ.
ಹಾಸನದಿಂದ ರತನ್ ಕುಟುಂಬವನ್ನು ಬೆಂಗಳೂರಿಗೆ ಕರೆಸಿಕೊಂಡಿದ್ದಾರೆ. ದರ್ಶನ್ ನೀವಾಸಕ್ಕೆ ಬಂದ ರತನ್ ಕುಟುಂಬದವರ ಜೊತೆ ಒಂದಿಷ್ಟು ಸಮಯ ಕಾಲಕಳೆದಿದ್ದಾರೆ. ದರ್ಶನ್ ಭೇಟಿಯಾಗುತ್ತಿದಂತೆ ರತನ್ ಸಂತಸ ಹೇಳತೀರದು. ಕಟುಂಬದವರಿಗೆ ಮತ್ತು ಬಾಲಕನಿಗೆ ದರ್ಶನ್ ಧೈರ್ಯ ತುಂಬಿದ್ದಾರೆ. ರತನ್ ತಂದೆ ಆಟೋ ಓಡಿಸುತ್ತಾರೆ. ತಂದೆಯ ಆಟೋ ಮೇಲೂ ದರ್ಶನ್ ಅವರ ಫೋಟೋವಿದೆ. ಹೀಗೆ ದರ್ಶನ್ ಸಾಕಷ್ಟು ಜನರ ಕಷ್ಟಕ್ಕೆ ನೆರವಾಗಿದ್ದಾರೆ.