Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಕುರುಕ್ಷೇತ್ರ' ಸಿನಿಮಾ ವೀಕ್ಷಿಸಿದ ದರ್ಶನ್ ತಾಯಿ, ಸಹೋದರ ದಿನಕರ್
Recommended Video
ನಿನ್ನೆ (ಶುಕ್ರವಾರ) ಬಿಡುಗಡೆಯಾಗಿರುವ 'ಕುರುಕ್ಷೇತ್ರ' ಸಿನಿಮಾಗೆ ಪ್ರೇಕ್ಷಕರಿಂದ ದೊಡ್ಡ ಪ್ರತಿಕ್ರಿಯೆ ಸಿಕ್ಕಿದೆ. ಅಭಿಮಾನಿಗಳು ಮಾತ್ರವಲ್ಲದೆ ದರ್ಶನ್ ಕುಟುಂಬವೂ ಸಿನಿಮಾ ನೋಡಿ ಖುಷಿ ಪಟ್ಟಿದೆ.
'ಕುರುಕ್ಷೇತ್ರ'ದೊಂದಿಗೆ ವರಮಹಾಲಕ್ಷ್ಮಿ ಹಬ್ಬ ಆಚರಿಸಿದ ವಿಜಯಲಕ್ಷ್ಮಿ ದರ್ಶನ್
ದರ್ಶನ್ ತಾಯಿ ಮೀನಾ ತೂಗುದೀಪ್, ಸಹೋದರ, ನಿರ್ದೇಶಕ ದಿನಕರ್ ತೂಗುದೀಪ್, ದಿನಕರ್ ಪತ್ನಿ ಮಾನಸ ಹಾಗೂ ದಿನಕರ್ ಮಕ್ಕಳು ಸಿನಿಮಾವನ್ನು ನೋಡಿದ್ದಾರೆ. ದರ್ಶನ್ ದುರ್ಯೋಧನ ಪಾತ್ರದಲ್ಲಿ ನೋಡಿ ಸಂತಸಗೊಂಡಿದ್ದಾರೆ.
ಇತ್ತೀಚಿಗಷ್ಟೆ ದರ್ಶನ್ ಪತ್ನಿ ವಿಜಯಲಕ್ಷ್ಮಿ ಹಾಗೂ ಮಗ ವಿನೀಶ್ ಕೂಡ ಸಿನಿಮಾವನ್ನು ವೀಕ್ಷಣೆ ಮಾಡಿದ್ದರು. ಈಗ ಅವರ ಇಡೀ ಕುಟುಂಬವೇ ಸಿನಿಮಾ ನೋಡಿದೆ. ಮೊದಲ ಬಾರಿಗೆ ದರ್ಶನ್ ಪೌರಾಣಿಕ ಸಿನಿಮಾ ಮಾಡಿದ್ದು, ಅವರಿಗೂ ಚಿತ್ರದ ಮೇಲೆ ನಿರೀಕ್ಷೆ ಇತ್ತು.
ಪ್ರಮುಖವಾಗಿ ದರ್ಶನ್ ದುರ್ಯೋಧನ ಪಾತ್ರವನ್ನು ನಿರ್ವಹಿಸುವ ರೀತಿಗೆ ದೊಡ್ಡ ರೆಸ್ಪಾನ್ಸ್ ಸಿಕ್ಕಿದೆ. ದರ್ಶನ್ ಸಿನಿ ಕೆರಿಯರ್ ನಲ್ಲಿ ಬಂದ ಬೆಸ್ಟ್ ಪಾತ್ರ ಇದಾಗಿದೆ.
ಕುರುಕ್ಷೇತ್ರ ಸಿನಿಮಾ ಹೇಗಿದೆ ?
ಕನ್ನಡದಲ್ಲಿ ಪೌರಾಣಿಕ ಸಿನಿಮಾ ಬಂದು ಎಷ್ಟೋ ಕಾಲ ಆಗಿದೆ. ಹಾಗಾಗಿ, ಒಂದು ಒಳ್ಳೆಯ ಅನುಭವ, ಸಿನಿಮಾ ನೋಡಿದ ಮೇಲೆ ಆಗುತ್ತದೆ. ಕೆಲವೊಂದು ಸಣ್ಣ ಪುಟ್ಟ ತಪ್ಪುಗಳು ಇದ್ದರೂ, ಯಾವುದು ಹೆಚ್ಚು ಕಿರಿಕಿರಿ ಎನಿಸುವುದಿಲ್ಲ. ಚಿತ್ರಮಂದಿರದ ಒಳಗೆ ದರ್ಶನ್ ಅಭಿಮಾನಿಯಾಗಿ ಹೋದರೂ, ಪೌರಾಣಿಕ ಚಿತ್ರದ ಪ್ರೇಮಿಯಾಗಿ ಹೋದರೂ, ಅಥವಾ ಸಾಮಾನ್ಯ ಪ್ರೇಕ್ಷಕನಾಗಿ ಹೋದರೂ ಸಿನಿಮಾ ಎಲ್ಲರನ್ನು ರಂಜಿಸುತ್ತದೆ.