Don't Miss!
- News ಕುಡಿಯುವ ನೀರಿಲ್ಲದೇ ಜನ ಬೆಂಗಳೂರಿಗೆ ಬಾಯ್ ಹೇಳುತ್ತಿದ್ದಾರೆ: ಆರ್.ಅಶೋಕ್
- Sports ರೋಹಿತ್ vs ಹಾರ್ದಿಕ್: ಸತತ ಸೋಲಿನ ನಡುವೆಯೇ ಮುಂಬೈ ಇಂಡಿಯನ್ಸ್ ಇಬ್ಭಾಗ!?
- Lifestyle ಕಂಡ ಕಂಡಲ್ಲಿ ಏಕೆ ಉಗುಳಬಾರದು ಗೊತ್ತಾ? ಈ ವಿಡಿಯೋ ನೋಡಿ..!
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ದರ್ಶನ್ ಸಿನಿಮಾ 1500 ಕೋಟಿ ಮಾಡುತ್ತೆ ಬರೆದಿಟ್ಟುಕೊಳ್ಳಿ' ರಾಜೇಂದ್ರ ಸಿಂಗ್ ಬಾಬು!
ಚಾಲೆಂಜಿಂಗ್ ಸ್ಟಾರ್ ದರ್ಶನ್ಗೆ ಅಭಿಮಾನಿಗಳ ಬಗ್ಗೆ ಮಾತಾಡೋ ಹಾಗೇ ಇಲ್ಲ. ದರ್ಶನ್ ಒಂದೇ ಒಂದು ಫೋಟೊ, ವಿಡಿಯೋ ಸಿಕ್ಕರೇ ಸಾಕು. ಅದನ್ನು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಮಾಡಿ ಬಿಡುತ್ತಾರೆ. ಇನ್ನು ಸಿನಿಮಾ ಅಂದರೆ ಕೇಳಬೇಕಾ? ಥಿಯೇಟರ್ ಮುಂದೆ ಅಭಿಮಾನಿಗಳ ಆರ್ಭಟ ಕೇಳಲೇ ಬೇಕಿಲ್ಲ.
ಬಾಕ್ಸಾಫೀಸ್ನಲ್ಲೂ ಅಷ್ಟೇ ದರ್ಶನ್ ಸಿನಿಮಾಗಳು ಭರ್ಜರಿ ಕಲೆಕ್ಷನ್ ಮಾಡಿವೆ. ಈಗಾಗಲೇ ಸ್ಯಾಂಡಲ್ವುಡ್ನಲ್ಲಿ ದರ್ಶನ್ ಅಭಿನಯಿಸಿದ ಎರಡು ಸಿನಿಮಾಗಳು ನೂರು ಕೋಟಿ ಕ್ಲಬ್ ಸೇರಿದ್ದು, 'ಕ್ರಾಂತಿ' ಸಿನಿಮಾ ಪ್ಯಾನ್ ಇಂಡಿಯಾ ಲೆವೆಲ್ನಲ್ಲಿ ಬಿಡುಗಡೆಯಾಗುತ್ತಾ? ಅಂತ ಅಭಿಮಾನಿಗಳು ಕಾದು ಕೂತಿದ್ದಾರೆ.
Megha Shetty: ದರ್ಶನ್ ಜೊತೆ ಸಿನಿಮಾ ಮಾಡ್ತಾರಾ ಜೊತೆ ಜೊತೆಯಲಿ ಮೇಘಾ ಶೆಟ್ಟಿ..?
Recommended Video
ಸದ್ಯ ಚಾಲೆಂಜಿಂಗ್ ಸ್ಟಾರ್ ದರ್ಶನ್ 'ಕ್ರಾಂತಿ' ಸಿನಿಮಾದಲ್ಲಿ ಬ್ಯುಸಿಯಾಗಿದ್ದು, ನಿರಂತರವಾಗಿ ಶೂಟಿಂಗ್ ನಡೆಯುತ್ತಿದೆ. ವಿ ಹರಿಕೃಷ್ಣ ಈ ಸಿನಿಮಾವನ್ನು ನಿರ್ದೇಶನ ಮಾಡುತ್ತಿದ್ದಾರೆ. ಈ ಮಧ್ಯೆ ಹಿರಿಯ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ಕೊಟ್ಟ ಹೇಳಿಕೆಯೊಂದು ಬೇಜಾನ್ ಸದ್ದು ಮಾಡುತ್ತಿದೆ.
ಶಾಲಾ ಮಕ್ಕಳಿಗೆ ಶೌಚಾಲಯ, ಯುಪಿಎಸ್, ಕಂಪ್ಯೂಟರ್ ನೀಡಿ ಸಹಾಯ ಮಾಡಿದ ದರ್ಶನ್!
₹1500 ಕೋಟಿ ಗಳಿಸುತ್ತೆ ದರ್ಶನ್ ಸಿನಿಮಾ
ಹಿರಿಯರ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು, ದರ್ಶನ್ಗಾಗಿ ಪ್ಯಾನ್ ಇಂಡಿಯಾ ಸಿನಿಮಾ ಮಾಡುವ ಸೂಚನೆ ನೀಡಿದ್ದಾರೆ. ಇತ್ತೀಚೆಗೆ ನಡೆದ ಎಸ್ ವಿ ರಾಜೇಂದ್ರ ಸಿಂಗ್ ಬಾಬು ನಿರ್ದೇಶನದ ವೀರ ಕಂಬಳ ಸಿನಿಮಾ ಪತ್ರಿಕಾಗೋಷ್ಠಿಯಲ್ಲಿ ದರ್ಶನ್ ಸಿನಿಮಾ ಬಗ್ಗೆ ಮಾತಾಡಿದ್ದಾರೆ. 'ವೀರ ಕಂಬಳ' ಸಿನಿಮಾದ ನಿರ್ಮಾಪಕ ಜೊತೆಗೂ ದರ್ಶನ್ಗೊಂದು ಸಿನಿಮಾ ಮಾಡುತ್ತೇವೆ. ಅದು ₹1500 ಕೋಟಿ ಗಳಿಕೆ ಮಾಡುತ್ತೆ ಎಂದು ಹೇಳಿದ್ದಾರೆ.
ರಾಜೇಂದ್ರ ಸಿಂಗ್ ಬಾಬು ಹೇಳಿದ್ದೇನು?
"ವೀರ ಕಂಬಳ ಸಿನಿಮಾ ನಿರ್ಮಾಪಕ ಅರುಣ್ ರೈ ತೋಡಾರ್ ಇನ್ನೂ ಒಳ್ಳೊಳ್ಳೆ ಸಿನಿಮಾ ಮಾಡಬೇಕು ಅಂತಿದ್ದಾರೆ. ನಾನು ಮತ್ತು ಅವರು ಸೇರಿಕೊಂಡು ದರ್ಶನ್ ಜೊತೆಗೂಡಿ ಒಂದು ಸಿನಿಮಾ ಮಾಡಬೇಕು ಅಂತ ಇದ್ದೇವೆ. ಅದು ಸುಮಾರು ₹1500 ಕೋಟಿ ಮಾಡುತ್ತೆ ಬರೆದಿಟ್ಟುಕೊಳ್ಳಿ. ನಾನು ದರ್ಶನ್ ಜೊತೆ ಸಿನಿಮಾ ಮಾಡುತ್ತೇನೆ." ಎಂದು ದರ್ಶನ್ ಪ್ಯಾನ್ ಇಂಡಿಯಾ ಸಿನಿಮಾ ಮಾಡುವ ಬಗ್ಗೆ ಸುಳಿವು ನೀಡಿದ್ದಾರೆ.
ದರ್ಶನ್ಗೆ ರಾಜೇಂದ್ರ ಸಿಂಗ್ ಬಾಬು ಕಥೆ
ದರ್ಶನ್ ಸಿನಿಮಾ ₹1500 ಕೋಟಿ ಗಳಿಸುತ್ತೆ ಎಂದು ಹೇಳಿರುವ ಹಿರಿಯ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು, ಈಗಾಗಲೇ ಕಥೆಯನ್ನೂ ಹೇಳಿದ್ದಾರಂತೆ. " ಆ ಸಿನಿಮಾವನ್ನು ಚೈನಾದಲ್ಲಿ ರಿಲೀಸ್ ಮಾಡುತ್ತೇವೆ. ಅಮೆರಿಕದಲ್ಲಿ ರಿಲೀಸ್ ಮಾಡುತ್ತೇವೆ. ಆಲ್ ಓವರ್ ಇಂಡಿಯಾ ರಿಲೀಸ್ ಮಾಡುತ್ತೇವೆ. ಯಾಕೆಂದರೆ, ದರ್ಶನ್ಗೆ ಆ ಒಂದು ಕ್ಯಾಪಾಸಿಟಿ ಇದೆ. ಆ ತರಹದ್ದೊಂದು ಕಥೆಯಿದೆ. ಈಗಾಗಲೇ ಅವರಿಗೆ ಹೇಳಿದ್ದೇನೆ. ಅವರು ಯಾವಾಗ ಡೇಟ್ ಕೊಡುತ್ತಾರೆ. ಅಂದು ಸಿನಿಮಾ ಮಾಡಿ ಇಂಟರ್ನ್ಯಾಷನಲ್ ಲೆವೆಲ್ನಲ್ಲಿ ರಿಲೀಸ್ ಮಾಡುತ್ತೇವೆ." ಎಂದು ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ಹೇಳಿದ್ದಾರೆ.
'ಕೆಜಿಎಫ್ 2' ಹೊಗಳಿದ ನಿರ್ದೇಶಕ
'ವೀರ ಕಂಬಳ' ಸಿನಿಮಾದ ಬಗ್ಗೆ ಮಾಹಿತಿ ನೀಡುವಾಗಲೇ ರಾಜೇಂದ್ರ ಸಿಂಗ್ ಬಾಬು 'ಕೆಜಿಎಫ್ 2' ಸಾಧನೆಯನ್ನು ಹೊಗಳಿದ್ದಾರೆ. 'ಕೆಜಿಎಫ್ 2' ಮಾಡಿದ ಸಾಧನೆಗೆ ಮೆಚ್ಚುಗೆ ಸೂಚಿಸಿದ್ದಾರೆ. ಇದೇ ವೇಳೆ 'ವೀರ ಕಂಬಳ' ಕೂಡ ತುಳು ಹಾಗೂ ಕನ್ನಡ ಭಾಷೆಯಲ್ಲಿ ಬಿಡುಗಡೆಯಾಗಲಿದ್ದು, ತೆಲುಗು, ತಮಿಳು, ಹಿಂದಿ ಹಾಗೂ ಇಂಗ್ಲಿಷ್ ಭಾಷೆಗೆ ಡಬ್ ಆಗಿ ಬಿಡುಗಡೆಯಾಗುತ್ತಿದೆ.