Don't Miss!
- Sports CSK vs LSG IPL 2024: ಮಾರ್ಕಸ್ ಸ್ಟೋಯಿನಿಸ್ ಆರ್ಭಟಕ್ಕೆ ಸಿಎಸ್ಕೆ ಥಂಡಾ; ಚೆನ್ನೈಗೆ ನೀರು ಕುಡಿಸಿದ ಲಕ್ನೋ
- News ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ: ಕಾರಣ ತಿಳಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ದರ್ಶನ್ ಗೂ ಮೊದಲು 'ಪೋರ್ಕಿ' ಆಫರ್ ಹೋಗಿದ್ದು 'ಈ ನಟ'ನಿಗೆ!
Recommended Video
ಮಹೇಶ್ ಬಾಬು ನಟನೆಯ 'ಪೋಕಿರಿ' ಸಿನಿಮಾ ಸೌತ್ ಇಂಡಿಯಾದಲ್ಲಿ ಆಗಿನ ಸಮಯಕ್ಕೆ ಟ್ರೆಂಡ್ ಹುಟ್ಟುಹಾಕಿತ್ತು. ತೆಲುಗಿನಲ್ಲಿ ಹಿಟ್ ಆದ ಬಳಿಕ ತಮಿಳಿನಲ್ಲೂ ಪೋಕಿರಿ ಸಿನಿಮಾ ಬಂತು. ಅಲ್ಲಿಯೂ ಸಿನಿಮಾ ಗೆದ್ದು ಬೀಗಿತು.
ಸೌತ್ ಇಂಡಸ್ಟ್ರಿಯ ಎರಡು ಭಾಷೆಯಲ್ಲಿ ಸಕ್ಸಸ್ ಆಗಿದ್ದ ಸಿನಿಮಾ ಹಿಂದಿಯಲ್ಲೂ ಬಂತು. ವಾಂಟೆಡ್ ಹೆಸರಿನಲ್ಲಿ ಸಲ್ಮಾನ್ ಖಾನ್ ಸಿನಿಮಾ ಮಾಡಿದ್ದರು. ಹೀಗೆ, ಬಹುಭಾಷೆಯಲ್ಲಿ ಸದ್ದು ಮಾಡಿದ್ದ ಪೋಕಿರಿ ಚಿತ್ರ ಸ್ಯಾಂಡಲ್ ವುಡ್ನಲ್ಲಿ ಪೊರ್ಕಿ ಆಯ್ತು.
ಮಲ್ಟಿಸ್ಟಾರ್ ಸಿನಿಮಾ ಮಾಡೋಕೆ ದರ್ಶನ್ ಹಿಂದೇಟು ಹಾಕುತ್ತಿರುವುದು ಇದೇ ಕಾರಣಕ್ಕೆ!
ಡಿ-ಬಾಸ್ ದರ್ಶನ್ ಈ ಚಿತ್ರಕ್ಕೆ ನಾಯಕರಾಗಿದ್ದರು. ಪ್ರಣಿತಾ ಸುಭಾಷ್ ಈ ಸಿನಿಮಾ ಮೂಲಕ ಕನ್ನಡ ಚಿತ್ರರಂಗ ಪ್ರವೇಶ ಮಾಡಿದರು. ಈಗ ಈ ಸಿನಿಮಾ ಬಗ್ಗೆ ಕುತೂಹಲ ಕಾರಿ ವಿಷ್ಯವೊಂದು ಬಹಿರಂಗವಾಗಿದೆ. ಏನದು?
ಪತ್ರಕರ್ತರು ಬಿಚ್ಚಿಟ್ಟ 'ಪೊರ್ಕಿ' ಕಥೆ
ಕನ್ನಡದ ಖ್ಯಾತ ಸಿನಿಮಾ ಪತ್ರಕರ್ತ ಗಣೇಶ್ ಕಾಸರಗೂಡು ಅವರು ಫಿಲ್ಮಿಬೀಟ್ ಕನ್ನಡಕ್ಕೆ ನೀಡಿದ ಸಂದರ್ಶನವೊಂದರಲ್ಲಿ ಪೊರ್ಕಿ ಚಿತ್ರದ ಬಗ್ಗೆ ಮಾತನಾಡಿದ್ದಾರೆ. ಪೊರ್ಕಿ ಸಿನಿಮಾ ಹೇಗೆ ಆಯ್ತು ಎನ್ನುವುದನ್ನು ವಿವರಿಸಿದ್ದಾರೆ. ದರ್ಶನ್ ಈ ಚಿತ್ರಕ್ಕೆ ಹೇಗೆ ನಾಯಕರಾದರು ಎಂದು ತಿಳಿಸಿದ್ದಾರೆ.
ಒಂದೇ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಶಿವಣ್ಣ ಮತ್ತು ದರ್ಶನ್: ಸ್ಟಾರ್ ನಟರು ಹೇಳಿದ್ದೇನು?
ದುನಿಯಾ ವಿಜಯ್ ಗೆ ಆಫರ್!
ಗಣೇಶ್ ಕಾಸರಗೂಡು ಅವರು ಹೇಳಿರುವ ಪ್ರಕಾರ, ಪೊರ್ಕಿ ಚಿತ್ರಕ್ಕಾಗಿ ದುನಿಯಾ ವಿಜಯ್ ಅವರನ್ನ ಸಂಪರ್ಕಿಸಲಾಗಿತ್ತಂತೆ. ದುನಿಯಾ ವಿಜಯ್ ಅವರು ಒಪ್ಪಿಕೊಂಡಿದ್ದರಂತೆ. ಆದರೆ, ಡೇಟ್ ಹೊಂದಾಣಿಕೆ ಆಗದ ಕಾರಣ, ಅವರು ಮಾಡಲು ಆಗಲಿಲ್ಲ ಎಂಬ ವಿಚಾರವನ್ನ ನೆನಪಿಸಿಕೊಂಡಿದ್ದಾರೆ.
ಎರಡು ತಿಂಗಳಲ್ಲಿ ಪೊರ್ಕಿ ಮುಗಿಯಿತು
''ಸ್ನೇಹಿತ ಸಂತೋಷ್ ಪೈಯವರ ಮೂಲಕ ದತ್ತಾತ್ರೇಯ ಎನ್ನುವವರು ತಮಗೆ ಒಂದು ಸಿನಿಮಾ ಮಾಡಿಕೊಡುವಂತೆ ವಿನಂತಿಸಿಕೊಂಡಿದ್ದರು. ಅವರಲ್ಲಿ ತೆಲುಗಿನ 'ಪೋಕಿರಿ' ಸಿನಿಮಾದ ರೈಟ್ಸ್ ಇತ್ತು. ನಾನು ಮೊದಲು ಸಂಪರ್ಕಿಸಿದ್ದು ದುನಿಯಾ ವಿಜಯ್ ಅವರನ್ನು. ಅವರು ಒಪ್ಪಿಕೊಂಡರೂ ಕೂಡ ಡೇಟ್ಸ್ ಕೊಡಲು ತಡಮಾಡಿದರು. ಹಾಗೆ ದರ್ಶನ್ ಅವರನ್ನು ಸಮೀಪಿಸಿದೆವು. ನಿರ್ಮಾಪಕರು ಚಿತ್ರ ಪೂರ್ತಿ ಮಾಡುತ್ತಾರೆ ಎನ್ನುವ ಭರವಸೆಯನ್ನು ನನ್ನಿಂದ ಪಡೆದ ಬಳಿಕ ದರ್ಶನ್ ಚಿತ್ರ ಮಾಡಲು ಒಪ್ಪಿಕೊಂಡರು. ಎಂ.ಡಿ ಶ್ರೀಧರ್ ಚಿತ್ರದ ನಿರ್ದೇಶಕರು. ಬಹುಶಃ ಎರಡೇ ತಿಂಗಳಲ್ಲಿ ಚಿತ್ರೀಕರಣ ಪೂರ್ತಿಗೊಳಿಸಿದಂಥ ಚಿತ್ರ ಅದೊಂದೇ ಇರಬೇಕು'' ಎಂದು ಗಣೇಶ್ ಕಾಸರಗೂಡು ಸಂದರ್ಶನದಲ್ಲಿ ನೆನಪಿಸಿಕೊಂಡಿದ್ದಾರೆ.
2 ವರ್ಷದ ನಂತರ ದರ್ಶನ್ ಸಿನಿಮಾಗೆ ಹಾಡು ಬರೆದ ಜಯಂತ್ ಕಾಯ್ಕಿಣಿ
ಗಲ್ಲಾಪೆಟ್ಟಿಗೆಯಲ್ಲಿ ಸದ್ದು ಮಾಡಿತ್ತು
'ಪೊರ್ಕಿ' ಸಿನಿಮಾ ಕನ್ನಡದಲ್ಲೂ ಅಷ್ಟೇ ಸದ್ದು ಮಾಡಿತ್ತು. ಸ್ಯಾಂಡಲ್ ವುಡ್ನಲ್ಲಿ ಶತದಿನ ಆಚರಿಸಿಕೊಂಡಿತ್ತು. ಅದರಲ್ಲೂ ನಟಿ ಪ್ರಣಿತಾ ಅವರಿಗೆ ಬ್ರೇಕ್ ಕೊಡ್ತು. ಈಗಲೂ ಪ್ರಣಿತಾ ಅವರು ಪೊರ್ಕಿ ನಟಿ ಎಂದೇ ಖ್ಯಾತಿ ಉಳಿಸಿಕೊಂಡಿದ್ದಾರೆ. 2010ರಲ್ಲಿ ತೆರೆಕಂಡಿದ್ದ ಈ ಚಿತ್ರವನ್ನ ಎಂ ಡಿ ಶ್ರೀಧರ್ ನಿರ್ದೇಶಿಸಿದ್ದು, ದತ್ತಾತ್ರೇಯ ಬಚ್ಚೇಗೌಡ ನಿರ್ಮಿಸಿದ್ದರು.