Don't Miss!
- Sports CSK vs LSG IPL 2024: ರುತುರಾಜ್ ಭರ್ಜರಿ ಶತಕ, ದುಬೆ ಸ್ಫೋಟಕ ಬ್ಯಾಟಿಂಗ್; ಲಕ್ನೋಗೆ ಬೃಹತ್ ಗುರಿ ನೀಡಿದ ಚೆನ್ನೈ
- News Narendra Modi: ಕರ್ನಾಟಕಕ್ಕೆ ಏಪ್ರಿಲ್ 29, 29ಕ್ಕೆ ಪ್ರಧಾನಿ ಮೋದಿ ಆಗಮನ
- Lifestyle UPSCಯಲ್ಲಿ 2ನೇ ರ್ಯಾಂಕ್ ಗಳಿಸಿದ ಸಾಧಕನ ಡ್ಯಾನ್ಸ್ ವೀಡಿಯೋ ವೈರಲ್: ಇವರ ಬದುಕಿನಲ್ಲಿ ನಡೆದಿದೆ ಹಲವು ದುರಂತಗಳು
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹೋಟೆಲ್ ಸಿಬ್ಬಂದಿ ಮೇಲೆ ದರ್ಶನ್ ಹಲ್ಲೆ ಪ್ರಕರಣ: ಸಂತ್ರಸ್ತನ ವಿಚಾರಣೆ ನಡೆಸಿದ ಪೊಲೀಸರು
ಹೋಟೆಲ್ ಸಿಬ್ಬಂದಿ ಮೇಲೆ ನಟ ದರ್ಶನ್ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರಿನ ಸಂದೇಶ್ ದಿ ಪ್ರಿನ್ಸ್ ಹೋಟೆಲ್ಗೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಹೊಡೆತ ತಿಂದ ನೌಕರ ಗಂಗಾಧರ್ ಅನ್ನು ವಿಚಾರಣೆ ಮಾಡಲಾಗುತ್ತಿದೆ.
ನಟ ದರ್ಶನ್ ಹಾಗೂ ಸ್ನೇಹಿತರು ಸಂದೇಶ್ ಪ್ರಿನ್ಸ್ ಹೋಟೆಲ್ ನಲ್ಲಿ ಸಪ್ಲೈಯರ್ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ನಿರ್ದೇಶಕ ಇಂದ್ರಜಿತ್ ಲಂಕೇಶ್ ಗೃಹ ಸಚಿವ ಬಸವರಾಜ ಬೊಮ್ಮಾಯಿಗೆ ದೂರು ನೀಡಿದ್ದರು. ಈ ಸಂಬಂಧ ತನಿಖೆ ನಡೆಸುವಂತೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಮೈಸೂರು ಪೊಲೀಸ್ ಆಯುಕ್ತರಿಗೆ ನಿನ್ನೆಯೇ ಸೂಚನೆ ನೀಡಿದ್ದರು.
ಈ ಹಿನ್ನೆಲೆಯಲ್ಲಿ ಇಂದು ಪೊಲೀಸರು ಸಂದೇಶ್ ಪ್ರಿನ್ಸ್ ಹೋಟೆಲ್ ಗೆ ಭೇಟಿ ನೀಡಿ ಪರಿಶೀಲಿಸಿದ್ದು, ಹೋಟೆಲ್ ಮಾಲೀಕ ಮತ್ತು ಸಿಬ್ಬಂದಿಗಳಿಂದ ಮಾಹಿತಿ ಸಂಗ್ರಹಿಸುತ್ತಿದ್ದಾರೆ.
ನಜರಬಾದ್ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಈ ಸಂಬಂಧ
ಸಂದೇಶ್ ಹೋಟೆಲ್ ಗೆ ಆಗಮಿಸಿದ ಎಸಿಪಿ ಶಶಿಧರ್, ಇನ್ಸ್ಪೆಕ್ಟರ್ ಶ್ರೀಕಾಂತ್ ಗಂಗಾಧರ್ ಅನ್ನು ಸತತ ಒಂದು ಗಂಟೆಗೂ ಹೆಚ್ಚು ಸಮಯದಿಂದ ವಿಚಾರಣೆ ನಡೆಸುತ್ತಿದ್ದಾರೆ. ವಿಚಾರಣೆಯನ್ನು ವಿಡಿಯೋ ರೆಕಾರ್ಡ್ ಹಾಗೂ ಲಿಖಿತ ದಾಖಲೆ ಮಾಡಿಕೊಳ್ಳುತ್ತಿದ್ದಾರೆ.
Recommended Video
ಎಸಿಪಿಯನ್ನ ಬರಮಾಡಿಕೊಂಡ ಹೋಟೆಲ್ ಮಾಲೀಕ ಸಂದೇಶ್. ಘಟನೆ ನಡೆದ ಸ್ಥಳಕ್ಕೆ ಎಸಿಪಿಯನ್ನ ಕರೆದೊಯ್ದು ಮಾಹಿತಿ ನೀಡಿದ್ದಾರೆ. ಹೈ ಪ್ರೋಫೈಲ್ ಪ್ರಕರಣ ಆದ ಕಾರಣ ಪೊಲೀಸರ ಮೇಲೆ ಹೆಚ್ಚಿನ ಒತ್ತಡ ಇದೆ. ಸಿಸಿಟಿವಿ ಪೋಟೇಜ್ ಅನ್ನು ಪೊಲೀಸರು ಪರಿಶೀಲಿಸುವ ಸಾಧ್ಯತೆ ಇದೆ.