Don't Miss!
- Sports CSK vs LSG IPL 2024: ಮಾರ್ಕಸ್ ಸ್ಟೋಯಿನಿಸ್ ಆರ್ಭಟಕ್ಕೆ ಸಿಎಸ್ಕೆ ಥಂಡಾ; ಚೆನ್ನೈಗೆ ನೀರು ಕುಡಿಸಿದ ಲಕ್ನೋ
- News ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ: ಕಾರಣ ತಿಳಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕಾವೇರಿ ತೀರ್ಪಿನ ಬಗ್ಗೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಪ್ರತಿಕ್ರಿಯೆ: ಏನಂದ್ರು.?
ಫೆಬ್ರವರಿ 16 ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಡಬಲ್ ಧಮಾಕ. ಇಂದು ದಾಸನ ಹುಟ್ಟುಹಬ್ಬದ ಸಂಭ್ರಮ. ಎಲ್ಲ ಅಭಿಮಾನಿಗಳು ದರ್ಶನ್ ನಿವಾಸದ ಎದುರು ಜಾತ್ರೆ ಮಾಡುತ್ತಿದ್ದು, ಅಭಿಮಾನಿಗಳ ಜೊತೆ ಸಂಭ್ರಮಿಸುತ್ತಿದ್ದರು ದರ್ಶನ್.
ಆದ್ರೆ, ಈ ಸಂತಸವನ್ನ ಮತ್ತಷ್ಟು ಹೆಚ್ಚಿಸಿದ್ದು ಕಾವೇರಿ ಜಲ ವಿವಾದದ ಬಗ್ಗೆ ಸುಂಪ್ರಿ ಕೋರ್ಟ್ ನೀಡಿದ ತೀರ್ಪು. ಈ ತೀರ್ಪಿನ ಬಗ್ಗೆ ಸ್ವತಃ ದರ್ಶನ್ ಸಂತಸ ವ್ಯಕ್ತಪಡಿಸಿದ್ದಾರೆ.
ಸುಪ್ರೀಂ ಕೋರ್ಟ್ ಕಾವೇರಿ ತೀರ್ಪಿಗೆ ಯಾರು, ಏನೆಂದರು?
ಸುಪ್ರೀಂ ಕೋರ್ಟ್ ನೀಡಿರುವ ತೀರ್ಪು ಕರ್ನಾಟಕದ ಪರವಾಗಿದ್ದು, ಅದರಲ್ಲೂ ಬೆಂಗಳೂರು ಜನರಿಗೆ ಸ್ವಲ್ಪ ಸಮಾಧಾನ ತರುವಂತಿದೆ ಎನ್ನಲಾಗಿದೆ. ಹಾಗಿದ್ರೆ, ಸರ್ವೋಚ್ಚ ನ್ಯಾಯಾಲಯ ನೀಡಿರುವ ಜಡ್ಜ್ ಮೆಂಟ್ ನಲ್ಲಿ ಏನಿದೆ? ಈ ತೀರ್ಪಿನ ಬಗ್ಗೆ ಬಾಕ್ಸ್ ಆಫೀಸ್ ಸುಲ್ತಾನ್ ಏನಂದ್ರು? ಮುಂದೆ ಓದಿ.....
ಕಾವೇರಿ ತೀರ್ಪು ಅದ್ರೆ ಭಯ
''ಕಾವೇರಿ ಗಲಾಟೆ ಸುಮಾರು ವರ್ಷದಿಂದ ನಡೆಯುತ್ತಲೇ ಇದೆ. ಕಾವೇರಿ ತೀರ್ಪು ಬಂತು ಅಂದ್ರೆ ಎಲ್ಲರಿಗೂ ಒಂಥರಾ ಭಯ ಶುರುವಾಗುತ್ತೆ. ಎಲ್ಲಿ ಬಂದ್ ಆಗುತ್ತೆ, ಎಲ್ಲಿ ಕರ್ಫ್ಯೂ ಹಾಕ್ತಾರೆ ಅಂತ'' - ದರ್ಶನ್, ನಟ
ದರ್ಶನ್ 'ರಿಯಲ್ ಹೀರೋ', 'ಚಿನ್ನದಂತ ವ್ಯಕ್ತಿ' ಎಂದ ಸ್ಟಾರ್ ನಟ, ಯಾರದು?
ಹುಟ್ಟುಹಬ್ಬಕ್ಕೆ ಸಿಹಿ ಸುದ್ದಿ
''ಆದ್ರೆ, ಈ ದಿನ ಎಲ್ಲರ ಮನೆಯಲ್ಲೂ ಹಬ್ಬದ ವಾತಾವರಣವಿರುತ್ತೆ. ಯಾಕಂದ್ರೆ ಒಳ್ಳೆ ಸುದ್ದಿ ಸಿಕ್ಕಿದೆ. ಅದರಲ್ಲೂ ನನ್ನ ಹುಟ್ಟುಹಬ್ಬದ ದಿನ ಈ ಸುದ್ದಿ ಸಿಕ್ಕಿರೋದು ನನಗೆ ಖುಷಿ ಕೊಟ್ಟಿದೆ'' ಎಂದು ದರ್ಶನ್ ಪ್ರತಿಕ್ರಿಯಿಸಿದ್ದಾರೆ.
ಕರ್ನಾಟಕಕ್ಕೆ ಸಿಹಿ ತಂದ ತೀರ್ಪು
ಕಾವೇರಿ ನೀರು ಹಂಚಿಕೆ ವಿಚಾರವಾಗಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಕರ್ನಾಟಕದ ಪರ ವಕೀಲರೂ ಹೇಳುವಂತೆ ಈ ತೀರ್ಪಿನಿಂದ ಕರ್ನಾಟಕ ಒಂದಿಷ್ಟು ನಿರಾಳ ಆಗಬಹುದಾಗಿದೆ. ಹದಿನಾಲ್ಕು ಟಿಎಂಸಿ ಅಡಿ ನೀರು ರಾಜ್ಯದ ಪಾಲಿಗೆ ಉಳಿತಾಯ ಆಗಲಿದ್ದು, ಬೆಂಗಳೂರಿಗೆ ಹೆಚ್ಚುವರಿಯಾಗಿ ನಾಲ್ಕು ಟಿಎಂಸಿ ಅಡಿ ನೀರು ದೊರೆಯಲಿದೆ.
ಕಾವೇರಿ ಅಂತಿಮ ತೀರ್ಪು: ತಮಿಳನಾಡಿಗೆ ಕಹಿ, ಕರ್ನಾಟಕಕ್ಕೆ ಸಿಹಿ
ತೀರ್ಪಿಗೆ ಸ್ವಾಗತ
ಸುಪ್ರೀಂ ಕೋರ್ಟ್ ನೀಡಿರುವ ತೀರ್ಪುನ್ನ ಕರ್ನಾಟಕ ಸರ್ಕಾರ ಸೇರಿದಂತೆ ರಾಜಕೀಯ ನಾಯಕರು ಸ್ವಾಗತಿಸಿದ್ದಾರೆ. ಇದು ಕರ್ನಾಟಕಕ್ಕೆ ಸಮಾಧಾನ ತಂದಿದೆ. ಪೂರ್ತಿ ತೀರ್ಪು ಕಾದು ನೋಡೋಣ ಎಂದು ಅಭಿಪ್ರಾಯ ಪಟ್ಟಿದ್ದಾರೆ.
ಸುಪ್ರೀಂ ಕೋರ್ಟ್ ಕಾವೇರಿ ತೀರ್ಪಿಗೆ ಯಾರು, ಏನೆಂದರು?