Don't Miss!
- News Namma Metro: ಈ ಮಾರ್ಗದ ಮೆಟ್ರೋ ನಿಲ್ದಾಣಗಳಲ್ಲೂ ಕ್ಯೂಆರ್ ಕೋಡ್ ಟಿಕೆಟ್ ವ್ಯವಸ್ಥೆ-ಎಲ್ಲೆಲ್ಲಿ? ಮಾಹಿತಿ ತಿಳಿಯಿರಿ
- Automobiles ಬಹುಕೋಟಿ ಬೆಲೆಯ ಕಾರುಗಳಿದ್ದರೂ ಸಾಮಾನ್ಯ ಮಾರುತಿ ಕಾರಿನಲ್ಲಿ ಓಡಾಡಿದ ರೋಹಿತ್ ಶರ್ಮಾ: ಕಾರಣವೇನು?
- Sports ಅಂತರಾಷ್ಟ್ರೀಯ ಕ್ರಿಕೆಟ್ ವೃತ್ತಿ ಜೀವನಕ್ಕೆ ವಿದಾಯ ಹೇಳಿದ ಪಾಕ್ ತಂಡದ ಮಾಜಿ ನಾಯಕಿ
- Lifestyle ಎಲೆಕೋಸಿಗೆ ಕೆಮಿಕಲ್ ಮಿಶ್ರಣ ಮಾಡ್ತಾರೆ ಹುಷಾರ್..! ವಿಡಿಯೋ ವೈರಲ್..!
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರಿಲ್ಯಾಕ್ಸ್ ಮೂಡ್ ನಲ್ಲಿ ದರ್ಶನ್: ತೋಟದ ಮನೆ ಪ್ರಾಣಿ-ಪಕ್ಷಿಗಳ ಜೊತೆ ಸಮಯ ಕಳೆಯುತ್ತಿರುವ ಡಿ ಬಾಸ್
ಚಾಲೆಂಜಿಂಗ್ ಸ್ಟಾರ್ ದರ್ಶನ್ ಪ್ರಕರಣ ಕ್ಷಣಕ್ಕೊಂದು ಟ್ವಿಸ್ಟ್ ಪಡೆದುಕೊಳ್ಳುತ್ತಿದೆ. ಒಂದೆಡೆ 25 ಕೋಟಿ ರೂ. ವಂಚನೆ ಯತ್ನ ಪ್ರಕರಣವಾದರೆ ಮತ್ತೊಂದೆಡೆ ಹೋಟೆಲ್ ಸಿಬ್ಬಂದಿ ಮೇಲೆ ಹಲ್ಲೆ ಆರೋಪ. ಈ ಪ್ರಕರಣಗಳು ಈಗ ದರ್ಶನ್ ಅವರನ್ನು ಸಂಕಷ್ಟಕ್ಕೆ ಸಿಲುಕಿಸಿದೆ.
ಈ ಬಗ್ಗೆ ಕ್ಷಣಕ್ಕೊಂದು ಹೇಳಿಕೆಗಳು ಹೊರಬರುತ್ತಿವೆ, ಕ್ಷಣಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ದರ್ಶನ್ ಮತ್ತು ಉಮಾಪತಿ ನಡುವಿನ ಆಸ್ತಿ ಖರೀದಿ ಗಲಾಟೆ, ಆಡಿಯೋ ವೈರಲ್, ಪೊಲೀಸ್ ತನಿಖೆ ಎಲ್ಲಾ ಬೆಳವಣಿಗೆಗಳು ನಡೆಯುತ್ತಿದೆ. ಆದರೆ ದರ್ಶನ್ ಮಾತ್ರ ಯಾವುದೇ ಪ್ರತಿಕ್ರಿಯೆ ನೀಡಿದೆ ಮೌನಕ್ಕೆ ಶರಣಾಗಿದ್ದಾರೆ.
ದರ್ಶನ್ ಈಗ ಎಲ್ಲಿದ್ದಾರೆ?
ವಂಚನೆ ಯತ್ನ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಮಾಧ್ಯಮದ ಮುಂದೆ ದಿಢೀರ್ ಪ್ರತ್ಯಕ್ಷರಾಗಿದ್ದ ದರ್ಶನ್ ಈಗ್ಯಾಕೆ ಸೈಲೆಂಟ್ ಆಗಿದ್ದಾರೆ ಎನ್ನುವ ಪ್ರಶ್ನೆ ಕೇಳಿಬರುತ್ತಿದೆ. ಅಲ್ಲದೆ ಇಷ್ಟೆಲ್ಲ ಬೆಳವಣಿಗೆ ನಡೆಯುತ್ತಿದ್ದರೂ ಸದ್ಯ ದರ್ಶನ್ ಎಲ್ಲಿದ್ದಾರೆ? ಏನ್ಮಾಡ್ತಿದ್ದಾರೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿದೆ.
ರಿಲ್ಯಾಕ್ಸ್ ಮೂಡ್ ನಲ್ಲಿ ದರ್ಶನ್
ದರ್ಶನ್ ಫಾರ್ಮ್ ಹೌಸ್ ನಲ್ಲಿರುವ ಫೋಟೋಗಳು ವೈರಲ್ ಆಗುವ ಮೂಲಕ ಕುತೂಹಲಕ್ಕೆ ತೆರೆಬಿದ್ದಿದೆ. ಚಾಲೆಂಜಿಂಗ್ ಸ್ಟಾರ್ ಸದ್ಯ ರಿಲ್ಯಾಕ್ಸ್ ಮೂಡ್ ನಲ್ಲಿದ್ದಾರೆ. ಹೊರಗಡೆ ನಡೆಯುತ್ತಿರುವ ಯಾವುದೇ ಬೆಳವಣಿಗೆಗಳ ಬಗ್ಗೆಯೂ ತಲೆಕೆಡಿಸಿಕೊಳ್ಳದೆ ಫಾರ್ಮ್ ಹೌಸ್ ನಲ್ಲಿ ಕೆಲಸದಲ್ಲಿ ಮಗ್ನರಾಗಿದ್ದಾರೆ.
ತೋಟದ ಮನೆ ಕೆಲಸದಲ್ಲಿ ದರ್ಶನ್ ಮಗ್ನ
ತೋಟದ ಮನೆಯ ಕೆಲಸಗಾರರ ಜೊತೆ ದರ್ಶನ್ ಸಮಯ ಕಳೆಯುತ್ತಿದ್ದಾರೆ. ಪ್ರಾಣಿ-ಪಕ್ಷಿಗಳ ಆರೈಕೆಯಲ್ಲಿ ನಿರತರಾಗಿದ್ದಾರೆ. ದರ್ಶನ್ ತೋಟದ ಮನೆಯಲ್ಲಿರುವ ಫೋಟೋಗಳು, ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
'ದೊಡ್ಮನೆ' ಆಸ್ತಿ ಖರೀದಿ ವಿವಾದ
ಇತ್ತ ದರ್ಶನ್ ಬಗ್ಗೆ ಪುನೀತ್ ಮತ್ತು ರಾಘವೇಂದ್ರ ರಾಜ್ ಕುಮಾರ್ ಅವರ ಆಸ್ತಿ ಖರೀದಿ ವಿಚಾರದ ಬಗ್ಗೆ ದೊಡ್ಡ ಚರ್ಚೆ ನಡೆಯುತ್ತಿದೆ. ಉಮಾಪತಿ ಖರೀದಿಸಿದ್ದ ಆಸ್ತಿಯ ಮೇಲೆ ಡಿ ಬಾಸ್ ಕಣ್ಣಿಟ್ಟಿದ್ದರು, ಉಮಾಪತಿಯಿಂದ ದೊಡ್ಮನೆ ಆಸ್ತಿ ಖರೀದಿಗೆ ದರ್ಶನ್ ಮುಂದಾಗಿದ್ದರು. ಆದರೆ ಉಮಾಪತಿ ಕೊಡಲು ಹಿಂದೇಟು ಹಾಕಿದ ಕಾರಣ ಇಬ್ಬರ ನಡುವೆ ಕಿತ್ತಾಟ, ವೈಮನಸ್ಸಿಗೆ ಕಾರಣವಾಗಿತ್ತು ಎನ್ನುವ ಮಾತುಗಳು ಕೇಳಿಬರುತ್ತಿದೆ.
'ದೊಡ್ಮನೆ' ಆಸ್ತಿ ಖರೀದಿ ಬಗ್ಗೆ ಉಮಾಪತಿ ಪ್ರತಿಕ್ರಿಯೆ
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ನಿರ್ಮಾಪಕ ಉಮಾಪತಿ, "ಆಸ್ತಿ ಖರೀದಿ ಮಾಡಿದ್ದು ಹೌದು, ಅದನ್ನು ದರ್ಶನ್ ಕೇಳಿದ್ದು ಹೌದು. ಆದರೆ ನಾನು ಆಸ್ತಿಯನ್ನು ಕೊಡಲ್ಲ ಎಂದಿದ್ದು ಹೌದು" ಎಂದಿದ್ದಾರೆ. "ಇದು ಹಳೆಯ ವಿಚಾರ. ವ್ಯವಹಾರ ಬೇರೆ ಸ್ನೇಹ ಬೇರೆ. ಈ ವಿಚಾರವನ್ನು ಇಟ್ಟುಕೊಂಡು ದರ್ಶನ್ ಹೀಗೆಲ್ಲ ಮಾಡುವವರಲ್ಲ" ಎಂದು ಉಮಾಪತಿ ಹೇಳಿದ್ದಾರೆ.
Recommended Video
ಹೋಟೆಲ್ ನಲ್ಲಿ ವಿಚಾರಣೆ ಮುಕ್ತಾಯ
ಮತ್ತೊಂದೆಡೆ ಹಲ್ಲೆ ಪ್ರಕರಣ ಸಂಬಂಧ ಸಂದೇಶ್ ಹೋಟೆಲ್ ನಲ್ಲಿ ಪೊಲೀಸ್ ವಿಚಾರಣೆ ಮುಕ್ತಾಯವಾಗಿದೆ. ಇಷ್ಟೆಲ್ಲ ಬೆಳವಣಿಗೆಗಳು ನಡೆಯುತ್ತಿದ್ದರೂ ಇದ್ಯಾವುದಕ್ಕೂ ದರ್ಶನ್ ಪ್ರತಿಕ್ರಿಯೆ ನೀಡದೆ ತೋಟದ ಮನೆಯಲ್ಲಿ ಪ್ರಾಣಿ- ಪಕ್ಷಿಗಳ ಜೊತೆ ಸಮಯ ಕಳೆಯುತ್ತಿದ್ದಾರೆ.