Don't Miss!
- News ಕಾಂಗ್ರೆಸ್ನಿಂದಲೇ 'ನೇಹಾ ಕೊಲೆ' ತನಿಖೆ ದಾರಿ ತಪ್ಪಿಸಲು ಯತ್ನ: ತಂದೆಯನ್ನೇ ಕೊಲ್ಲಲು ಹೋಗಿದ್ದ ಫಯಾಜ್: ನಿರಂಜನ್ ಹಿರೇಮಠ
- Automobiles ಭಾರತದಲ್ಲಿ 80 ಲಕ್ಷ ಸ್ಕೂಟರ್ ಮಾರಿದ ಜಪಾನ್ ಕಂಪನಿ: ವಿಶ್ವಗುರು ಭಾರತದಲ್ಲಿ ಎಲ್ಲವೂ ಸಾಧ್ಯ!
- Technology 6000mAh ಬ್ಯಾಟರಿಯ ಈ ಫೋನ್ ಶೀಘ್ರದಲ್ಲೇ ಖರೀದಿಗೆ ಲಭ್ಯ!..ಬೆಲೆ ಎಷ್ಟು?
- Sports ಧೋನಿ ಎದುರು ಬಂದಾಗ ಕೆ.ಎಲ್ ರಾಹುಲ್ ಕ್ಯಾಪ್ ತೆಗೆದಿದ್ದೇಕೆ?: ಕಾರಣವೇನು?
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಪ್ರಣಮ್ ದೇವರಾಜ್ ಬಗ್ಗೆ ದರ್ಶನ್ ಮೆಚ್ಚುಗೆ ಮಾತು
ಚಾಲೆಂಜಿಂಗ್ ಸ್ಟಾರ್ ತಾವು ಸಿನಿಮಾರಂಗದಲ್ಲಿ ಸ್ಟಾರ್ ಆದ ನಂತರ ತಮ್ಮ ಸುತ್ತಾ ಮುತ್ತಲಿರುವ ಸ್ನೇಹಿತರನ್ನು ಜೊತೆಯಲ್ಲೇ ಬೆಳೆಸಬೇಕೆಂಬ ಆಸೆಯನ್ನು ಹೊತ್ತುಕೊಂಡಿರುವ ಕಲಾವಿದ. ಅದರಂತೆಯೇ ತಮ್ಮ ಜೊತೆಯಲ್ಲಿರುವವರಿಗೆ ಹಾಗೂ ಅವರ ಸಿನಿಮಾಗಳಿಗೂ ಬೆಂಬಲ ನೀಡುತ್ತಾ ಬಂದಿದ್ದಾರೆ.
ಇತ್ತೀಚಿಗಷ್ಟೆ ನಟ ಪ್ರಣಮ್ ದೇವರಾಜ್ ಅಭಿನಯದ 'ಕುಮಾರಿ21ಎಫ್' ಸಿನಿಮಾದ ಟ್ರೇಲರ್ ಬಿಡುಗಡೆ ಮಾಡಿ ಪ್ರಣಮ್ ದೇವರಾಜ್ ಅವರನ್ನು ಚಿತ್ರರಂಗಕ್ಕೆ ಸಂತಸದಿಂದ ಬರಮಾಡಿಕೊಂಡಿದ್ದಾರೆ.
'ಕುಮಾರಿ21F' ಟ್ರೇಲರ್ ಬಿಡುಗಡೆ ಮಾಡಲಿರುವ ಡಿ ಬಾಸ್
ಇದೇ ವೇಳೆ ಪ್ರಣಮ್ ಹಾಗೂ ಪ್ರಜ್ವಲ್ ಇಬ್ಬರ ಜೊತೆಗಿನ ಒಡನಾಟದ ಬಗ್ಗೆಯೂ ದರ್ಶನ್ ಬಿಟ್ಟುಕೊಟ್ಟಿದ್ದಾರೆ. ಸಾಕಷ್ಟು ವರ್ಷಗಳಿಂದ ಪ್ರಜ್ವಲ್ ಹಾಗೂ ಪ್ರಣಮ್ ಅವರನ್ನು ನೋಡುತ್ತಾ ಬಂದಿದ್ದು ಪ್ರಣಮ್ ಚಿತ್ರರಂಗಕ್ಕೆ ಬರುತ್ತಿರುವುದು ಖುಷಿ ತಂದಿದೆ ಎಂದಿದ್ದಾರೆ.
'ಕುಮಾರಿ 21 ಎಫ್' ಈಗಿನ ಟ್ರೆಂಡ್ ಗೆ ತಕ್ಕಂತ ಕಥಾಹಂದರ ಹೊಂದಿರುವ ಸಿನಿಮಾ. ಸದ್ಯ ಚಿತ್ರೀಕರಣ ಕಂಪ್ಲೀಟ್ ಮಾಡಿ ತೆರೆಗೆ ಬರಲು ಸಿದ್ದವಾಗಿದೆ. ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆ ಹುಟ್ಟಿದೆ. ಇದೇ ಮೊದಲ ಬಾರಿಗೆ ಪ್ರಣಮ್ ನಾಯಕನಾಗಿ ನಟಿಸುತ್ತಿದ್ದು, ನಿಧಿ ಕುಶಾಲಪ್ಪ ನಾಯಕಿಯಾಗಿ ನಟಿಸಿದ್ದಾರೆ. ಶ್ರೀಮನ್ ವೇಮುಲ ಅವರು ಈ ಸಿನಿಮಾವನ್ನು ನಿರ್ದೇಶನ ಮಾಡಿದ್ದು, ಸಂಪತ್ ಕುಮಾರ್ ಈ ಸಿನಿಮಾಕ್ಕೆ ಹಣ ಹೂಡಿದ್ದಾರೆ.