Don't Miss!
- Sports CSK vs LSG IPL 2024: ಮಾರ್ಕಸ್ ಸ್ಟೋಯಿನಿಸ್ ಆರ್ಭಟಕ್ಕೆ ಸಿಎಸ್ಕೆ ಥಂಡಾ; ಚೆನ್ನೈಗೆ ನೀರು ಕುಡಿಸಿದ ಲಕ್ನೋ
- News ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ: ಕಾರಣ ತಿಳಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮಂಡ್ಯ ಪ್ರಚಾರದಲ್ಲಿ ಈ ನಾಲ್ಕು ಹೆಸರನ್ನ ಪದೇ ಪದೇ ನೆನಪಿಸುತ್ತಿರುವ ದರ್ಶನ್
Recommended Video
ಮಂಡ್ಯ ಚುನಾವಣಾ ಪ್ರಚಾರದಲ್ಲಿರುವ ನಟ ದರ್ಶನ್, ಬಹುತೇಕ ಕಡೆ ಒಂದು ಮಾತನ್ನ ಹೇಳುತ್ತಲೇ ಇದ್ದಾರೆ. ದರ್ಶನ್ ಹೋದ ಕಡೆಯಲ್ಲೆಲ್ಲಾ ಡಿ ಬಾಸ್, ಡಿ ಬಾಸ್ ಎಂದು ಘೋಷಣೆಗಳು ಮೊಳಗುತ್ತಿದೆ. ಹಾರಗಳು, ಪಟಾಕಿಗಳ ಸದ್ದು ಕೇಳುತ್ತಿದೆ. ಜೈಕಾರಗಳು ಹೆಚ್ಚುತ್ತಿದೆ.
ಇದೆಲ್ಲದರ ಮಧ್ಯೆ ದರ್ಶನ್ ಅವರು ನಾಲ್ಕು ಜನರನ್ನ ಪದೇ ಪದೇ ನೆನಪಿಸಿಕೊಳ್ಳುತ್ತಿದ್ದಾರೆ. ಡಾ ರಾಜ್, ಡಾ ವಿಷ್ಣುವರ್ಧನ್, ಶಂಕರ್ ನಾಗ್ ಮತ್ತು ಅಂಬರೀಶ್ ಹೆಸರುಗಳನ್ನ ಪ್ರಸ್ತಾಪಿಸುತ್ತಿದ್ದಾರೆ.
ಮತ್ತೆ 'ಜೋಡೆತ್ತುಗಳ' ಕಾಲೆಳೆದ ಸಿಎಂ ಕುಮಾರಸ್ವಾಮಿ
'ದರ್ಶನ್ ಅಲ್ಲ ದರ್ಶನ್ ಅಂತವರು ಯಾರೇ ಬಂದರೂ, ಇನ್ನೂ ನೂರು ವರ್ಷವಾದರೂ ಡಾ ರಾಜ್, ಡಾ ವಿಷ್ಣುವರ್ಧನ್, ಶಂಕರ್ ನಾಗ್ ಮತ್ತು ಅಂಬರೀಶ್ ಹೆಸರನ್ನು ಅಳಿಸುವುದಕ್ಕೆ ಯಾರಿಂದಲೂ ಸಾಧ್ಯವಿಲ್ಲ' ಎಂದು ನಟ ದರ್ಶನ್ ಹೇಳುತ್ತಿದ್ದಾರೆ.
ದರ್ಶನ್ ಪ್ರಚಾರ ಮಾಡುತ್ತಿರುವುದರ ಬಗ್ಗೆ ಪ್ರಶ್ನಿಸಿದ್ದಕ್ಕೆ ನಿಖಿಲ್ ಹೇಳಿದ್ದು ಹೀಗೆ
''ನಿಮ್ಮ ಬಳಿ ಏನೇ ಕೊಟ್ಟು ಏನು ಬೇಕಾದರೂ ತಗೋಬಹುದು. ಆದ್ರೆ, ನಮ್ಮ ಮನಸ್ಸಿನಲ್ಲಿರುವ ಅಭಿಮಾನಿವನ್ನ ತಗೊಳ್ಳುವುದಕ್ಕೆ ಆಗಲ್ಲ. ಈ ಎಲ್ಲರಿಗೂ ನಿಮ್ಮ ಸೇವೆ ಮಾಡಲು ಅವಕಾಶ ಕೊಟ್ಟಿದ್ದೀರಾ. ಈಗ ಸುಮಲತಾ ಅವರು ನಿಮ್ಮ ಸೇವೆ ಮಾಡಲು ಅವಕಾಶ ಕೇಳುತ್ತಿದ್ದಾರೆ. ಒಂದು ಅವಕಾಶ ಕೊಡಿ'' ಎಂದು ಪಕ್ಷೇತರ ಅಭ್ಯರ್ಥಿ ಸುಮಲತಾ ಪರ ಡಿ ಬಾಸ್ ಮತಯಾಚನೆ ಮಾಡುತ್ತಿದ್ದಾರೆ.
ಇನ್ನು ಸುಮಲತಾ ಪರ ಮೂರನೇ ದಿನ ಪ್ರಚಾರ ಮಾಡುತ್ತಿರುವ ದರ್ಶನ್, ಮಂಡ್ಯ, ಶ್ರೀರಂಗಪಟ್ಟಣದ ಹಳ್ಳಿಗಳಲ್ಲಿ ಮತಯಾಚನೆ ಮಾಡಿದ್ರು. ನೆಚ್ಚಿನ ನಟನಿಗೆ ಎಲ್ಲಾ ಕಡೆಯೂ ಭರ್ಜರಿ ಪ್ರತಿಕ್ರಿಯೆ ಸಿಕ್ಕಿದ್ದು, ಸುಮಲತಾ ಅವರನ್ನ ಗೆಲ್ಲಿಸುವ ಭರವಸೆ ನೀಡುತ್ತಿದ್ದಾರೆ.