Don't Miss!
- Technology Airtel: ಏರ್ಟೆಲ್ನಿಂದ ಹೊಸ ಅಂತಾರಾಷ್ಟ್ರೀಯ ರೋಮಿಂಗ್ ಪ್ಲ್ಯಾನ್ಗಳು! ಇವು ಹೇಗೆಲ್ಲಾ ಅನುಕೂಲ?
- News ಧಾರವಾಡ; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ವಾಪಸ್, ಕಣದಲ್ಲಿ 17 ಮಂದಿ
- Lifestyle ಮೊಲದ ಜೊತೆ ಓಡಿ ಮತ್ತೊಮ್ಮೆ ರೇಸ್ ಗೆದ್ದ ಆಮೆ..! ಈ ಕಥೆ ನಿಜವಾಗಿದ್ದು ಹೇಗೆ ನೋಡಿ.!
- Finance Bangalore Karaga: ಇಂದು ಈ ರಸ್ತೆಗಳಲ್ಲಿ ಸಂಚಾರ ಬಂದ್, ಬದಲಿ ಮಾರ್ಗ ವಿವರ
- Automobiles ಸಾಮಾನ್ಯರಂತೆ ಹಳ್ಳಿಯಲ್ಲಿರುವ ದೇಶದ 55ನೇ ಶ್ರೀಮಂತ ಶ್ರೀಧರ್ ವೆಂಬು: ಕಚೇರಿಗೆ ಹೋಗಲು ಎಲೆಕ್ಟ್ರಿಕ್ ಆಟೋ ಖರೀದಿ!
- Sports IPL 2024: ವಿರಾಟ್ ಕೊಹ್ಲಿ ವಿವಾದಾತ್ಮಕ ಔಟ್; ಅಂಪೈರಿಂಗ್ ವಿರುದ್ಧ ಕೆಂಡಕಾರಿದ ಮೊಹಮ್ಮದ್ ಕೈಫ್!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಾಡಪ್ರಭು ಕೆಂಪೇಗೌಡರ ನೆನೆದ ಚಾಲೆಂಜಿಂಗ್ ಸ್ಟಾರ್ ದರ್ಶನ್
Recommended Video
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಬೆಂಗಳೂರು ಕಟ್ಟಿ ಬೆಳೆಸಿದ ನಾಡಪ್ರಭು ಕೆಂಪೇಗೌಡ ಅವರನ್ನ ನೆನಪಿಸಿಕೊಂಡಿದ್ದಾರೆ. ಅದಕ್ಕೆ ಕಾರಣ ಜೂನ್ 27 ಇಂದು ಕೆಂಪೇಗೌಡ ಜಯಂತಿ. ಈ ವಿಶೇದ ದಿನದಂದು ಕೆಂಪೇಗೌಡರ ಕುರಿತು ಟ್ವೀಟ್ ಮಾಡಿರುವ ದರ್ಶನ್, ನಾಡದೊರೆಯನ್ನ ಸ್ಮರಿಸಿದ್ದಾರೆ.
''ನಾಡಪ್ರಭು ಕೆಂಪೇಗೌಡರು ಹಾಗೂ ಅವರ ಕುಟುಂಬ ಸಾಕಷ್ಟು ವರ್ಷಗಳು ಶ್ರಮಿಸಿ ತಮ್ಮ ಕನಸಿನ ರಾಜಧಾನಿ ಬೆಂಗಳೂರು ಸಾಮಾನ್ಯ ಜನರಿಗೆ ಆಸರೆಯಾಗಿರಲೆಂದು ಅಚ್ಚುಕಟ್ಟಾಗಿ ಎಲ್ಲಾ ವ್ಯವಸ್ಥೆಗಳೊಂದಿಗೆ ಕಟ್ಟಿಕೊಟ್ಟವರು. ಹಲವಾರು ದೇವಾಲಯಗಳು, ಕೆರೆಗಳು, ಮಹಾದ್ವಾರಗಳು, ಶಾಲೆಗಳನ್ನು ನಿರ್ಮಿಸಿದ ಕೀರ್ತಿ ಕೆಂಪೇಗೌಡರಿಗೆ ಸಲ್ಲುತ್ತದೆ'' ಎಂದು ಅವರ ಸಾಧನೆ ನೆನೆದಿದ್ದಾರೆ.
ಕನ್ನಡ ಚಿತ್ರರಂಗದಲ್ಲಿ ಹೊಸ ಇತಿಹಾಸ ಬರೆದ ದರ್ಶನ್ 'ಯಜಮಾನ'
''ಈ ಕನಸಿನ ನಗರಿಯನ್ನು ಗೌಡರ ಆಸೆ-ಆದರ್ಶಗಳೊಂದಿಗೆ ಶುದ್ಧವಾಗಿ, ಪರಿಸರ ಬದ್ಧವಾಗಿ ಕಾಪಾಡಿಕೊಂಡು ಬೆಳೆಸಿಕೊಂಡು ಹೋಗುವುದು ಇಲ್ಲಿ ವಾಸವಾಗಿರುವ ಪ್ರತಿಯೊಬ್ಬ ವ್ಯಕ್ತಿಯ ಕರ್ತವ್ಯವೂ ಹೌದು'' ಎಂದು ಸಾರ್ವಜನಿಕರಿಗೆ ಮನವರಿಕೆ ಮಾಡಿದ್ದಾರೆ.
ಅಂದ್ಹಾಗೆ, ದರ್ಶನ್ ಅಭಿನಯಿಸಿದ್ದ 'ಅಂಬರೀಶ' ಚಿತ್ರದಲ್ಲಿ ರೆಬೆಲ್ ಸ್ಟಾರ್ ಅಂಬರೀಶ್ ಕೆಂಪೇಗೌಡರ ಪಾತ್ರ ಮಾಡಿದ್ದರು. ಇದೇ ಚಿತ್ರದಲ್ಲಿ ದರ್ಶನ್ ಪಾತ್ರದ ಹೆಸರು ಕೂಡ ಕೆಂಪೇಗೌಡ ಎಂದೇ ಇತ್ತು.