twitter
    For Quick Alerts
    ALLOW NOTIFICATIONS  
    For Daily Alerts

    ಫೇಸ್‌ಬುಕ್‌ ಲೈವ್‌ನಲ್ಲಿ ಅಭಿಮಾನಿಗಳಿಗೆ ಮನವಿ ಮಾಡಿದ ದಾಸ ದರ್ಶನ್

    |

    ಅಪರೂಪಕ್ಕೆ ಇಂದು ನಟ ದರ್ಶನ್ ಫೇಸ್‌ಬುಕ್‌ ನಲ್ಲಿ ಲೈವ್ ಬಂದಿದ್ದರು. ಅವರು ಸಾಮಾಜಿಕ ಜಾಲತಾಣ ಬಳಸುವುದೇ ಕಡಿಮೆ ಅಂಥಹುದರಲ್ಲಿ ದರ್ಶನ್‌ ಫೇಸ್‌ಬುಕ್ ಲೈವ್ ಬರುತ್ತಿರುವುದು ಅಭಿಮಾನಿಗಳಿಗೆ ಆಶ್ಚರ್ಯವುಂಟು ಮಾಡಿತ್ತು.

    ಅಂತೆಯೇ ದರ್ಶನ್‌ ಅವರ ಫೇಸ್‌ಬುಕ್ ಲೈವ್ ಅನ್ನು ಸಾವಿರಾರು ಮಂದಿ ಫೇಸ್‌ಬುಕ್‌ನಲ್ಲಿ ನೋಡಿದರು. ಅಪರೂಪಕ್ಕೆ ಲೈವ್ ಬಂದ ದರ್ಶನ್, ಮಹತ್ವವಾದ ಸಂದೇಶವನ್ನು ತಮ್ಮ ಅಭಿಮಾನಿಗಳಿಗೆ ನೀಡಿದರು.

    ಒಟಿಟಿಯಲ್ಲಿ ದರ್ಶನ್ ಸಿನಿಮಾ ಬಿಡುಗಡೆ ಮಾಡುವುದಿಲ್ಲ: ಇಲ್ಲಿದೆ ಕಾರಣಒಟಿಟಿಯಲ್ಲಿ ದರ್ಶನ್ ಸಿನಿಮಾ ಬಿಡುಗಡೆ ಮಾಡುವುದಿಲ್ಲ: ಇಲ್ಲಿದೆ ಕಾರಣ

    ಫೆಬ್ರವರಿ 16 ರಂದು ದರ್ಶನ್ ಹುಟ್ಟುಹಬ್ಬವಿದ್ದು, ಆ ದಿನ ಯಾವ ಅಭಿಮಾನಿಗಳೂ ಸಹ ಮನೆಯ ಬಳಿ ಬರಬೇಡಿರೆಂದು ನಟ ದರ್ಶನ್ ಫೇಸ್‌ಬುಕ್ ಲೈವ್‌ ನಲ್ಲಿ ಮನವಿ ಮಾಡಿದರು. ಇದೇ ವಿಷಯವನ್ನು ತಿಳಿಸಲೆಂದೇ ತಾವು ಫೇಸ್‌ಬುಕ್ ಲೈವ್ ಬಂದಿರುವುದಾಗಿ ಹೇಳಿದರು ನಟ ದರ್ಶನ್.

    ನಿಮ್ಮ ಕುಟುಂಬವನ್ನು ಮೊದಲು ನೋಡಿಕೊಳ್ಳಿ: ದರ್ಶನ್

    ನಿಮ್ಮ ಕುಟುಂಬವನ್ನು ಮೊದಲು ನೋಡಿಕೊಳ್ಳಿ: ದರ್ಶನ್

    ಕೊರೊನಾ ಕಾರಣದಿಂದಾಗಿ ಯಾರ ಪರಿಸ್ಥಿತಿಯೂ ಚೆನ್ನಾಗಿಲ್ಲ. ಯಾರ ಜೇಬಿನಲ್ಲೂ ಹಣವಿಲ್ಲ. ಅಭಿಮಾನಿಗಳು ನೀವು ಕರ್ನಾಟಕದ ಮೂಲೆ-ಮೂಲೆಗಳಿಂದ ಹಣ, ಸಮಯ ಖರ್ಚು ಮಾಡಿಕೊಂಡು ಹುಟ್ಟುಹಬ್ಬಕ್ಕೆ ಬರುತ್ತೀರ. ಆದರೆ ಈ ವರ್ಷ ಅದು ಬೇಡ ಎಂದರು ದರ್ಶನ್.

    ಎಲ್ಲಿದ್ದೀರೊ, ಅಲ್ಲಿಂದಲೇ ಹಾರೈಸಿ: ದರ್ಶನ್

    ಎಲ್ಲಿದ್ದೀರೊ, ಅಲ್ಲಿಂದಲೇ ಹಾರೈಸಿ: ದರ್ಶನ್

    ಎಲ್ಲರೂ ಸಂಕಷ್ಟದಲ್ಲಿದ್ದಾರೆ. ನಿಮ್ಮ ಕುಟುಂಬವನ್ನು ಮೊದಲು ನೋಡಿಕೊಳ್ಳಿ, ಅದರ ಮುಂದೆ ಬೇರೆ ಇನ್ನಾವ ಜವಾಬ್ದಾರಿಗಳೂ ಇಲ್ಲ. ನೀವು ಸೆಟ್ಲ್ ಆಗಿ. ಈ ಬಾರಿ ನನ್ನ ಹುಟ್ಟುಹಬ್ಬಕ್ಕೆ ಯಾರೂ ಏನೂ ಆಚರಣೆ ಮಾಡುವುದು ಬೇಡ ಎಲ್ಲಿದ್ದೀರೊ ಅಲ್ಲಿಂದಲೇ ಹಾರೈಸಿ ಸಾಕು ಎಂದು ಮನವಿ ಮಾಡಿದರು ನಟ ದರ್ಶನ್.

    ರಾಬರ್ಟ್ ಸಿನಿಮಾ ಬಿಡುಗಡೆ ಯಾವಾಗ: ದರ್ಶನ್ ಹೇಳಿದ್ದು ಹೀಗೆ?ರಾಬರ್ಟ್ ಸಿನಿಮಾ ಬಿಡುಗಡೆ ಯಾವಾಗ: ದರ್ಶನ್ ಹೇಳಿದ್ದು ಹೀಗೆ?

    ಫೆಬ್ರವರಿ 15- 18 ಊರಿನಲ್ಲಿ ಇರುವುದಿಲ್ಲ: ದರ್ಶನ್

    ಫೆಬ್ರವರಿ 15- 18 ಊರಿನಲ್ಲಿ ಇರುವುದಿಲ್ಲ: ದರ್ಶನ್

    ನಾನು ಸಹ ಫೆಬ್ರವರಿ 15 ರಿಂದ 18 ರ ವರೆಗೆ ಊರಿನಲ್ಲಿ ಇರುವುದಿಲ್ಲ. ಅಷ್ಟೇ ಅಲ್ಲದೆ ಮನೆಯ ಬಳಿ ಹುಟ್ಟುಹಬ್ಬ ಆಚರಿಸಲು ಪೊಲೀಸರು ಅನುಮತಿ ಕೊಡುವುದಿಲ್ಲ. ಸಿಸಿಟಿವಿ ಗಳನ್ನು ಹಾಕಿಸಬೇಕಾಗುತ್ತದೆ, ಬ್ಯಾರಿಕೇಡ್‌ಗಳನ್ನು ಹಾಕಿಸಬೇಕಾಗುತ್ತದೆ. ಈ ಬಾರಿ ಅದೆಲ್ಲ ಯಾವುದು ಬೇಡ, ಮುಂದಿನ ವರ್ಷ ಅದ್ಧೂರಿಯಾಗಿ ಆಚರಿಸೋಣ ಎಂದರು ದರ್ಶನ್.

    ನಾನೇ ಹೋಗಿ ಭೇಟಿ ಮಾಡುತ್ತೇನೆ: ದರ್ಶನ್

    ನಾನೇ ಹೋಗಿ ಭೇಟಿ ಮಾಡುತ್ತೇನೆ: ದರ್ಶನ್

    ಪ್ರತಿ ಊರಿಗೆ ನಾನೇ ಹೋಗಿ ಅಭಿಮಾನಿ ಸಂಘಗಳನ್ನು ಭೇಟಿ ಮಾಡುವ ಯೋಚನೆ ಇದೆ. ಆದರೆ ಅದೆಲ್ಲವೂ ಮಾರ್ಚ್ ನಂತರವೇ. ಈ ನಡುವೆ ಭಾನುವಾರಗಳಂದು ನಾನೇ ಕೆಲವು ಸಂಘಗಳಿಗೆ ತಿಳಿಸುತ್ತೇನೆ ಅವರು ಬಂದು ಭೇಟಿ ಮಾಡಬಹುದು ಎಂದು ಮಾಹಿತಿ ನೀಡಿದರು ದರ್ಶನ್.

    English summary
    Darshan requests his fans to not celebrate his birthday today. He also request fans to not come near his home on that day.
    Sunday, January 10, 2021, 13:20
    IIFA

    Kannada Photos

    Go to : More Photos
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    X