ಹುಟ್ಟುಹಬ್ಬದ ಆಚರಣೆ ಬಗ್ಗೆ ಅಭಿಮಾನಿಗಳಲ್ಲಿ ದರ್ಶನ್ ಮನವಿ
Recommended Video

ನಟ ಅಂಬರೀಶ್ ಅವರ ನಿಧನದ ಹಿನ್ನಲೆಯಲ್ಲಿ ಕನ್ನಡದ ಅನೇಕ ಕಲಾವಿದರು ಈ ವರ್ಷದ ತಮ್ಮ ಹುಟ್ಟುಹಬ್ಬವನ್ನು ಆಚರಣೆ ಮಾಡುತ್ತಿಲ್ಲ. ಇದೀಗ ಚಾಲೆಂಜಿಂಗ್ ಸ್ಟಾರ್ ದರ್ಶನ್ ಕೂಡ ತಮ್ಮ ಹುಟ್ಟುಹಬ್ಬದ ಬಗ್ಗೆ ಅಭಿಮಾನಿಗಳಿಗೆ ಮನವಿ ಮಾಡಿದ್ದಾರೆ.
ಫೆಬ್ರವರಿ 16 ರಂದು ತಮ್ಮ ಹುಟ್ಟುಹಬ್ಬದ ಇದ್ದು, ಈ ವರ್ಷ ಅಂಬಿ ಅಪ್ಪಾಜಿ ನಮ್ಮನ್ನು ಅಗಲಿಸುವ ಕಾರಣ ಹುಟ್ಟುಹಬ್ಬವನ್ನು ಸರಳವಾಗಿ ಆಚರಣೆ ಮಾಡಿ ಎಂದು ಅಭಿಮಾನಿಗಳಲ್ಲಿ ಕೇಳಿಕೊಂಡಿದ್ದಾರೆ. ಬ್ಯಾನರ್, ಕೇಕ್ ಹಾಗೂ ಹಾರಗಳನ್ನು ತರುವ ಬದಲು ಅದೇ ಹಣವನ್ನು ಅನಾಥ ಮಕ್ಕಳ ವಿಧ್ಯಾಭ್ಯಾಸಕ್ಕಾಗಿ ಮೀಸಲಿಡಿ ಎಂದು ತಿಳಿಸಿದ್ದಾರೆ.

ಪಟಾಕಿ ಹೊಡೆದು ಅಕ್ಕ ಪಕ್ಕದ ಮನೆಗಳಿಗೆ ತೊಂದರೆ ನೀಡುವುದು, ಅವರ ಸ್ವತ್ತುಗಳನ್ನು ಹಾಳು ಮಾಡುವುದು, ಇಂತಹ ಅನುಚಿತ ವರ್ತನೆ ತೋರಬಾರದು ಎಂದಿದ್ದಾರೆ.
''ನನ್ನ ಹುಟ್ಟುಹಬ್ಬದ ದಿನ ನೀವೆಲ್ಲ ದೂರ ದೂರದ ಊರುಗಳಿಂದ ಬಂದು ಶುಭಕೋರಿ ನಿಮ್ಮದೆ ಹುಟ್ಟುಹಬ್ಬ ಎನ್ನುವಂತೆ ಸಂಭ್ರಮಿಸುವುದು ನನ್ನ ಯಾವುದೋ ಜನ್ಮದ ಪುಣ್ಯ.'' ಎಂದು ತಮ್ಮ ಸಕಲ ಅಭಿಮಾನಿಗಳಿಗೆ ದರ್ಶನ್ ಧನ್ಯವಾದ ತಿಳಿಸಿದ್ದಾರೆ.


Click it and Unblock the Notifications











