Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರಸ್ತೆ ಅಪಘಾತದ ಬಗ್ಗೆ ಅಭಿಮಾನಿಗಳಿಗೆ ದರ್ಶನ್ ಮನವಿ
Recommended Video
ರಸ್ತೆ ಅಪಘಾತದ ಬಗ್ಗೆ ನಟ ದರ್ಶನ್ ಟ್ವೀಟ್ ಮಾಡಿದ್ದಾರೆ. ಈ ಮೂಲಕ ರಸ್ತೆಯಲ್ಲಿ ಸಂಚಾರ ಮಾಡುವಾಗ ಸುರಕ್ಷಿತವಾಗಿ ಇರಲು ಅಭಿಮಾನಿಗಳಿಗೆ ತಿಳಿಸಿದ್ದಾರೆ.
ಕಳೆದ ವರ್ಷ ದರ್ಶನ್ ಪುತ್ರ ವಿನೀಶ್ ಹುಟ್ಟುಹಬ್ಬಕ್ಕೆ ದೂರದ ಊರಿನಿಂದ ಅಭಿಮಾನಿಗಳು ಆಗಮಿಸಿದ್ದರು. ಈ ವೇಳೆ ರಸ್ತೆ ಅಪಘಾತ ಸಂಭವಿಸಿತ್ತು. ಇದರಲ್ಲಿ ಅಭಿಮಾನಿಯೊಬ್ಬರು ನಿಧನ ಹೊಂದಿದರು. ಈ ದುರ್ಘಟನೆಯನ್ನು ದರ್ಶನ್ ಇನ್ನು ಮರೆತಿಲ್ಲ. ಈ ವರ್ಷ ವಿನೀಶ್ ಹುಟ್ಟುಹಬ್ಬ ಹತ್ತಿರದಲ್ಲಿ ಇದ್ದು, ಕಾರ್ಯಕ್ರಮಕ್ಕೆ ಆಗಮಿಸುವ ಅಭಿಮಾನಿಗಳಿಗೆ ದರ್ಶನ್ ಮನವಿ ಮಾಡಿದ್ದಾರೆ.
'ಯಜಮಾನ' ಸಿನಿಮಾ ಸ್ಫೂರ್ತಿ: 'ನಂದಿ ಬ್ರಾಂಡ್' ಶುರು ಮಾಡಿದ ಅಭಿಮಾನಿ
''ಅಭಿಮಾನಿಗಳಲ್ಲಿ ಕಳಕಳಿಯ ಮನವಿ. ಗಾಡಿಯಲ್ಲಿ ಚಲಿಸುವಾಗ ದಯಮಾಡಿ ಅತೀ ಜಾಗೃಕತೆಯಿಂದ ಓಡಿಸಿ. ನಿಮ್ಮ ಕುಟುಂಬ ನಿಮ್ಮ ಮೇಲೆ ಅವಲಂಬಿತವಾಗಿರುತ್ತದೆ ಎಂಬುದನ್ನು ಎಂದೂ ಮರೆಯದಿರಿ. ಕೆಲವೊಮ್ಮೆ ನಮ್ಮ ಪ್ರಜ್ಞೆಯಲ್ಲಿದ್ದರೂ ಸಹ ದುರದೃಷ್ಟವಶಾತ್ ಅಪಘಾತಗಳು ಸಂಭವಿಸುತ್ತವೆ.'' ಎಂದು ಟ್ವೀಟ್ ಮಾಡಿದ್ದಾರೆ.
''ಕಳೆದ ವರ್ಷ ವಿನೀಶ್ ಹುಟ್ಟುಹಬ್ಬದ ವೇಳೆ ನಡೆದ ರಸ್ತೆ ಅಪಘಾತದಲ್ಲಿ ಅಭಿಮಾನಿಯೊಬ್ಬ ಸಾವನಪ್ಪಿದ್ದನ್ನು ಇನ್ನು ಅರಗಿಸಿಕೊಳ್ಳಲಾಗುತ್ತಿಲ್ಲ. ದೂರದ ಸ್ಥಳಗಳಿಗೆ ಹೋಗುವಾಗ ದ್ವಿಚಕ್ರ ವಾಹನಗಳನ್ನು ಆದಷ್ಟು ಉಪಯೋಗಿಸಬೇಡಿ. ಈ ವರ್ಷವೂ ಹುಟ್ಟುಹಬ್ಬಕ್ಕೆ ಬರುವವರು ದಯಮಾಡಿ ಎಚ್ಚರಿಕೆ ವಹಿಸಿ'' ಎಂದು ದರ್ಶನ್ ಹೇಳಿದ್ದಾರೆ.
ಮತ್ತೊಂದು ಸ್ಟೈಲಿಶ್ ವಾಹನದ ಮೇಲೆ ಡಿ-ಬಾಸ್ ಕಣ್ಣು.!
ಅಂದಹಾಗೆ, ನಟ ದರ್ಶನ್ ಸದ್ಯ 'ರಾಬರ್ಟ್' ಹಾಗೂ 'ಒಡೆಯ' ಸಿನಿಮಾಗಳಲ್ಲಿ ಬ್ಯುಸಿ ಇದ್ದಾರೆ. ಕನ್ನಡ ರಾಜ್ಯೋತ್ಸವದ ವಿಶೇಷವಾಗಿ ಒಡೆಯ ಸಿನಿಮಾದ ಟೀಸರ್ ಬಿಡುಗಡೆ ಆಗಲಿದೆ.