Don't Miss!
- News Karnataka Lok Sabha Election 2024: ಏ.26ಕ್ಕೆ ಕರ್ನಾಟಕ ಮೊದಲ ಹಂತದ ಮತದಾನ: 14 ಕ್ಷೇತ್ರ, ಅಭ್ಯರ್ಥಿ, ಪೈಪೋಟಿ ಬಗ್ಗೆ ಮಾಹಿತಿ
- Lifestyle ಐಸ್ ಟೀ ಮಾಡುವುದು ಹೇಗೆ? ಇಲ್ಲಿದೆ ಪರ್ಫೆಕ್ಟ್ ಐಸ್ ಟೀ ರೆಸಿಪಿ
- Automobiles HSRP ನಂಬರ್ ಪ್ಲೇಟ್ನಲ್ಲಿ ನಡೆಯುತ್ತಿದೆ ಭಾರೀ ಮೋಸ: ಬುಕ್ ಮಾಡದವರು ಇದನ್ನು ಗಮನಿಸಿ!
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕಾರ್ ಓಡಿಸುವಾಗ ದಯವಿಟ್ಟು ಅಕ್ಕ-ಪಕ್ಕ ಬರಬೇಡಿ; ಅಭಿಮಾನಿಗಳಿಗೆ ದರ್ಶನ್ ಮನವಿ
ಚಾಲೆಂಜಿಂಗ್ ದರ್ಶನ್ ನಟನೆಯ ರಾಬರ್ಟ್ ಸಿನಿಮಾದ ಪ್ರಿ ರಿಲೀಸ್ ಕಾರ್ಯಕ್ರಮ ಹುಬ್ಬಳ್ಳಿಯಲ್ಲಿ ಅದ್ದೂರಿಯಾಗಿ ನೆರವೇರಿದೆ. ಹುಬ್ಬಳ್ಳಿ ರೈಲ್ವೇ ಮೈದಾನದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಸೇರಿದ್ದು, ರಾಬರ್ಟ್ ಕಾರ್ಯಕ್ರಮವನ್ನು ಯಶಸ್ವಿಯಾಗಿಸಿದ್ದಾರೆ.
Recommended Video
ರಾಬರ್ಟ್ ಕಾರ್ಯಕ್ರಮದಲ್ಲಿ ದರ್ಶನ್ ಏನು ಮಾತನಾಡಲಿದ್ದಾರೆ ಎನ್ನುವುದು ಅಭಿಮಾನಿಗಳ ಕುತೂಹಲವಾಗಿತ್ತು. ಡಿ ಬಾಸ್ ವೇದಿಕೆ ಮೇಲೆ ಬರುತ್ತಿದ್ದಂತೆ ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿತ್ತು. ಅಭಿಮಾನಿಗಳ ಡಿ ಬಾಸ್ ಜೈಕಾರದ ಕೂಗು ಜೋರಾಗಿತ್ತು. ವೇದಿಕೆ ಮೇಲೆ ಚಪ್ಪಲಿ ಬಿಟ್ಟು ಮಾತು ಪ್ರಾರಂಭಿಸಿದ ದರ್ಶನ್ ಉತ್ತರ ಕರ್ನಾಟಕ ಮಂದಿಯ ಪ್ರೀತಿಯನ್ನು ಹಾಡಿ ಹೊಗಳಿದರು.
'ನಾವು ಯಾವ ಜಾತಿಗೋಸ್ಕರ ಹುಟ್ಟಿಲ್ಲ'- ಹುಬ್ಬಳ್ಳಿಯಲ್ಲಿ ದರ್ಶನ್ ಖಡಕ್ ಮಾತು
ಇದೇ ಸಮಯದಲ್ಲಿ ದರ್ಶನ್ ಅಭಿಮಾನಿಗಳಲ್ಲಿ ಬಹುಮುಖ್ಯವಾದ ಮನವಿ ಮಾಡಿಕೊಂಡಿದ್ದಾರೆ. ನನ್ನ ಕಾರನ್ನು ದಯವಿಟ್ಟು ಚೇಸ್ ಮಾಡಬೇಡಿ ಎಂದು ಕೇಳಿಕೊಂಡಿದ್ದಾರೆ. ಮುಂದೆ ಓದಿ...
ಅಭಿಮಾನಿಗಳಲ್ಲಿ ದರ್ಶನ್ ಮನವಿ
'ಸೆಲೆಬ್ರಿಟಿಗಳಿಗೆ ಒಂದು ಮಾತು ಕೇಳುತ್ತೇನೆ. ಅಭಿಮಾನಿಗಳಿಗೆ ನಾನು ಬೈದಿದ್ದೀನಿ. ತಲೆಮೇಲೆ ಹೊಡೆದಿದ್ದೀನಿ. ಇವತ್ತು ಕರ್ನಾಟಕದಾದ್ಯಂತ ಇರುವ ಅಭಿಮಾನಿಗಳಿಗೆ ಈ ಸಂದೇಶ ಹೋಗಲಿ ಎಂದು ಹೇಳುತ್ತಿದ್ದೀನಿ. ದಯಮಾಡಿ ನಾನು ಕಾರು ಓಡಿಸುವಾಗ ನನ್ನ ಅಕ್ಕ ಅಪ್ಪ ಬೈಕ್ ನಲ್ಲಿ ಬರಬೇಡಿ. ನಿಮ್ಮ ಪಾದಾರವಿಂದಗಳಿಗೆ ನಾನು ಕೇಳಿಕೊಳ್ಳುತ್ತಿದ್ದೇನೆ' ಎಂದು ಹೇಳಿದ್ದಾರೆ.
ಜೀವನ ಹಾಳುಮಾಡಿಕೊಳ್ಳಬೇಡಿ
'ಯಾಕಾಗಿ ಹೇಳುತ್ತಿದ್ದೇನೆ ಎಂದರೆ ನೀವು ಮೊಬೈಲ್ ಇಟ್ಟುಕೊಂಡು ಬರೋದು, ಒಂದು ಫೋಟೋ, ಲೈಕ್ಸ್, ಕಾಮೆಂಟ್ಸ್ ಇಂದ ಜೀವನ ಹಾಳು ಮಾಡಿಕೊಳ್ಳಬೇಡಿ. ನಾವು 110, 120 ವೇಗದಲ್ಲಿ ಹೋಗುತ್ತಿರುತ್ತೇವೆ. ಪಕ್ಕದಲ್ಲಿ ನೀವು ಬೈಕ್ ನಲ್ಲಿ ಬರ್ತೀರಾ, ದಯವಿಟ್ಟು ಯೋಚನೆ ಮಾಡಿ.
'ರಾಬರ್ಟ್' ಪ್ರಿ ರಿಲೀಸ್ ಕಾರ್ಯಕ್ರಮ: ಉತ್ತರ ಕರ್ನಾಟಕ ಜನರ ಮುಂದೆ ಚಪ್ಪಲಿ ಬಿಟ್ಟು ಮಾತನಾಡಿದ್ದೇಕೆ ದರ್ಶನ್?
ಏನಾದ್ರು ಆದರೆ ನಿಮ್ಮ ಕುಟುಂಬದ ಗತಿ ಏನು?
'ಬದುಕಿದ್ರೆ ಮತ್ತೊಮ್ಮೆ ನನ್ನನ್ನು ನೋಡುತ್ತೀರಾ. ನನ್ನ ಕಥೆ ಹಾಳಾಗಿ ಹೋಗಲಿ. ನೀವು ನನ್ನನ್ನು ನೋಡದೆ ಇದ್ರು ಪರವಾಗಿಲ್ಲ. ಮನೆಯಲ್ಲಿ ನಿಮ್ಮನ್ನು ನಂಬಿಕೊಂಡ ವಯಸ್ಸಾದ ತಂದೆ-ತಾಯಿ, ಕುಟುಂಬದವರು ಇರುತ್ತಾರೆ ನಿಮಗೇನಾದ್ರು ಹೆಚ್ಚು ಕಮ್ಮಿ ಆದರೆ ಅವರ ಗತಿ ಏನು?' ಎಂದು ಕೇಳಿದ್ದಾರೆ.
ಹೀಗೆ ಹೇಳಿದೆ ಅಂತ ಬೇಸರ ಮಾಡಿಕೊಳ್ಳಬೇಡಿ
'ಏನಾದರು ಆದರೆ ನಿಮ್ಮ ಮನೆಯವರು ಸಾಯೋವರೆಗೂ ನನ್ನನ್ನು ದೂಷಿಸುತ್ತಾರೆ. ಅದು ನಿಮಗೆ ಇಷ್ಟಾನಾ. ನಾನು ನಿಮ್ಮಲ್ಲಿ ಕೇಳಿಕೊಳ್ಳುವುದು ಇಷ್ಟೆ ದಯಮಾಡಿ ಅಕ್ಕ ಪಕ್ಕದಲ್ಲಿ ಬರಬೇಡಿ. ಬದುಕಿದ್ರೆ ನಿನ್ನೊಂದು ಸಾರಿ ನನ್ನನ್ನು ನೋಡುತ್ತೀರಿ. ದಯಮಾಡಿ ಇದನ್ನು ಕೇಳಿಸಿಕೊಳ್ಳಿ. ಹೀಗೆ ಹೇಳಿದೆ ಅಂತ ಬೇಸರ ಮಾಡಿಕೊಳ್ಳಬೇಡಿ' ಎಂದು ಹುಬ್ಬಳ್ಳಿ ನೆಲದಲ್ಲಿ ನಿಂತು ದರ್ಶನ್ ಎಲ್ಲಾ ಅಭಿಮಾನಿಗಳಿಗೆ ಮನವಿ ಮಾಡಿಕೊಂಡಿದ್ದಾರೆ.