Don't Miss!
- Lifestyle ರುಚಿ ರುಚಿಯ ಸ್ಪೆಷಲ್ ಅಂಬೂರ್ ಬಿರಿಯಾನಿ ಮಾಡಿ ನೋಡಿ..! ಇಲ್ಲಿದೆ ರೆಸಿಪಿ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Automobiles ಪ್ರಸಿದ್ಧ ಪುಣ್ಯಕ್ಷೇತ್ರ ಶೃಂಗೇರಿ ಶಾರದಾಂಬಾ ದರ್ಶನಕ್ಕೆ ತೆರಳಬೇಕೇ.. ಹಾಗಾದರೆ ಈ ಸ್ಟೋರಿ ನೋಡಿ
- News ಮೀಸಲಾತಿ ಅಸ್ತ್ರ ಪ್ರಯೋಗಿಸಿದ ಮೋದಿ; ಮುಸ್ಲಿಂ ಸಮುದಾಯಕ್ಕೆ 4% ಮೀಸಲಾತಿ: ಸಿದ್ದರಾಮಯ್ಯ
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- Technology Qubo InstaView ವಿಡಿಯೋ ಡೋರ್ ಫೋನ್ ಲಾಂಚ್!..ಬೆಲೆ ಎಷ್ಟು, ಫೀಚರ್ಸ್ ಏನಿವೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ತನ್ನ ಹೆಸರು ಬಳಸಿ ಕೆಟ್ಟ ಕೆಲಸ ಮಾಡಿದವರಿಗೆ ಡಿ ಬಾಸ್ ವಾರ್ನಿಂಗ್
Recommended Video
ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣದಲ್ಲಿ ಮನಸ್ಸು ಬಂದಂತೆ ಪೋಸ್ಟ್ ಹಾಕುವವರು. ಟ್ರೋಲ್ ಮಾಡುವವರು ಹೆಚ್ಚಾಗಿದ್ದಾರೆ. ಅದಷ್ಟೇ ಅಲ್ಲದೆ ಸ್ಟಾರ್ ನಟ-ನಟಿಯರ ಹೆಸರನ್ನ ಬಳಸಿಕೊಂಡು ಅಕೌಂಟ್ ಕ್ರಿಯೇಟ್ ಮಾಡಿ ಸಮಸ್ಯೆ ಹುಟ್ಟು ಹಾಕುವವರು ಜಾಸ್ತಿ ಆಗುತ್ತಿದ್ದಾರೆ. ಸದ್ಯ ಇಂಥದೊಂದು ಸಮಸ್ಯೆ ಎದುರಾಗಿದ್ದು ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಗೆ .
ದಾಸನ ಹೆಸರಿನಲ್ಲಿ ಫೇಕ್ ಅಕೌಂಟ್ ಕ್ರಿಯೇಟ್ ಮಾಡಿ ಆ ಮೂಲಕ ಸಿ ಎಂ ಕುಮಾರಸ್ವಾಮಿ ಅವರನ್ನು ಅವಹೇಳನ ಮಾಡಿರುವ ವಿಚಾರ ಬೆಳಗ್ಗೆಯಷ್ಟೇ ತಿಳಿದು ಬಂದಿತ್ತು. ಈ ವಿಚಾರ ಸುದ್ದಿ ಆಗುತ್ತಿದ್ದಂತೆ ನಟ ದರ್ಶನ್ ತಮ್ಮ ಫೇಸ್ ಬುಕ್ ಹಾಗೂ ಟ್ವಿಟ್ಟರ್ ನಲ್ಲಿ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.
ದರ್ಶನ್ ಹೆಸರಿನಲ್ಲಿ ಸಿಎಂ ಕುಮಾರಸ್ವಾಮಿಗೆ ಅವಹೇಳನ
"ಇತ್ತೀಚಿಗೆ ತಿಳಿದು ಬಂದಿರುವಂತೆ ನನ್ನ ಹೆಸರಲ್ಲಿ ಕೆಲವು ಕಿಡಿಗೇಡಿಗಳ ಅನೇಕ ನಕಲಿ ಫೇಸ್ ಬುಕ್ ಖಾತೆಗಳಿವೆ. ಈ ಖಾತೆಗಳಿಂದ ಕೆಲವು ವ್ಯಕ್ತಿಗಳ ಮೇಲೆ ಅವಹೇಳನಕಾರಿ ಹೇಳಿಕೆಗಳು ನೀಡಿರುವುದು ನಮ್ಮ ಗಮನಕ್ಕೆ ಬಂದಿದೆ. ಸೈಬರ್ ಕ್ರೈಂ ಡಿಪಾರ್ಟ್ಮೆಂಟ್ ಈ ರೀತಿ ಸೋಶಿಯಲ್ ಮೀಡಿಯಾ ದುರ್ಬಳಕೆ ಮಾಡಿದವರ ವಿರುದ್ಧ ಸೂಕ್ತ ಕ್ರಮ ಕೈ ಕೊಳ್ಳುವುದಾಗಿ ಹೇಳಿದ್ದಾರೆ. ದಯಮಾಡಿ ಯಾರೂ ಇಂತಹ ಕೆಲಸಗಳಲ್ಲಿ ತೊಡಗಬೇಡಿ ಎಂದು ಕಳಕಳಿಯ ವಿನಂತಿ"
ತಮ್ಮ ಹೆಸರಿನಲ್ಲಿ ಫೇಕ್ ಅಕೌಂಟ್ ಕ್ರಿಯೇಟ್ ಆಗಿದೆ ಎನ್ನುವುದು ತಿಳಿದ ನಂತರ ದರ್ಶನ್ ಸೈಬರ್ ಕ್ರೈಂ ನವರಿಗೆ ತಿಳಿಸಿದ್ದಾರೆ. ಆದಷ್ಟು ಬೇಗ ಆ ಅಕೌಂಟ್ ಯಾರು ಹುಟ್ಟು ಹಾಕಿದ್ದಾರೆ ಎನ್ನುವುದು ಕೂಡ ಪತ್ತೆ ಆಗಲಿದೆ.