Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಎಕ್ಸ್ ಕ್ಲೂಸಿವ್: ದರ್ಶನ್ 51ನೇ ಸಿನಿಮಾದ ಬಗ್ಗೆ ಇದ್ದ ಡೌಟ್ ಕ್ಲಿಯರ್.!
''ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ '51'ನೇ ಚಿತ್ರವನ್ನ ಯಾರು ನಿರ್ಮಾಣ ಮಾಡುತ್ತಾರೆ.?'' - ಈ ಒಂದು ಪ್ರಶ್ನೆ ಸಿನಿಪ್ರಿಯರ ವಲಯದಲ್ಲಿ ಮೂಡಲು ಕಾರಣ ಪೋಸ್ಟರ್ ಫಜೀತಿ.!
ನಿಮ್ಮೆಲ್ಲರ ಪ್ರೀತಿಯ 'ದಾಸ'ನ ಹುಟ್ಟುಹಬ್ಬದಂದು (ಫೆಬ್ರವರಿ 16), ಬಿ.ಸುರೇಶ್ ರವರು ದರ್ಶನ್ ರವರ 51ನೇ ಸಿನಿಮಾ ಮಾಡುವುದಾಗಿ ಅನೌನ್ಸ್ ಮಾಡಿದ್ರು. ಹಾಗೇ, ಪತ್ರಿಕೆಗಳಲ್ಲಿ ದರ್ಶನ್ ರವರ 51ನೇ ಚಿತ್ರದ ಬಗ್ಗೆ ಸಂದೇಶ್ ನಾಗರಾಜ್ ಕೂಡ ಜಾಹೀರಾತು ಕೊಟ್ಟಿದ್ದರು. ಇವರಿಬ್ಬರಲ್ಲಿ ದರ್ಶನ್ 51ನೇ ಚಿತ್ರಕ್ಕೆ ಬಂಡವಾಳ ಹಾಕುವವರು ಯಾರು ಅಂತ ಜನ ತಲೆಗೆ ಹುಳಬಿಟ್ಟುಕೊಂಡಿದ್ದರು. ಅಂಥವರಿಗೆ ಇಲ್ಲಿದೆ ಉತ್ತರ...
ದರ್ಶನ್ 51ನೇ ಚಿತ್ರ ಫಿಕ್ಸ್.!
ಚಾಲೆಂಜಿಂಗ್ ಸ್ಟಾರ್ ದರ್ಶನ್ ರವರ 51ನೇ ಚಿತ್ರಕ್ಕೆ ನಿರ್ಮಾಪಕರು ಫಿಕ್ಸ್ ಆಗಿದ್ದಾರೆ. ಬಿಗ್ ಬಜೆಟ್ ನಲ್ಲಿ ಈ ಚಿತ್ರ ಕೂಡ ತಯಾರಾಗಲಿದೆ.[ದರ್ಶನ್ 'ಬಾಸ್' ಹುಟ್ಟುಹಬ್ಬ ವಿಶೇಷ: 51ನೇ ಸಿನಿಮಾ ಅನೌನ್ಸ್]
ದರ್ಶನ್ 51ನೇ ಚಿತ್ರಕ್ಕೆ ನಿರ್ಮಾಪಕರು ಯಾರು.?
ದರ್ಶನ್ ರವರ ಅತ್ಯಾಪ್ತ ನಿರ್ಮಾಪಕ ಸಂದೇಶ್ ನಾಗರಾಜ್ ರವರು 'ದಾಸ'ನ 51ನೇ ಚಿತ್ರಕ್ಕೆ ಬಂಡವಾಳ ಹಾಕಲಿದ್ದಾರೆ.['ಡಿ' ಬಾಸ್ 51ನೇ ಸಿನಿಮಾ ಯಾರಿಗೆ.? ಪೋಸ್ಟರ್ ತಂದಿಟ್ಟ ಅನುಮಾನ.!]
ಟೈಟಲ್ ಕೂಡ ಫಿಕ್ಸ್ ಆಗಿದೆ
ಸಂದೇಶ್ ನಾಗರಾಜ್ ನಿರ್ಮಾಣ ಮಾಡಲಿರುವ ದರ್ಶನ್ ರವರ 51ನೇ ಚಿತ್ರಕ್ಕೆ 'ಒಡೆಯರ್' ಅಂತ ಟೈಟಲ್ ಕೂಡ ಫಿಕ್ಸ್ ಅಗಿದೆ.[ನಿಮ್ಮನ್ನೆಲ್ಲ ನಿಬ್ಬೆರಗಾಗಿಸುವ ನ್ಯೂಸ್ ಇದು.! ಅದು ದರ್ಶನ್ ಕುರಿತು.!]
ಸಂದೇಶ್ ನಾಗರಾಜ್ - ದರ್ಶನ್ ಕಾಂಬಿನೇಷನ್
ಈಗಾಗಲೇ ಚಾಲೆಂಜಿಂಗ್ ಸ್ಟಾರ್ ಗಾಗಿ 'ಪ್ರಿನ್ಸ್', 'ಐರಾವತ' ಚಿತ್ರಗಳನ್ನ ನಿರ್ಮಿಸಿರುವ ಸಂದೇಶ್ ನಾಗರಾಜ್ ಹಾಗೂ ದರ್ಶನ್ ನಡುವೆ ಉತ್ತಮ ಬಾಂಧವ್ಯ ಇದೆ.
ದರ್ಶನ್ ಗೆ ದುಬಾರಿ ಉಡುಗೊರೆ ಕೊಟ್ಟ ಸಂದೇಶ್ ನಾಗರಾಜ್
ದರ್ಶನ್ ರವರ 40ನೇ ಹುಟ್ಟುಹಬ್ಬಕ್ಕಾಗಿ ಒಂದುವರೆ ಕೋಟಿ ರೂಪಾಯಿ ಮೌಲ್ಯದ Porsche ಕಾರ್ ನ ಉಡುಗೊರೆಯಾಗಿ ಸಂದೇಶ್ ನಾಗರಾಜ್ ಕೊಟ್ಟಿದ್ದಾರೆ.