Don't Miss!
- News RCB: ಆರ್ಸಿಬಿ ಫ್ರಾಂಚೈಸ್ನಿಂದ ಬೆಂಗಳೂರಿನ ಮೂರು ಕೆರೆಗಳ ಪುನಶ್ಚೇತನ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Lifestyle ಪರಿಸರ ದಿನ: ಇಂದು ನೀವು ಹೀಗೆ ಮಾಡಿದರೆ ಮುಂದಿನ ಪೀಳಿಗೆಗೆ ನೀಡುವ ದೊಡ್ಡ ಆಸ್ತಿ
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಚಿತ್ರ ಬಿಡುಗಡೆಗೂ ಮುಂಚೆಯೇ ಕಟೌಟ್ ಹಾಕಿಸಿಕೊಂಡ 'ಡಿ ಬಾಸ್'
ಸಿನಿಮಾ ಬಿಡುಗಡೆಯಾಗುವ ದಿನಗಳಲ್ಲಿ ಥಿಯೇಟರ್ ಮುಂದೆ ಕಟೌಟ್ ನಿಲ್ಲಿಸೋದು, ಅದಕ್ಕೆ ಹಾಲಿನಿಂದ ಅಭಿಷೇಕ ಮಾಡುವುದು, ದೊಡ್ಡ-ದೊಡ್ಡ ಹಾರಗಳನ್ನ ಹಾಕುವುದು ವಾಡಿಕೆ.
ಆದರೆ ಚಿತ್ರ ಬಿಡುಗಡೆಗೂ ಮುಂಚೆಯೇ ಕಟೌಟ್ ಹಾಕಿಸಿಕೊಂಡ ನಾಯಕ ಕನ್ನಡ ಚಿತ್ರರಂಗದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಎನ್ನುವ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ದರ್ಶನ್ ಅಭಿನಯದ 'ಕುರುಕ್ಷೇತ್ರ' ಚಿತ್ರ ಇನ್ನೂ ಶೂಟಿಂಗ್ ಹಂತದಲ್ಲಿ ಇರುವಾಗಲೇ ಸಿನಿಮಾದ ಕಟೌಟ್ ನಿಲ್ಲಿಸಿದ್ದಾರೆ ಅಭಿಮಾನಿಗಳು.
ಇತ್ತೀಚಿಗಷ್ಟೇ ಮೈಸೂರಿನಲ್ಲಿ ಚಾಮುಂಡೇಶ್ವರಿ ಯುವಕರ ಬಳಗದಿಂದ ಕನ್ನಡ ರಾಜ್ಯೋತ್ಸವವನ್ನ ಆಯೋಜನೆ ಮಾಡಲಾಗಿತ್ತು. ಸಮಾರಂಭಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ ದರ್ಶನ್ ಅವರನ್ನ ಬರಮಾಡಿಕೊಳ್ಳಲು ಅಭಿಮಾನಿಗಳು ಕುರುಕ್ಷೇತ್ರ ಚಿತ್ರದ ಎತ್ತರವಾದ ಕಟೌಟ್ ಅನ್ನ ನಿಲ್ಲಿಸಿದ್ದರು.
ದರ್ಶನ್ ಜೊತೆಯಲ್ಲಿ ನೆನಪಿರಲಿ ಪ್ರೇಮ್, ಧ್ರುವ ಸರ್ಜಾ, ದಿನಕರ್ ತೂಗುದೀಪ್, ಸೃಜನ್ ಲೋಕೇಶ್ ಇನ್ನೂ ಅನೇಕ ನಟರ ಕಟೌಟ್ ಗಳನ್ನ ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ನಿಲ್ಲಿಸಲಾಗಿತ್ತು.
ಸದ್ಯ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮುನಿರತ್ನ ನಿರ್ಮಾಣದ ಕುರುಕ್ಷೇತ್ರ ಸಿನಿಮಾದ ಚಿತ್ರೀಕರಣದಲ್ಲಿ ಬ್ಯುಸಿ ಆಗಿದ್ದಾರೆ. ಮುಂದಿನ ವರ್ಷ ಮಾರ್ಚ್ ಅಂತ್ಯದ ವೇಳೆಗೆ ಚಿತ್ರ ಪ್ರೇಕ್ಷಕರ ಮುಂದೆ ಬರಲಿದೆ.