Don't Miss!
- Technology iPhones: ಬೇಕಿತ್ತಾ ಇದೆಲ್ಲ? ನಕಲಿ ಐಫೋನ್ ಮೂಲಕ ಆಪಲ್ಗೆ ಪಂಗನಾಮ ಹಾಕಿದವನಿಗೆ ಜೈಲೂಟ
- News ಎನ್ಕೌಂಟರ್ ಮಾಡುವುದಾಗಿ ಪ್ರಿಯಾಂಕ್ ಖರ್ಗೆಗೆ ಜೀವ ಬೆದರಿಕೆ!
- Lifestyle ಮದ್ಯದ ಅಮಲಲ್ಲಿ ತೇಲಾಡುತ್ತಿದ್ದ ಶಿಕ್ಷಕನಿಗೆ ಮಕ್ಕಳಿಂದಲೇ ಚಪ್ಪಲಿ ಏಟು..!
- Finance 2.3 ಲಕ್ಷ ರೂಪಾಯಿಗೆ 9 ನಿಂಬೆಹಣ್ಣು ಹರಾಜು, ಏನಿದರ ವಿಶೇಷತೆ ತಿಳಿಯಿರಿ
- Sports RR vs DC: ಐಪಿಎಲ್ನಲ್ಲಿ ಇತಿಹಾಸ ನಿರ್ಮಿಸಲು ಸಜ್ಜಾದ ರಿಷಭ್ ಪಂತ್
- Automobiles ಬುಕ್ ಮಾಡಿದ ರೈಲಿನ ಸೀಟಿನಲ್ಲಿ ಬೇರೆಯವರು ಕೂತಿದ್ರೆ ಏನ್ ಮಾಡಬೇಕು ಗೊತ್ತಾ? ಸಿಂಪಲ್ ಪರಿಹಾರ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಟ ದರ್ಶನ್+ ಡೈರೆಕ್ಟರ್ ಸೂರಿ= ಪ್ಯಾನ್ ಇಂಡಿಯಾ ಮೂವಿ!
ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಕನ್ನಡದ ಸ್ಟಾರ್ ನಟರಲ್ಲಿ ಒಬ್ಬರು. ಅತಿ ಹೆಚ್ಚು ಮಾಸ್ ಫಾಲೊಯಿಂಗ್ ಇರುವ ನಟ ದರ್ಶನ್. ಹಾಗಾಗಿ ದರ್ಶನ್ ಯಾವುದೇ ಸಿನಿಮಾ ಮಾಡಿದರು ನಿರ್ಮಾಪಕರಿಗೆ ನಷ್ಟದ ಕಷ್ಟ ಇರುವುದಿಲ್ಲ. ಹಾಗಾಗಿ ದರ್ಶನ್ ಜೊತೆಗೆ ಸಿನಿಮಾ ಮಾಡಲು ನಿರ್ಮಾಪಕರು ಕಾಯುತ್ತಾ ಇರುತ್ತಾರೆ.
ಕೆಜಿಎಫ್ ಸಿನಿಮಾದ ಬಳಿಕ ನಟ ದರ್ಶನ್ ಪ್ಯಾನ್ ಇಂಡಿಯಾ ಸಿನಿಮಾದ ಬಗ್ಗೆ ಒಂದಷ್ಟು ಸುದ್ದಿಗಳು ಹರಿದಾಡುತ್ತಾ ಇವೆ. ಇನ್ನು 'ಕ್ರಾಂತಿ' ಸಿನಿಮಾ ಪ್ಯಾನ್ ಇಂಡಿಯಾ ಸಿನಿಮಾ ಆಗಲಿದ್ದು, ಸಿನಿಮಾದಲ್ಲಿ ದರ್ಶನ್ ಅಬ್ಬರಿಸಲಿದ್ದಾರೆ.
'ಕ್ರಾಂತಿ'ಯಲ್ಲಿ ಅಭಿನಯ, ಅಭಿರಾಮಿ ಮಾತು: ದರ್ಶನ್ ಭೇಟಿಯ ಕಾರಣ ಇಲ್ಲಿದೆ
'ಕ್ರಾಂತಿ' ಬಿಟ್ಟು ಮತ್ತೊಂದು ಪ್ಯಾನ್ ಇಂಡಿಯಾ ಸಿನಿಮಾಗೂ ನಟ ದರ್ಶನ್ ತೆರೆಮರೆಯಲ್ಲಿ ತಯಾರಿ ನಡೆಸಿದ್ದಾರೆ ಎನ್ನುವ ಸುದ್ದಿ ಗಾಂಧಿ ನಗರದಲ್ಲಿ ಹಬ್ಬಿದೆ. ಚಿತ್ರದ ನಿರ್ದೇಶನಕ ಬಗ್ಗೆಯೂ ಸುದ್ದಿ ಹಬ್ಬಿದ್ದು, ದುನಿಯಾ ಸೂರಿ ದರ್ಶನ್ಗೆ ನಿರ್ದೇಶನ ಮಾಡಲಿದ್ದಾರೆ ಎನ್ನಲಾಗುತ್ತಿದೆ.
ಸೂರಿ ನಿರ್ದೇಶನದಲ್ಲಿ ದರ್ಶನ್ ಪ್ಯಾನ್ ಇಂಡಿಯಾ ಸಿನಿಮಾ!
ನಟ ದರ್ಶನ್ ಮತ್ತು ದುನಿಯಾ ಸೂರಿ ಜೊತೆಯಾಗಿ ಸಿನಿಮಾ ಮಾಡುತ್ತಾರೆ ಎನ್ನುವ ಬಗ್ಗೆ ಹಲವು ಬಾರಿ ಸುದ್ದಿ ಆಗಿದೆ. ಆದರೆ ಬಹುತೇಕ ಸ್ಕ್ರಿಪ್ಟ್ ಓಕೆ ಆಗಿ ಲಾಕ್ ಆಗಿದೆ ಎನ್ನಲಾಗಿದೆ. ಇವರಿಬ್ಬರ ಕಾಂಬಿನೇಶನ್ನಲ್ಲಿ ಸಿನಿಮಾ ಬರುತ್ತೆ ಎನ್ನುವ ಸುದ್ದಿಯೇ ಕ್ರೇಜ್ ಹುಟ್ಟು ಹಾಕುತ್ತೆ. ಸುಕ್ಕಾ ಸೂರಿ, ಮಾಸ್ ನಟ ದರ್ಶನ್ ಒಂದಾದರೆ ಸಿನಿಮಾ ಮತ್ತೊಂದು ರೇಂಜಿಗೆ ಇರುತ್ತೆ ಎನ್ನುವುದರಲ್ಲಿ ಎರಡು ಮಾತಿಲ್ಲ. ದರ್ಶನ್ಗಾಗಿ ಸೂರಿ ಮಾಡುತ್ತಿರುವ ಸಿನಿಮಾ ಪ್ಯಾನ್ ಇಂಡಿಯಾ ಸಿನಿಮಾ ಆಗಿರಲಿದೆಯಂತೆ.
ನಟ ದರ್ಶನ್ ದಂಪತಿಯ ಪ್ರೇಮ ವಿವಾಹಕ್ಕೆ 22 ವರ್ಷ!
ಟೈಟಲ್ 'ಕದನ ವಿರಾಮ'!
ಇನ್ನು ಈ ಚಿತ್ರಕ್ಕೆ ಟೈಟಲ್ ಕೂಡ ಫಿಕ್ಸ್ ಆಗಿದೆ ಎನ್ನಲಾಗುತ್ತಿದೆ. ಸೂರಿ ಮತ್ತು ದರ್ಶನ್ ಮುಂದಿನ ಚಿತ್ರಕ್ಕೆ 'ಕದನ ವಿರಾ' ಎನ್ನುವ ಟೈಟಲ್ ಫಿಕ್ಸ್ ಆಗಿದ್ದರ ಬಗ್ಗೆ ಸುದ್ದಿ ಹರಿದಾಡುತ್ತಾ ಇದೆ. ಈ ಟೈಟಲ್ಗೆ ತಕ್ಕ ಹಾಗೆ ಸಿನಿಮಾ ಮಾಸ್ ಫೀಲ್ನಲ್ಲಿ ಇರಲಿದೆಯಂತೆ. ಆದರೆ ಈ ಬಗ್ಗೆ ಸೂರಿ ಅಥವಾ ಸಿನಿಮಾ ತಂಡವೇ ಉತ್ತರ ನೀಡಬೇಕು.
'ಕ್ರಾಂತಿ' ಚಿತ್ರದಲ್ಲಿ ದರ್ಶನ್ ಬ್ಯುಸಿ!
ಸದ್ಯ ನಟ ದರ್ಶನ್ ಕ್ರಾಂತಿ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ರಾಬರ್ಟ್ ಬಳಿಕ ಕೊರೊನಾ ಕಾರಣಕ್ಕೆ ದರ್ಶನ್ ರವರ ಯಾವುದೇ ಸಿನಿಮಾ ಬಂದಿಲ್ಲ. ಹಾಗಾಗಿ ಈಗ ಸಾಲು-ಸಾಲು ಸಿನಿಮಾ ಮಾಡಲು ದರ್ಶನ್ ಮುಂದಾಗಿದ್ದಾರೆ. 'ಕ್ರಾಂತಿ' ಚಿತ್ರೀಕರಣ ವೇಗವಾಗಿ ನಡೆಯುತ್ತಿದ್ದು, ಸದ್ಯದಲ್ಲೇ ಶೂಟಿಂಗ್ ಮುಗಿಯಲಿದೆ. ದರ್ಶನ್ ಜೊತೆಗೆ ನಟಿ ರಚಿತಾ ರಾಮ್ ಕಾಣಿಸಿಕೊಂಡಿದ್ದಾರೆ.
ದರ್ಶನ್ 'ಗೋಲ್ಡ್ ರಿಂಗ್' ಸಿನಿಮಾ ಕಥೆ ಏನು?
ಕಳೆದ ಬಾರಿ ದರ್ಶನ್ ಹುಟ್ಟುಹಬ್ಬಕ್ಕೆ ಹಲವು ಸಿನಿಮಾಗಳು ಅನೌನ್ಸ್ ಆಗಿವೆ. ಅದರಲ್ಲಿ 'ಗೋಲ್ಡ್ ರಿಂಗ್' ಸಿನಿಮಾ ಕೂಡ ಒಂದು. 'ಗೋಲ್ಡ್ ರಿಂಗ್' ಸಿನಿಮಾದಲ್ಲಿ ನಟ ದರ್ಶನ್ ನೇವಿ ಆಫಿಸರ್ ಆಗಿ ಕಾಣಸಿಕೊಳ್ಳಲಿದ್ದಾರೆ. ಆದರೆ ಈ ಸಿನಿಮಾ ಯಾವಾಗ ಸೆಟ್ಟೇರಲಿದೆ ಎನ್ನುವುದನ್ನು ನೋಡಬೇಕಿದೆ. ಇದರ ಜೊತೆಗೆ 'ರಾಜ ವೀರಮದಕರಿ ನಾಯಕ' ಸಿನಿಮಾದ ಶೂಟಿಂಗ್ ಆರಂಭ ಆಗಿತ್ತು. ಆದರೆ ಅದು ಕೂಡ ನಿಂತು ಬಿಟ್ಟಿದೆ.