Don't Miss!
- News Everest Fish Curry Masala: ಎವರೆಸ್ಟ್ ಫಿಶ್ ಕರಿ ಮಸಾಲೆ ಬ್ಯಾನ್: ಕಾರಣ ಇಲ್ಲಿದೆ
- Lifestyle ನೀವು ಸಹ ಈ ಶರ್ಬತ್ನ ರುಚಿ ಸವಿದಿದ್ದೀರಾ..? ಮರೆಯಾಯ್ತು ಈ ಹಳೆಯ ನೆನಪು
- Automobiles ಕಂಪನಿಗೆ 140ರ ಸಂಭ್ರಮ: ಕೇವಲ 140 ವಿಶೇಷ ಆವೃತ್ತಿಗಳು ನಿರ್ಮಾಣ: ಬುಕಿಂಗ್ ಆರಂಭ
- Sports LSG vs CSK IPL 2024: ಲಕ್ನೋ vs ಚೆನ್ನೈ ಮಹಾಕದನ; ಟಾಸ್ ವರದಿ, ಆಡುವ 11ರ ಬಳಗ
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ದರ್ಶನ್ 'ರಾಬರ್ಟ್' ತೆಲುಗು ಟೀಸರ್ ರಿಲೀಸ್ ಗೆ ದಿನಾಂಕ ನಿಗದಿ
ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ರಾಬರ್ಟ್ ಸಿನಿಮಾ ಕನ್ನಡದ ಜೊತೆಗೆ ತೆಲುಗಿನಲ್ಲೂ ರಿಲೀಸ್ ಆಗುತ್ತಿದೆ. ಕನ್ನಡ ಮತ್ತು ತೆಲುಗಿನಲ್ಲಿ ಏಕಕಾಲಕ್ಕೆ ರಿಲೀಸ್ ಮಾಡಲು ತೆಲುಗು ಸಿನಿಮಾರಂಗ ತಕರಾರು ತೆಗೆದಿತ್ತು. ಬೇರ ಭಾಷೆಯ ಸಿನಿಮಾಗಳು ಬಂದರೆ ತೆಲುಗು ಸಿನಿಮಾಗಳಿಗೆ ತೊಂದರೆ ಆಗಲಿದೆ ಎನ್ನುವುದು ಅವರ ವಾದವಾಗಿತ್ತು.
Recommended Video
ತನ್ನ ಬಿಡುಗಡೆಗೆ ಅವಕಾಶ ಕೊಡದ ತೆಲುಗು ಚಿತ್ರರಂಗದ ವಿರುದ್ಧ ಗರಂ ಆಗಿದ್ದ ದಚ್ಚು, ಕರ್ನಾಟಕ ಫಿಲ್ಮ್ ಚೆಂಬರ್ ಗೆ ದೂರು ನೀಡಿದ್ದರು. ಡಿ ಬಾಸ್ ಆಕ್ರೋಶದ ಬಳಿಕ ತೆಲುಗಿನಲ್ಲಿ ರಾಬರ್ಟ್ ರಿಲೀಸ್ ಮಾಡಲು ಅವಕಾಶ ಸಿಕ್ಕಿದೆ. ಕನ್ನಡದ ಹಾಗೆ ತೆಲುಗಿನಲ್ಲೂ ಅದ್ದೂರಿಯಾಗಿ ರಿಲೀಸ್ ಆಗುತ್ತಿದ್ದು, ಸುಮಾರು 400ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ರಾಬರ್ಟ್ ಪ್ರದರ್ಶನವಾಗುತ್ತಿದೆ.
'ರಾಬರ್ಟ್' ಅನ್ನು ಅದ್ಧೂರಿಯಾಗಿ ಸ್ವಾಗತಿಸುತ್ತೇವೆಂದ ತೆಲುಗು ನಿರ್ಮಾಪಕರು
ಫೆಬ್ರವರಿ 3ಕ್ಕೆ ತೆಲುಗು ಟೀಸರ್
ಸಮಸ್ಯೆ ಬಗೆಹರಿದ ಬಳಿಕ ಇದೀಗ ತೆಲುಗು ಟೀಸರ್ ರಿಲೀಸ್ ಗೆ ಸಿನಿಮಾತಂಡ ಸಜ್ಜಾಗಿದೆ. ಹೌದು, ರಾಬರ್ಟ್ ತೆಲುಗು ಟೀಸರ್ ಫೆಬ್ರವರಿ 3ರಂದು ರಿಲೀಸ್ ಆಗುತ್ತಿದೆ. ಸಂಜೆ 04:05ಕ್ಕೆ ಚಿತ್ರದ ಟೀಸರ್ ತೆಲುಗು ಅಭಿಮಾನಿಗಳ ಮುಂದೆ ಬರ್ತಿದೆ. ತೆಲುಗು ಟೀಸರ್ ಹೇಗಿರಲಿದೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಮನೆ ಮಾಡಿದೆ.
ಮಾರ್ಚ್ 11ಕ್ಕೆ ಏಕಕಾಲಕ್ಕೆ ರಿಲೀಸ್
ರಾಬರ್ಟ್ ಸಿನಿಮಾ ಮಾರ್ಚ್ 11ಕ್ಕೆ ಚಿತ್ರಮಂದಿರದ ಅಂಗಳಕ್ಕೆ ಎಂಟ್ರಿ ಕೊಡುತ್ತಿದೆ. ಕನ್ನಡ ಮಾತ್ರವಲ್ಲದೆ ತೆಲುಗಿನಲ್ಲೂ ತೆರೆಗೆ ಬರುತ್ತಿರುವುದು ವಿಶೇಷ. ಅಂದಹಾಗೆ ತೆಲುಗು ಸಿನಿಮಾಗೆ ಸ್ವತಃ ದರ್ಶನ್ ಅವರೇ ಧ್ವನಿ ನೀಡಿದ್ದಾರೆ.
ದರ್ಶನ್ ಆಕ್ರೋಶದ ಫಲ: 'ರಾಬರ್ಟ್' ಬಿಡುಗಡೆಗಿದ್ದ ತೊಡಕು ನಿವಾರಣೆ
ತೆಲುಗಿನಲ್ಲಿ ರಾಬರ್ಟ್ ನಿರ್ಮಾಪಕರಿಗೆ ಸನ್ಮಾನ
'ರಾಬರ್ಟ್' ಸಿನಿಮಾವನ್ನು ತಮ್ಮದೇ ಸಿನಿಮಾ ಎಂಬಂತೆ ಸ್ವಾಗತಿಸಲು ತೆಲುಗು ಚಿತ್ರರಂಗ ಸಜ್ಜಾಗಿದೆ. ಇದರ ಸೂಚಕವಾಗಿ ಕೆಲವು ತೆಲುಗು ನಿರ್ಮಾಪಕರು ನಿನ್ನೆ (ಜನವರಿ 31) ಕಾರ್ಯಕ್ರಮವೊಂದನ್ನು ಆಯೋಜಿಸಿ 'ರಾಬರ್ಟ್' ಸಿನಿಮಾದ ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಗೌಡಗೆ ಸನ್ಮಾನ ಮಾಡಿದ್ದಾರೆ.
ಸುಳ್ಳು ಸುದ್ದಿ ನಂಬಬೇಡಿ
ನಿರ್ಮಾಪಕ, ವಿತರಕ, ನಿರ್ದೇಶಕರಾಗಿ ಗುರುತಿಸಿಕೊಂಡಿರುವ ಚದಲವಾಡ ಶ್ರೀನಿವಾಸ ರಾವ್ ನೇತೃತ್ವದಲ್ಲಿ ಇನ್ನೂ ಕೆಲವು ನಿರ್ಮಾಪಕರು ಒಟ್ಟುಗೂಡಿ 'ರಾಬರ್ಟ್' ಸಿನಿಮಾ ಉಮಾಪತಿ ಶ್ರೀನಿವಾಸ ಗೌಡ ಅವರಿಗೆ ತೆಲುಗು ಚಿತ್ರರಂಗಕ್ಕೆ ಆತ್ಮೀಯ ಸ್ವಾಗತ ಕೋರಿದರು. ಇದೇ ಸಮಯದಲ್ಲಿ ರಾಬರ್ಟ್' ಸಿನಿಮಾ ಬಿಡುಗಡೆಗೆ ತಡೆ ನೀಡಲಾಗಿದೆ ಎಂಬ ಸುಳ್ಳು ಸುದ್ದಿಯನ್ನು ಯಾರೂ ಸಹ ನಂಬಬೇಡಿ ಎಂದು ಸಹ ಚದಲವಾಡ ಶ್ರೀನಿವಾಸ ರಾವ್ ಮನವಿ ಮಾಡಿದರು.