Don't Miss!
- Lifestyle
ಫೆ.1ಕ್ಕೆ ಜಯ ಏಕಾದಶಿ: ಈ ರೀತಿ ಮಾಡಿದರೆ ದಾರಿದ್ರ್ಯ ಹೋಗಿ ಸಂಪತ್ತು ವೃದ್ಧಿಸುವುದು
- Automobiles
ಭಾರತದಲ್ಲಿ ಮೊದಲ ಬಾರಿಗೆ 2.5 ಕೋಟಿ ಕಾರುಗಳ ಮಾರಾಟ ಮೈಲಿಗಲ್ಲು ಸಾಧಿಸಿದ ಜನಪ್ರಿಯ ಕಂಪನಿ
- Sports
IND vs NZ: 2ನೇ ಟಿ20 ಪಂದ್ಯದಲ್ಲಿ ಕಳಪೆ ಪಿಚ್ ನಿರ್ಮಾಣ; ಲಕ್ನೋ ಪಿಚ್ ಕ್ಯುರೇಟರ್ ವಜಾ
- Finance
Economic Survey: ಶೇ.6-6.8 ಜಿಡಿಪಿ ಬೆಳವಣಿಗೆ, 3 ವರ್ಷದಲ್ಲೇ ಮಂದಗತಿ
- News
ವಾರಕ್ಕೊಮ್ಮೆ ದೆಹಲಿಗೆ ಓಡುವ ಸಿಎಂಗೆ ಫ್ರೀಡಂ ಪಾರ್ಕ್ಗೆ ಬರುವ ತಾಳ್ಮೆ ಇಲ್ಲವೇ? ಕಾಂಗ್ರೆಸ್ ಪ್ರಶ್ನೆ
- Technology
ಬಿಎಸ್ಎನ್ಎಲ್ನ ಈ ಪೋಸ್ಟ್ಪೇಯ್ಡ್ ಪ್ಲ್ಯಾನ್ ಬೆಲೆ ಅಗ್ಗ; ಆದ್ರೆ, ರೀಚಾರ್ಜ್ ಕಷ್ಟ!
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ನಿರ್ಮಾಪಕರ ಬೆನ್ನು ತಟ್ಟಿದ ಅಭಿಮಾನಿಗಳಿಗೆ ಧನ್ಯವಾದ ಹೇಳಿದ ದಾಸ
Recommended Video
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಕರ್ನಾಟಕದ ಅಭಿಮಾನಿಗಳಿಗೆ ಹೃದಯಪೂರ್ವಕವಾಗಿ ಧನ್ಯವಾದ ಹೇಳಿದ್ದಾರೆ. ಕುರುಕ್ಷೇತ್ರ ಸಿನಿಮಾವನ್ನ ಯಶಸ್ಸುಗೊಳಿಸಿದ ಎಲ್ಲರಿಗೂ ಡಿ-ಬಾಸ್ ಥ್ಯಾಂಕ್ಸ್ ತಿಳಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ದರ್ಶನ್ ''#ಕುರುಕ್ಷೇತ್ರ ಚಿತ್ರಕ್ಕೆ 50 ದಿನಗಳ ಸಂಭ್ರಮ. ಈಗಿನ ಕಾಲದಲ್ಲಿ ಪೌರಾಣಿಕ ಚಿತ್ರಗಳನ್ನು ಮಾಡಬೇಕೆಂದು ಪಣ ತೊಟ್ಟ ನಿರ್ಮಾಪಕರಿಗೆ ಅವರ ಆಸೆಗೆ ಬೆನ್ನೆಲುಬಾಗಿ ನಿಂತ ಇಡೀ ಚಿತ್ರತಂಡಕ್ಕೆ ಕೊನೆಯದಾಗಿ ಪ್ರೀತಿಯಿಂದ ಚಿತ್ರಮಂದಿರಗಳತ್ತ ಧಾವಿಸಿ ಆಶೀರ್ವದಿಸಿದ ಅಭಿಮಾನಿಗಳು ಕರ್ನಾಟಕ ಜನತೆಗೆ ನನ್ನ ಹೃದಯಪೂರ್ವಕ ವಂದನೆಗಳು ನಿಮ್ಮ ದಾಸ ದರ್ಶನ್'' ಎಂದಿದ್ದಾರೆ.
'ಕುರುಕ್ಷೇತ್ರ'
50ನೇ
ದಿನದ
ಸಂಭ್ರಮಾಚರಣೆ
:
ಅಭಿಮಾನಿಗಳಿಂದ
ರಕ್ತದಾನ
ಆಗಸ್ಟ್ 9 ರಂದು ಬಿಡುಗಡೆಯಾಗಿದ್ದ ಕುರುಕ್ಷೇತ್ರ ಸಿನಿಮಾ ಈಗ 50ನೇ ದಿನ ಪೂರೈಸಿದೆ. ಈ ಸಂಭ್ರಮವನ್ನ ಅಭಿಮಾನಿಗಳು ಆಚರಿಸುತ್ತಿದ್ದಾರೆ. ಇದಕ್ಕೀಗ ಡಿ ಬಾಸ್ ಕೂಡ ಸಾಥ್ ಕೊಟ್ಟಿದ್ದು, ಎಲ್ಲರಿಗೂ ಥ್ಯಾಂಕ್ಸ್ ಹೇಳಿದ್ದಾರೆ.
ದುರ್ಯೋಧನನ ಪಾತ್ರದಲ್ಲಿ ದರ್ಶನ್ ನಟಿಸಿದ್ದರು. ಕೃಷ್ಣನ ಪಾತ್ರದಲ್ಲಿ ರವಿಚಂದ್ರನ್, ಅರ್ಜುನ ಪಾತ್ರದಲ್ಲಿ ಅರ್ಜುನ್ ಸರ್ಜಾ, ಅಭಿಮನ್ಯು ಪಾತ್ರದಲ್ಲಿ ನಿಖಿಲ್ ಕುಮಾರ್, ಭೀಷ್ಮನ ಪಾತ್ರದಲ್ಲಿ ಅಂಬರೀಶ್ ಸೇರಿದಂತೆ ಹಲವು ಕಲಾವಿದರು ನಟಿಸಿದ್ದರು.
ಕಿರುತೆರೆಯಲ್ಲಿ
ಪ್ರಸಾರ
ಆಗ್ತಿದೆ
'ಮುನಿರತ್ನ
ಕುರುಕ್ಷೇತ್ರ'
ಸಿನಿಮಾ
ನಿರ್ಮಾಪಕ ಮುನಿರತ್ನ ಅವರು ಈ ಚಿತ್ರವನ್ನ ನಿರ್ಮಿಸಿದ್ದು, ದೊಡ್ಡ ಬಜೆಟ್ ಹಾಕಿದ್ದರು. ಹಾಕಿದ ಬಂಡವಾಳಕ್ಕೆ ಲಾಭವೂ ಆಗಿದೆ ಎನ್ನಲಾಗಿದೆ. ಕುರುಕ್ಷೇತ್ರ ಸಿನಿಮಾ ನಾಲ್ಕು ಭಾಷೆಯಲ್ಲಿ ರಿಲೀಸ್ ಆಗಿತ್ತು. ಒಟ್ಟಾರೆ ನೂರು ಕೋಟಿ ಗಳಿಕೆ ಕಂಡಿದೆ ಎಂದು ದರ್ಶನ್ ಅಭಿಮಾನಿಗಳು ಮತ್ತು ಸ್ವತಃ ದರ್ಶನ್ ಸಂಭ್ರಮಿಸಿದ್ದರು.