Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಿರ್ಮಾಪಕರ ಬೆನ್ನು ತಟ್ಟಿದ ಅಭಿಮಾನಿಗಳಿಗೆ ಧನ್ಯವಾದ ಹೇಳಿದ ದಾಸ
Recommended Video
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಕರ್ನಾಟಕದ ಅಭಿಮಾನಿಗಳಿಗೆ ಹೃದಯಪೂರ್ವಕವಾಗಿ ಧನ್ಯವಾದ ಹೇಳಿದ್ದಾರೆ. ಕುರುಕ್ಷೇತ್ರ ಸಿನಿಮಾವನ್ನ ಯಶಸ್ಸುಗೊಳಿಸಿದ ಎಲ್ಲರಿಗೂ ಡಿ-ಬಾಸ್ ಥ್ಯಾಂಕ್ಸ್ ತಿಳಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ದರ್ಶನ್ ''#ಕುರುಕ್ಷೇತ್ರ ಚಿತ್ರಕ್ಕೆ 50 ದಿನಗಳ ಸಂಭ್ರಮ. ಈಗಿನ ಕಾಲದಲ್ಲಿ ಪೌರಾಣಿಕ ಚಿತ್ರಗಳನ್ನು ಮಾಡಬೇಕೆಂದು ಪಣ ತೊಟ್ಟ ನಿರ್ಮಾಪಕರಿಗೆ ಅವರ ಆಸೆಗೆ ಬೆನ್ನೆಲುಬಾಗಿ ನಿಂತ ಇಡೀ ಚಿತ್ರತಂಡಕ್ಕೆ ಕೊನೆಯದಾಗಿ ಪ್ರೀತಿಯಿಂದ ಚಿತ್ರಮಂದಿರಗಳತ್ತ ಧಾವಿಸಿ ಆಶೀರ್ವದಿಸಿದ ಅಭಿಮಾನಿಗಳು ಕರ್ನಾಟಕ ಜನತೆಗೆ ನನ್ನ ಹೃದಯಪೂರ್ವಕ ವಂದನೆಗಳು ನಿಮ್ಮ ದಾಸ ದರ್ಶನ್'' ಎಂದಿದ್ದಾರೆ.
'ಕುರುಕ್ಷೇತ್ರ' 50ನೇ ದಿನದ ಸಂಭ್ರಮಾಚರಣೆ : ಅಭಿಮಾನಿಗಳಿಂದ ರಕ್ತದಾನ
ಆಗಸ್ಟ್ 9 ರಂದು ಬಿಡುಗಡೆಯಾಗಿದ್ದ ಕುರುಕ್ಷೇತ್ರ ಸಿನಿಮಾ ಈಗ 50ನೇ ದಿನ ಪೂರೈಸಿದೆ. ಈ ಸಂಭ್ರಮವನ್ನ ಅಭಿಮಾನಿಗಳು ಆಚರಿಸುತ್ತಿದ್ದಾರೆ. ಇದಕ್ಕೀಗ ಡಿ ಬಾಸ್ ಕೂಡ ಸಾಥ್ ಕೊಟ್ಟಿದ್ದು, ಎಲ್ಲರಿಗೂ ಥ್ಯಾಂಕ್ಸ್ ಹೇಳಿದ್ದಾರೆ.
ದುರ್ಯೋಧನನ ಪಾತ್ರದಲ್ಲಿ ದರ್ಶನ್ ನಟಿಸಿದ್ದರು. ಕೃಷ್ಣನ ಪಾತ್ರದಲ್ಲಿ ರವಿಚಂದ್ರನ್, ಅರ್ಜುನ ಪಾತ್ರದಲ್ಲಿ ಅರ್ಜುನ್ ಸರ್ಜಾ, ಅಭಿಮನ್ಯು ಪಾತ್ರದಲ್ಲಿ ನಿಖಿಲ್ ಕುಮಾರ್, ಭೀಷ್ಮನ ಪಾತ್ರದಲ್ಲಿ ಅಂಬರೀಶ್ ಸೇರಿದಂತೆ ಹಲವು ಕಲಾವಿದರು ನಟಿಸಿದ್ದರು.
ಕಿರುತೆರೆಯಲ್ಲಿ ಪ್ರಸಾರ ಆಗ್ತಿದೆ 'ಮುನಿರತ್ನ ಕುರುಕ್ಷೇತ್ರ' ಸಿನಿಮಾ
ನಿರ್ಮಾಪಕ ಮುನಿರತ್ನ ಅವರು ಈ ಚಿತ್ರವನ್ನ ನಿರ್ಮಿಸಿದ್ದು, ದೊಡ್ಡ ಬಜೆಟ್ ಹಾಕಿದ್ದರು. ಹಾಕಿದ ಬಂಡವಾಳಕ್ಕೆ ಲಾಭವೂ ಆಗಿದೆ ಎನ್ನಲಾಗಿದೆ. ಕುರುಕ್ಷೇತ್ರ ಸಿನಿಮಾ ನಾಲ್ಕು ಭಾಷೆಯಲ್ಲಿ ರಿಲೀಸ್ ಆಗಿತ್ತು. ಒಟ್ಟಾರೆ ನೂರು ಕೋಟಿ ಗಳಿಕೆ ಕಂಡಿದೆ ಎಂದು ದರ್ಶನ್ ಅಭಿಮಾನಿಗಳು ಮತ್ತು ಸ್ವತಃ ದರ್ಶನ್ ಸಂಭ್ರಮಿಸಿದ್ದರು.