Don't Miss!
- Automobiles ರಾಂಗ್ ರೂಟ್ನಲ್ಲಿ ಬಂದು ಪ್ರಶ್ನಿಸಿದ ಬೈಕ್ ಸವಾರನಿಗೆ ಥಳಿಸಿದ ಕಾರು ಚಾಲಕ: ವಿಡಿಯೋ
- News CAA: ಸಿಎಎ ಜಾರಿ ಪ್ರಶ್ನಿಸಿ 230ಕ್ಕೂ ಹೆಚ್ಚು ಅರ್ಜಿ: ಸುಪ್ರೀಂಕೋರ್ಟ್ನಲ್ಲಿ ಮಹತ್ವದ ವಿಚಾರಣೆ
- Finance ಆಧಾರ್ ಉಚಿತ ಅಪ್ಡೇಟ್ ದಿನಾಂಕ ಜೂ.14ರವರೆಗೆ ವಿಸ್ತರಣೆ: ಆನ್ಲೈನ್ನಲ್ಲಿ ಹೀಗೆ ನವೀಕರಿಸಿ
- Lifestyle ಬಾಯಲ್ಲಿ ನೀರು ತರಿಸುವ ಮಸಾಲೆ ಮೊಟ್ಟೆ ಬುರ್ಜಿ ಮಾಡೋದು ಹೇಗೆ.? ತುಂಬಾ ಸಿಂಪಲ್ ರೆಸಿಪಿ
- Sports IPL 2024: ಮುಂಬೈ ನಾಯಕನಿಗೆ ಪತ್ರಕರ್ತರಿಂದ ಬೌನ್ಸರ್: ಉತ್ತರಿಸದೆ ಮೌನಕ್ಕೆ ಶರಣಾದ ಹಾರ್ದಿಕ್ ಪಾಂಡ್ಯ
- Technology Best Coolers: ಭಾರತದಲ್ಲಿ 5 ಸಾವಿರಕ್ಕಿಂತ ಕಡಿಮೆ ಬೆಲೆಯಲ್ಲಿ ಲಭ್ಯ ಇರುವ ಅತ್ಯುತ್ತಮ ಕೂಲರ್ಗಳು! ಫೀಚರ್ಸ್ ಏನಿದೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಿರ್ಮಾಪಕರ ಬೆನ್ನು ತಟ್ಟಿದ ಅಭಿಮಾನಿಗಳಿಗೆ ಧನ್ಯವಾದ ಹೇಳಿದ ದಾಸ
Recommended Video
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಕರ್ನಾಟಕದ ಅಭಿಮಾನಿಗಳಿಗೆ ಹೃದಯಪೂರ್ವಕವಾಗಿ ಧನ್ಯವಾದ ಹೇಳಿದ್ದಾರೆ. ಕುರುಕ್ಷೇತ್ರ ಸಿನಿಮಾವನ್ನ ಯಶಸ್ಸುಗೊಳಿಸಿದ ಎಲ್ಲರಿಗೂ ಡಿ-ಬಾಸ್ ಥ್ಯಾಂಕ್ಸ್ ತಿಳಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ದರ್ಶನ್ ''#ಕುರುಕ್ಷೇತ್ರ ಚಿತ್ರಕ್ಕೆ 50 ದಿನಗಳ ಸಂಭ್ರಮ. ಈಗಿನ ಕಾಲದಲ್ಲಿ ಪೌರಾಣಿಕ ಚಿತ್ರಗಳನ್ನು ಮಾಡಬೇಕೆಂದು ಪಣ ತೊಟ್ಟ ನಿರ್ಮಾಪಕರಿಗೆ ಅವರ ಆಸೆಗೆ ಬೆನ್ನೆಲುಬಾಗಿ ನಿಂತ ಇಡೀ ಚಿತ್ರತಂಡಕ್ಕೆ ಕೊನೆಯದಾಗಿ ಪ್ರೀತಿಯಿಂದ ಚಿತ್ರಮಂದಿರಗಳತ್ತ ಧಾವಿಸಿ ಆಶೀರ್ವದಿಸಿದ ಅಭಿಮಾನಿಗಳು ಕರ್ನಾಟಕ ಜನತೆಗೆ ನನ್ನ ಹೃದಯಪೂರ್ವಕ ವಂದನೆಗಳು ನಿಮ್ಮ ದಾಸ ದರ್ಶನ್'' ಎಂದಿದ್ದಾರೆ.
'ಕುರುಕ್ಷೇತ್ರ' 50ನೇ ದಿನದ ಸಂಭ್ರಮಾಚರಣೆ : ಅಭಿಮಾನಿಗಳಿಂದ ರಕ್ತದಾನ
ಆಗಸ್ಟ್ 9 ರಂದು ಬಿಡುಗಡೆಯಾಗಿದ್ದ ಕುರುಕ್ಷೇತ್ರ ಸಿನಿಮಾ ಈಗ 50ನೇ ದಿನ ಪೂರೈಸಿದೆ. ಈ ಸಂಭ್ರಮವನ್ನ ಅಭಿಮಾನಿಗಳು ಆಚರಿಸುತ್ತಿದ್ದಾರೆ. ಇದಕ್ಕೀಗ ಡಿ ಬಾಸ್ ಕೂಡ ಸಾಥ್ ಕೊಟ್ಟಿದ್ದು, ಎಲ್ಲರಿಗೂ ಥ್ಯಾಂಕ್ಸ್ ಹೇಳಿದ್ದಾರೆ.
ದುರ್ಯೋಧನನ ಪಾತ್ರದಲ್ಲಿ ದರ್ಶನ್ ನಟಿಸಿದ್ದರು. ಕೃಷ್ಣನ ಪಾತ್ರದಲ್ಲಿ ರವಿಚಂದ್ರನ್, ಅರ್ಜುನ ಪಾತ್ರದಲ್ಲಿ ಅರ್ಜುನ್ ಸರ್ಜಾ, ಅಭಿಮನ್ಯು ಪಾತ್ರದಲ್ಲಿ ನಿಖಿಲ್ ಕುಮಾರ್, ಭೀಷ್ಮನ ಪಾತ್ರದಲ್ಲಿ ಅಂಬರೀಶ್ ಸೇರಿದಂತೆ ಹಲವು ಕಲಾವಿದರು ನಟಿಸಿದ್ದರು.
ಕಿರುತೆರೆಯಲ್ಲಿ ಪ್ರಸಾರ ಆಗ್ತಿದೆ 'ಮುನಿರತ್ನ ಕುರುಕ್ಷೇತ್ರ' ಸಿನಿಮಾ
ನಿರ್ಮಾಪಕ ಮುನಿರತ್ನ ಅವರು ಈ ಚಿತ್ರವನ್ನ ನಿರ್ಮಿಸಿದ್ದು, ದೊಡ್ಡ ಬಜೆಟ್ ಹಾಕಿದ್ದರು. ಹಾಕಿದ ಬಂಡವಾಳಕ್ಕೆ ಲಾಭವೂ ಆಗಿದೆ ಎನ್ನಲಾಗಿದೆ. ಕುರುಕ್ಷೇತ್ರ ಸಿನಿಮಾ ನಾಲ್ಕು ಭಾಷೆಯಲ್ಲಿ ರಿಲೀಸ್ ಆಗಿತ್ತು. ಒಟ್ಟಾರೆ ನೂರು ಕೋಟಿ ಗಳಿಕೆ ಕಂಡಿದೆ ಎಂದು ದರ್ಶನ್ ಅಭಿಮಾನಿಗಳು ಮತ್ತು ಸ್ವತಃ ದರ್ಶನ್ ಸಂಭ್ರಮಿಸಿದ್ದರು.