ಹುತಾತ್ಮ ಯೋಧರಿಗೆ ನಮನ ಸಲ್ಲಿಸಿದ ದರ್ಶನ್
Recommended Video

''ಪುಲ್ವಾಮಾ ದಾಳಿ ಬಗ್ಗೆ ಕೇಳಿ ತುಂಬ ದುಃಖವಾಗಿದೆ. ಧೈರ್ಯವಂತ ಯೋಧರಿಗೆ ಮತ್ತು ಅವರ ಕುಟುಂಬದವರಿಗಾಗಿ ನಾನು ಪ್ರಾರ್ಥಿಸುತ್ತೇನೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಭಯೋತ್ಪಾದನೆ ಯಾವತ್ತು ಮಾನವ ಕುಲಕ್ಕೆ ಅಪಾಯಕಾರಿ, ಅದನ್ನು ಸಮಾಜದಿಂದ ಬುಡ ಸಹಿತ ಕಿತ್ತು ಹಾಕಬೇಕು.'' ಎಂದು ನಟ ದರ್ಶನ್ ಟ್ವೀಟ್ ಮಾಡಿದ್ದಾರೆ.

ಪುಲ್ವಾಮಾ ಉಗ್ರದಾಳಿಯಿಂದ ಭಾರತದ 44 ಯೋಧರು ಹುತಾತ್ಮರಾಗಿದ್ದಾರೆ. ದೇಶಕ್ಕಾಗಿ ಪ್ರಾಣ ನೀಡಿದ ಯೋಧರಿಗೆ ದರ್ಶನ್ ನಮನ ಸಲ್ಲಿಸಿದ್ದಾರೆ. ಭಯೋತ್ಪಾದನೆಯನ್ನು ಸಮಾಜದಿಂದ ಓಡಿಸಬೇಕು ಎಂದು ಹೇಳಿದ್ದಾರೆ.
ನಿನ್ನೆ (ಗುರುವಾರ) ಸಂಜೆ ಜಮ್ಮು ಮತ್ತು ಕಾಶ್ಮೀರದ ಪುಲ್ವಾಮದ ಅವಂತಿಪೊರ ಎಂಬ ಸ್ಥಳದಲ್ಲಿ ಆತ್ಮಾಹುತಿ ದಾಳಿಕೋರ ಜೈಷ್-ಎ-ಮೊಹಮ್ಮದ್ ಉಗ್ರ ಸಂಘಟನೆಯ ಆದಿಲ್ ಅಹ್ಮದ್ ದಾರ್ ಸ್ಫೋಟಕಗಳನ್ನು ತುಂಬಿದ್ದ ಕಾರನ್ನು ಡಿಕ್ಕಿ ಹೊಡೆಸಿ ಯೋಧರನ್ನು ಬಲಿ ತೆಗೆದುಕೊಂಡಿದ್ದಾನೆ.
ಯೋಧರ ಸಾವಿಗೆ ಇದೇ ದೇಶವೇ ದುಃಖದಲ್ಲಿ ಇದೆ. ಭಾರತಕ್ಕಾಗಿ ಪ್ರಾಣ ನೀಡಿದ ಅಷ್ಟು ಯೋಧರಿಗೆ ನಮ್ಮ ಸಲಾಮ್. ಯೋಧರ ತ್ಯಾಗ, ದೇಶ ಸೇವೆ ದೊಡ್ಡದು. ಭಾರತ್ ಮಾತಾಕಿ ಜೈ ...


Click it and Unblock the Notifications











