Don't Miss!
- News ಶಿವಮೊಗ್ಗ ಲೋಕಸಭಾ ಕ್ಷೇತ್ರ: ಶಾಂತಿಯುತ ಮತದಾನಕ್ಕಾಗಿ ಅಧಿಕಾರಿಗಳಿಗೆ ಖಡಕ್ ಸೂಚನೆ
- Sports ಟಿ20 ವಿಶ್ವಕಪ್-2024: "ಬಾಗಿಲು ಮುಚ್ಚಿದ್ದೇನೆ" ಎಂದಿದ್ದೇಕೆ ಸ್ಪಿನ್ ಮಾಂತ್ರಿಕ ನರೈನ್
- Lifestyle ರೆಸಿಪಿ: ಮಾವಿನ ಕಾಯಿ ತುರಿದು ಮಾಡುವ ಉಪ್ಪಿನಕಾಯಿ, ಎಣ್ಣೆ ಬಳಸಿಲ್ಲ, ವರ್ಷದವರೆಗೆ ಇಡಲೂ ಬಹುದು
- Technology Google: ಗೂಗಲ್ ಪಿಕ್ಸೆಲ್ 8a ಬೆಲೆ ಮಾಹಿತಿ ಲೀಕ್! ಈ ಫೋನ್ ಫೀಚರ್ಸ್ ಏನು?
- Automobiles ಯುವಕರಿಗೆ ಸಿಹಿಸುದ್ದಿ: ಕೈಗೆಟುಕುವ ಬೆಲೆ, ಮಾಸ್ ಲುಕ್ನಲ್ಲಿ ಬರುತ್ತಿದೆ ಹೊಸ ಬಜಾಜ್ ಪಲ್ಸರ್ 400 ಬೈಕ್
- Finance ಇನ್ಮುಂದೆ ನಿಮ್ಮ ಜಮೀನಿನಲ್ಲಿ ನೀವು ಮನೆ ಕಟ್ಟೋದಕ್ಕೂ ಸರ್ಕಾರದ ಅನುಮತಿ ಅಗತ್ಯ, ಏನಿದು ಹೋಸ ನಿಯಮ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಉತ್ತರ ಕರ್ನಾಟಕದ ಜನರ ಮೇಲೆ ಪ್ರೀತಿಯ ಮಳೆಗರೆದ 'ದಾಸ' ದರ್ಶನ್
ದರ್ಶನ್ ಅಭಿನಯದ 'ರಾಬರ್ಟ್' ಸಿನಿಮಾದ ಪ್ರೀ ರಿಲೀಸ್ ಕಾರ್ಯಕ್ರಮ ಹುಬ್ಬಳ್ಳಿಯಲ್ಲಿ ಬಲು ಅದ್ಧೂರಿಯಾಗಿ ನಡೆದಿದೆ.
ಕಾರ್ಯಕ್ರಮದಲ್ಲಿ ತಮ್ಮ ಎಂದಿನ ಲಹರಿಯಲ್ಲಿ ಅಭಿಮಾನಿಗಳ ಜೊತೆ ಮಾತನಾಡಿದ ದರ್ಶನ್, ಉತ್ತರ ಕರ್ನಾಟಕದ ಜನರ ಮೇಲೆ ಮಾತಲ್ಲೇ ಪ್ರೀತಿಯ ಮಳೆಗರದರು.
ವೇದಿಕೆ ಮೇಲೆ ಚಪ್ಪಲಿ ಬಿಟ್ಟು ಮಾತು ಆರಂಭಿಸಿದ ದರ್ಶನ್, 'ಇದು ನಾನು ಉತ್ತರ ಕರ್ನಾಟಕ ಜನರಿಗೆ ನೀಡುತ್ತಿರುವ ಗೌರವ. ಅವರೊಟ್ಟಿಗೆ ಮಾತನಾಡಬೇಕೆಂದರೆ ಚಪ್ಪಲಿ ಬಿಟ್ಟು, ಕೈ ಮುಗಿದು ಮಾತನಾಡಬೇಕು' ಎಂದರು ದರ್ಶನ್.
'ಸಂಗೊಳ್ಳಿ ರಾಯಣ್ಣ' ಸಿನಿಮಾದ ಪ್ರಚಾರ, ವಿಜಯ ಯಾತ್ರೆ ಸಂದರ್ಭದಲ್ಲಿ ಉತ್ತರ ಕರ್ನಾಟಕಕ್ಕೆ ಬಂದಿದ್ದ, ಜವಾರಿ ಮಂದಿ ತೋರಿದ್ದ ಪ್ರೀತಿ, ಗೌರವ ನೆನದು ಭಾವುಕರಾದ ದರ್ಶನ್. ಉತ್ತರ ಕರ್ನಾಟಕದೊಂದಿಗೆ ತಮ್ಮ ತಂದೆಗೆ ಇದ್ದ ನಂಟಿನ ಬಗ್ಗೆಯೂ ಹೇಳಿದರು.
ಇದೇ ಸಮಯದಲ್ಲಿ ಅಭಿಮಾನಿಗಳಿಗೆ ಕಿವಿ ಮಾತನ್ನೂ ಹೇಳಿದ ದರ್ಶನ್, 'ನಾನು ಕಾರಿನಲ್ಲಿ ಹೋಗುವಾಗ ದಯವಿಟ್ಟು ಬೈಕ್ಗಳಲ್ಲಿ ಕಾರನ್ನು ಹಿಂಬಾಲಿಸಬೇಡಿ. ಮೊಬೈಲ್ ಹಿಡಿದುಕೊಂಡು ಕಾರನ್ನು ಹಿಂಬಾಲಿಸುತ್ತೀರ. ಯಾರಿಗಾದರೂ ಏನಾದರು ಹೆಚ್ಚು-ಕಡಿಮೆ ಆದರೆ ನಿಮ್ಮ ಕುಟುಂಬದವರು ಜೀವನಪರ್ಯಂತ ನನ್ನನ್ನು ದೂಷಿಸುತ್ತಾರೆ. ದಯವಿಟ್ಟು ಆ ಕೆಲಸ ಮಾಡಬೇಡಿ' ಎಂದು ಮನವಿ ಮಾಡಿದರು ದರ್ಶನ್.
'ರಾಬರ್ಟ್' ಸಿನಿಮಾವನ್ನು ಕಷ್ಟಪಟ್ಟು ಮಾಡಿದ್ದೇವೆ ಎಂದು ದರ್ಶನ್, ಈ ಸಿನಿಮಾಕ್ಕೂ ನಿಮ್ಮೆಲ್ಲರ ಆಶೀರ್ವಾದ, ಸಹಕಾರ ಅತ್ಯವ್ಯಕ ಎಂದು ಅಭಿಮಾನಿಗಳಲ್ಲಿ ಮನವಿ ಮಾಡಿದರು.
ಕಾರ್ಯಕ್ರಮಕ್ಕೆ ಆಗಮಿಸಿದ್ದ ಕೃಷಿ ಸಚಿವ ಬಿ.ಸಿ.ಪಾಟೀಲ್. ಸಚಿವ ಜಗದೀಶ್ ಶೆಟ್ಟರ್ ಸೇರಿದಂತೆ ಇನ್ನಿತರೆ ಸಿನಿಮಾರಂಗದ ಗಣ್ಯರಿಗೆ ಧನ್ಯವಾದ ಹೇಳಿದ ನಟ ದರ್ಶನ್, ವೇದಿಕೆ ಮುಂದಿದ್ದ ತನ್ನ ಆತ್ಮೀಯ ನಟ-ನಟಿಯರನ್ನು ತಮ್ಮದೇ ಸ್ಟೈಲ್ನಲ್ಲಿ ಚೇಡಿಸಿ ರಂಜಿಸಿದರು.
ಅಭಿಮಾನಿಗಳಿಗೆ, ಉತ್ತರ ಕರ್ನಾಟಕದ ಜನರಿಗೆ ಪದೇ-ಪದೇ ಧನ್ಯವಾದ ಹೇಳಿದ ದರ್ಶನ್, ನನ್ನನ್ನು ಇಷ್ಟು ದಿನ ಸಹಿಸಿಕೊಂಡಿದ್ದೀರಿ. ನಿಮ್ಮ ಆಶೀರ್ವಾದ ಇದ್ದರೆ ಇನ್ನೂ ಕೆಲವು ವರ್ಷ ನಿಮ್ಮನ್ನು ರಂಜಿಸುತ್ತಿರುತ್ತೇನೆ ಎಂದರು ದರ್ಶನ್.
Recommended Video
'ರಾಬರ್ಟ್' ಸಿನಿಮಾದಲ್ಲಿ ಕೆಲಸ ಮಾಡಿದ ನಟ ದೇವರಾಜ್, ಜಗಪತಿ ಬಾಬು, ರವಿಶಂಕರ್, ನಟಿ ಆಶಾ ಭಟ್ , ನಿರ್ದೇಶಕ ತರುಣ್ ಸುಧೀರ್, ವಿನೋದ್ ಪ್ರಭಾಕರ್, ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಎಲ್ಲರಿಗೂ ಧನ್ಯವಾದ ಅರ್ಪಿಸಿದರು ದರ್ಶನ್.