Just In
- 11 hrs ago
ನ್ಯಾಯಾಲಯಕ್ಕೆ ಹಾಜರಾದ ರಕ್ಷಿತ್ ಶೆಟ್ಟಿ, ಇದು ಸುಲಿಗೆ ತಂತ್ರ ಎಂದ ಸಿಂಪಲ್ ಸ್ಟಾರ್
- 12 hrs ago
50 ಲಕ್ಷ ವಂಚನೆ: ಪೊಲೀಸ್ ಠಾಣೆ ಮೆಟ್ಟಿಲೇರಿದ ಸಂಜನಾ ಗಲ್ರಾನಿ ಸಹೋದರಿ
- 12 hrs ago
ರಾಜ್ಕುಮಾರ್ ಪುಣ್ಯಸ್ಮರಣೆ: ಅಣ್ಣಾವ್ರನ್ನು ದರ್ಶನ್ ಸ್ಮರಿಸಿದ್ದು ಹೀಗೆ
- 14 hrs ago
ಬಾಫ್ಟಾ 2021: ರಿಷಿ ಕಪೂರ್, ಇರ್ಫಾನ್ಗೆ ಗೌರವ, 'ವೈಟ್ ಟೈಗರ್'ಗೆ ನಿರಾಸೆ
Don't Miss!
- News
ಮಹಾರಾಷ್ಟ್ರದಲ್ಲಿ ಲಾಕ್ ಡೌನ್ ಭೀತಿ; ವಲಸೆ ಕಾರ್ಮಿಕರ ಗುಳೆ
- Automobiles
ಎಕ್ಸ್ಯುವಿ700 ಬಿಡುಗಡೆಯ ನಂತರ ತಾತ್ಕಾಲಿಕವಾಗಿ ಮಾರಾಟದಿಂದ ಸ್ಥಗಿತವಾಗಲಿದೆ ಎಕ್ಸ್ಯುವಿ500
- Finance
ಚಿನ್ನದ ಬೆಲೆ: ಗರಿಷ್ಠ ಮಟ್ಟಕ್ಕಿಂತ 10,000 ರೂ. ಕಡಿಮೆ
- Sports
ರಾಜಸ್ಥಾನ್ ವಿರುದ್ಧ ಗೆದ್ದು ಮುಂಬೈ ಹಿಂದಿಕ್ಕಿದ ಪಂಜಾಬ್ ಕಿಂಗ್ಸ್
- Lifestyle
ಮಂಗಳವಾರದ ದಿನ ಭವಿಷ್ಯ: ಯುಗಾದಿಯಂದು ಹೇಗಿದೆ ನಿಮ್ಮ ರಾಶಿಫಲ
- Education
WCL Recruitment 2021: 44 ಮೆಡಿಕಲ್ ಸ್ಪೆಷಲಿಸ್ಟ್ ಮತ್ತು ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ರಾಬರ್ಟ್ ಸಂಭ್ರಮ: ವಿನಯದಿಂದ ತೆಲುಗು ಅಭಿಮಾನಿಗಳ ಮನಸು ಕದ್ದ ದರ್ಶನ್
ರಾಬರ್ಟ್ ಪ್ರೀ ರಿಲೀಸ್ ಕಾರ್ಯಕ್ರಮ ನಿನ್ನೆ ಹೈದರಾಬಾದ್ನ ಫಿಲ್ಮ್ ನಗರದಲ್ಲಿ ಬಹು ಅದ್ಧೂರಿಯಾಗಿ ನಡೆದಿದೆ.
ನಟ ದರ್ಶನ್, ನಟಿ ಆಶಾ ಭಟ್, ನಿರ್ದೇಶಕ ತರುಣ್ ಸುಧೀರ್, ನಟ ವಿನೋದ್ ಪ್ರಭಾಕರ್, ನಿರ್ಮಾಪಕ ಉಮಾಪತಿ ಇನ್ನೂ ಹಲವಾರು ಮಂದಿ ಹಾಜರಿದ್ದ ಸಮಾರಂಭದಲ್ಲಿ ನಟ ದರ್ಶನ್ ಭಾಷಣ ಮಾಡಿ ತೆಲುಗು ಪ್ರೇಕ್ಷಕರ ಮನಗೆದ್ದಿದ್ದಾರೆ.
ಕನ್ನಡದಲ್ಲಿ ಭಾಷಣ ಆರಂಭಿಸಿದ ನಟ ದರ್ಶನ್, ತೆಲುಗಿನಲ್ಲಿಯೇ ಭಾಷಣ ಮಾಡಿದರು. ಮೊದಲಿಗೆ ತೆಲುಗು ಪ್ರೇಕ್ಷಕರಿಗೆ, ತೆಲುಗಿನ ವಿತರಕರು ಎಲ್ಲರಿಗೂ ಧನ್ಯವಾದ ಅರ್ಪಿಸಿದರು ನಟ ದರ್ಶನ್.
ಜಗಪತಿ ಬಾಬು ಬಗ್ಗೆ ವಿಶೇಷವಾಗಿ ಮಾತನಾಡಿದ ನಟ ದರ್ಶನ್, 'ಸಿನಿಮಾದಲ್ಲಿ ರಾಬರ್ಟ್ ಅಲ್ಲ ಹೀರೋ ನಿಜವಾದ ಹೀರೋ ಜಗಪತಿ ಬಾಬು ನಿರ್ವಹಿಸಿರುವ ನಾನಾ ಪಾತ್ರ' ಎಂದರು ದರ್ಶನ್.
'ನಾವೆಲ್ಲ ಹಣ ಪಡೆದುಕೊಂಡು ನಟಿಸಿಬಿಟ್ಟಿದ್ದೇವೆ ಅಷ್ಟೆ. ಆದರೆ ಸಿನಿಮಾದ ನಿಜವಾದ ಹೀರೋ ಸಿನಿಮಾದ ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಅವರು. ಅವರೇ ಈ ಸಿನಿಮಾದ ಜೀವ' ಎಂದು ಹೊಗಳಿದರು.
'ಕಾರ್ಯಕ್ರಮದಲ್ಲಿ ನಮ್ಮ ತಂದೆ ವಿಲನ್ ಆಗಿದ್ದವರು ಎಂದೆಲ್ಲಾ ವಿಡಿಯೋ ತೋರಿಸಿದರು. ಆದರೆ ನಾನು ಸಿನಿಮಾಕ್ಕೆ ಬರುವ ಮುನ್ನವೇ ತಂದೆಯನ್ನು ಕಳೆದುಕೊಂಡೆ. ಆದರೆ ಅವರೊಟ್ಟಿಗೆ ನಟಿಸಿದ ಹಿರಿಯರೆಲ್ಲಾ ನನಗೆ ತಂದೆ ಸಮಾನ. ನಟ ದೇವರಾಜ್ ಅವರು ನನಗೆ ತಂದೆ ಸಮಾನ, ನಮ್ಮನ್ನು ಹೊಡೆಯುವ, ತಿದ್ದುವ ಅಧಿಕಾರ ಅವರಿಗೆ ಇದೆ. ಅವರೊಟ್ಟಿಗೆ ಈ ಸಿನಿಮಾದಲ್ಲಿ ನಟಿಸಿರುವುದು ನನ್ನ ಭಾಗ್ಯ' ಎಂದಿದ್ದಾರೆ ದರ್ಶನ್.
ಬಹು ವಿನಯದಿಂದ ಮಾತನಾಡಿದ ನಟ ದರ್ಶನ್, ವೇದಿಕೆ ಮೇಲಿದ್ದ ಹಿರಿಯರಿಗೆ, ಸಹ ನಟರಿಗೆ ಬಹು ಗೌರವದಿಂದ ಕೈಮುಗಿದು ಮಾತನಾಡಿದರು ನಟ ದರ್ಶನ್. ವಿನೋದ್ ಪ್ರಭಾಕರ್ ಬಗ್ಗೆ ಹಾಗೂ ಅವರ ತಂದೆ ಬಗ್ಗೆಯೂ ಬಹು ಪ್ರೀತಿಯಿಂದ ಮಾತನಾಡಿದರು ನಟ ದರ್ಶನ್.