Don't Miss!
- Lifestyle 10 ವರ್ಷದಿಂದ ನಿರಂತರ ರಕ್ತ ಕುಡಿಯುತ್ತಿರುವ ಯುವತಿ..! ರಕ್ತವೇ ಟೀ, ಅದರಲ್ಲೇ ಊಟ..!
- News Rain Alert: ಕೊಡಗಿನ ವಿವಿಧಡೆ ಮಳೆ ಅಬ್ಬರ: ಮೋಡ ಕವಿದ ವಾತಾವರಣ
- Automobiles Brezza: ಮಾರುತಿ ಸುಜುಕಿ ಬ್ರೆಝಾ ಖರೀದಿಸಬೇಕೇ.. ಆನ್ ರೋಡ್ ಬೆಲೆ ಎಷ್ಟು? EMI ಏನು?
- Sports IPL 2024: RCB ವಿರುದ್ಧ ಪಂದ್ಯಕ್ಕೆ KKRನ ಆಡುವ 11ರ ಬಳಗ ಮರೆತ ಶ್ರೇಯಸ್ ಅಯ್ಯರ್
- Technology WhatsApp: ವಾಟ್ಸಾಪ್ನಲ್ಲಿ ಈ ಕರೆಗಳನ್ನು ಸ್ವೀಕರಿಸದಂತೆ ಕೇಂದ್ರದಿಂದ ಎಚ್ಚರಿಕೆ! ಯಾಕೆ ಗೊತ್ತಾ?
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರಾಬರ್ಟ್ ಸಂಭ್ರಮ: ವಿನಯದಿಂದ ತೆಲುಗು ಅಭಿಮಾನಿಗಳ ಮನಸು ಕದ್ದ ದರ್ಶನ್
ರಾಬರ್ಟ್ ಪ್ರೀ ರಿಲೀಸ್ ಕಾರ್ಯಕ್ರಮ ನಿನ್ನೆ ಹೈದರಾಬಾದ್ನ ಫಿಲ್ಮ್ ನಗರದಲ್ಲಿ ಬಹು ಅದ್ಧೂರಿಯಾಗಿ ನಡೆದಿದೆ.
ನಟ ದರ್ಶನ್, ನಟಿ ಆಶಾ ಭಟ್, ನಿರ್ದೇಶಕ ತರುಣ್ ಸುಧೀರ್, ನಟ ವಿನೋದ್ ಪ್ರಭಾಕರ್, ನಿರ್ಮಾಪಕ ಉಮಾಪತಿ ಇನ್ನೂ ಹಲವಾರು ಮಂದಿ ಹಾಜರಿದ್ದ ಸಮಾರಂಭದಲ್ಲಿ ನಟ ದರ್ಶನ್ ಭಾಷಣ ಮಾಡಿ ತೆಲುಗು ಪ್ರೇಕ್ಷಕರ ಮನಗೆದ್ದಿದ್ದಾರೆ.
ಕನ್ನಡದಲ್ಲಿ ಭಾಷಣ ಆರಂಭಿಸಿದ ನಟ ದರ್ಶನ್, ತೆಲುಗಿನಲ್ಲಿಯೇ ಭಾಷಣ ಮಾಡಿದರು. ಮೊದಲಿಗೆ ತೆಲುಗು ಪ್ರೇಕ್ಷಕರಿಗೆ, ತೆಲುಗಿನ ವಿತರಕರು ಎಲ್ಲರಿಗೂ ಧನ್ಯವಾದ ಅರ್ಪಿಸಿದರು ನಟ ದರ್ಶನ್.
ಜಗಪತಿ ಬಾಬು ಬಗ್ಗೆ ವಿಶೇಷವಾಗಿ ಮಾತನಾಡಿದ ನಟ ದರ್ಶನ್, 'ಸಿನಿಮಾದಲ್ಲಿ ರಾಬರ್ಟ್ ಅಲ್ಲ ಹೀರೋ ನಿಜವಾದ ಹೀರೋ ಜಗಪತಿ ಬಾಬು ನಿರ್ವಹಿಸಿರುವ ನಾನಾ ಪಾತ್ರ' ಎಂದರು ದರ್ಶನ್.
'ನಾವೆಲ್ಲ ಹಣ ಪಡೆದುಕೊಂಡು ನಟಿಸಿಬಿಟ್ಟಿದ್ದೇವೆ ಅಷ್ಟೆ. ಆದರೆ ಸಿನಿಮಾದ ನಿಜವಾದ ಹೀರೋ ಸಿನಿಮಾದ ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಅವರು. ಅವರೇ ಈ ಸಿನಿಮಾದ ಜೀವ' ಎಂದು ಹೊಗಳಿದರು.
'ಕಾರ್ಯಕ್ರಮದಲ್ಲಿ ನಮ್ಮ ತಂದೆ ವಿಲನ್ ಆಗಿದ್ದವರು ಎಂದೆಲ್ಲಾ ವಿಡಿಯೋ ತೋರಿಸಿದರು. ಆದರೆ ನಾನು ಸಿನಿಮಾಕ್ಕೆ ಬರುವ ಮುನ್ನವೇ ತಂದೆಯನ್ನು ಕಳೆದುಕೊಂಡೆ. ಆದರೆ ಅವರೊಟ್ಟಿಗೆ ನಟಿಸಿದ ಹಿರಿಯರೆಲ್ಲಾ ನನಗೆ ತಂದೆ ಸಮಾನ. ನಟ ದೇವರಾಜ್ ಅವರು ನನಗೆ ತಂದೆ ಸಮಾನ, ನಮ್ಮನ್ನು ಹೊಡೆಯುವ, ತಿದ್ದುವ ಅಧಿಕಾರ ಅವರಿಗೆ ಇದೆ. ಅವರೊಟ್ಟಿಗೆ ಈ ಸಿನಿಮಾದಲ್ಲಿ ನಟಿಸಿರುವುದು ನನ್ನ ಭಾಗ್ಯ' ಎಂದಿದ್ದಾರೆ ದರ್ಶನ್.
Recommended Video
ಬಹು ವಿನಯದಿಂದ ಮಾತನಾಡಿದ ನಟ ದರ್ಶನ್, ವೇದಿಕೆ ಮೇಲಿದ್ದ ಹಿರಿಯರಿಗೆ, ಸಹ ನಟರಿಗೆ ಬಹು ಗೌರವದಿಂದ ಕೈಮುಗಿದು ಮಾತನಾಡಿದರು ನಟ ದರ್ಶನ್. ವಿನೋದ್ ಪ್ರಭಾಕರ್ ಬಗ್ಗೆ ಹಾಗೂ ಅವರ ತಂದೆ ಬಗ್ಗೆಯೂ ಬಹು ಪ್ರೀತಿಯಿಂದ ಮಾತನಾಡಿದರು ನಟ ದರ್ಶನ್.