Don't Miss!
- Automobiles ಭಾರತದಲ್ಲಿ 80 ಲಕ್ಷ ಸ್ಕೂಟರ್ ಮಾರಿದ ಜಪಾನ್ ಕಂಪನಿ: ವಿಶ್ವಗುರು ಭಾರತದಲ್ಲಿ ಎಲ್ಲವೂ ಸಾಧ್ಯ!
- News ಬೆಂಗಳೂರಿನಲ್ಲಿ ಖಾಲಿ ಚೊಂಬು ಹಿಡಿದು ಕಾಂಗ್ರೆಸ್ ಪ್ರತಿಭಟನೆ
- Technology 6000mAh ಬ್ಯಾಟರಿಯ ಈ ಫೋನ್ ಶೀಘ್ರದಲ್ಲೇ ಖರೀದಿಗೆ ಲಭ್ಯ!..ಬೆಲೆ ಎಷ್ಟು?
- Sports ಧೋನಿ ಎದುರು ಬಂದಾಗ ಕೆ.ಎಲ್ ರಾಹುಲ್ ಕ್ಯಾಪ್ ತೆಗೆದಿದ್ದೇಕೆ?: ಕಾರಣವೇನು?
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹೀರೋ ಯಶ್ ಹೇಳಿದ ಮಾತು ಸತ್ಯವಾಗಿದೆ : ದರ್ಶನ್
Recommended Video
ಚಾಲೆಂಜಿಂಗ್ ಸ್ಟಾರ್ ದರ್ಶನ್ ಸದ್ಯ 'ರಾಬರ್ಟ್' ಚಿತ್ರೀಕರಣ ಮುಗಿಸಿ ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಇಂದು ರೆಬೆಲ್ ಸ್ಟಾರ್ ಅಂಬರೀಶ್ ಹುಟ್ಟುಹಬ್ಬ. ಮಂಡ್ಯದಲ್ಲಿ ಅಂಬರೀಶ್ ಹುಟ್ಟುಹಬ್ಬವನ್ನು ಸ್ವಾಭಿಮಾನಿಗಳ ವಿಜಯೋತ್ಸವ ಹೆಸರಿನಲ್ಲಿ ಆಚರಿಸಲಾಗುತ್ತಿದೆ.
ಈ ಬೃಹತ್ ಸಮಾವೇಶದಲ್ಲಿ ಜೋಡೆತ್ತುಗಳಾದ ದರ್ಶನ್ ಮತ್ತು ರಾಕಿಂಗ್ ಸ್ಟಾರ್ ಯಶ್ ಭಾಗಿಯಾಗಲಿದ್ದಾರೆ. ಸಮಾವೇಶಕ್ಕು ಮೊದಲು ಚಾಲೆಂಜಿಂಗ್ ಸ್ಟಾರ್ ದರ್ಶನ್ ಮಂಡ್ಯ ಮತ್ತು ಚುನಾವಣೆಯ ಬಗ್ಗೆ ಮಾತನಾಡಿದ್ದಾರೆ. ಸುಮಲತಾ ಅವರನ್ನು ಗೆಲ್ಲಿಸಿಕೊಟ್ಟ ಮಂಡ್ಯ ಜನರಿಗೆ ಕೃತಜ್ಞತೆ ಪದ ಚಿಕ್ಕದಾಗುತ್ತೆ ಅಂತ ಹೇಳಿದ್ದಾರೆ.
ಅಂಬರೀಶ್ ಹುಟ್ಟುಹಬ್ಬಕ್ಕೆ ದರ್ಶನ್ ಶುಭಕೋರಿದ್ದು ಹೀಗೆ
ಸಂದರ್ಶನ ಒಂದರಲ್ಲಿ ಮಾತನಾಡಿದ ದರ್ಶನ್ ಸಾಯುವವರೆಗೂ ಮಂಡ್ಯ ಜನರಿಗೆ ಋಣಿಯಾಗಿರುತ್ತೇವೆ ಎಂದು ಹೇಳಿದ್ದಾರೆ. ಇಂದು ಅಂಬಿ ಹುಟ್ಟುಹಬ್ಬದಲ್ಲಿ ಭಾಗಿಯಾಗುವ ದರ್ಶನ್ ಮಂಡ್ಯದ ಬಗ್ಗೆ, ಚುನಾವಣೆಯ ಬಗ್ಗೆ ಏನೆಲ್ಲ ಹೇಳಿದ್ದಾರೆ?ಮುಂದೆ ಓದಿ..
ವಿರೋಧಿಗಳಿಗೆ ತಲೆಕೆಡಿಸಿ ಕೊಳ್ಳುವುದಿಲ್ಲ
ಮಂಡ್ಯ ಚುನಾವಣೆ ವೇಳೆ ನಡೆದ ಟೀಕೆ ಟಿಪ್ಪಣಿಗಳ ಬಗ್ಗೆ ಮಾತನಾಡಲು ದರ್ಶನ್ ನಿರಾಕರಿಸಿದ್ದಾರೆ. ವಿರೋಧಿಗಳಿಗೆ ತಲೆಕೆಡಿಸಿಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ. ಪ್ರಚಾರದ ವೇಳೆ ಇದೆಲ್ಲ ಸಹಜ. ಅವೆಲ್ಲ ಅಲ್ಲಿಗೆ ಮುಗಿಯಿತು ಅಷ್ಟೆ. ಅದರ ಬಗ್ಗೆ ಈಗ ಮಾತನಾಡುವುದು ಬೇಡ. ಇದಕ್ಕೆಲ್ಲ ಮಂಡ್ಯದ ಜನರೆ ಉತ್ತರಿಸಿದ್ದಾರೆ ಎಂದು ದರ್ಶನ್ ಹೇಳಿದ್ದಾರೆ.
ಸೆಂಚುರಿಯತ್ತ ಮುನ್ನುಗ್ಗುತ್ತಿರುವ 'ಯಜಮಾನ' ಚಿತ್ರದ ಟೈಟಲ್ ಸಾಂಗ್ ರಿಲೀಸ್
ಮಂಡ್ಯ ಚುನಾವಣೆಯೆ ಬೇರೆಯಾಗಿತ್ತು
ಇಡೀ ಇಂಡಿಯಾಗೆ ಒಂದು ಚುನಾವಣೆಯಾಗಿದ್ರೆ ಮಂಡ್ಯ ಚುನಾವಣೆಯೆ ಬೇರೆಯಾಗಿತ್ತು. ಅಷ್ಟರ ಮಟ್ಟಿಗೆ ಮಂಡ್ಯ ಜಿಲ್ಲೆಯ ಚುನಾವಣೆ ಕುತೂಹಲ ಕೆರಳಿಸಿತ್ತು. ಚುನಾವಣೆ ಅಂದ್ಮೇಲೆ ಸೋಲು ಗೆಲುವು ಇದ್ದಿದ್ದೆ. ಗೆದ್ದ ಮೇಲೆ ಅದನ್ನು ಉಳಿಸಿಕೊಂಡು ಹೋಗಬೇಕು ಅಷ್ಟೆ ಎಂದಿದ್ದಾರೆ.
ಹೀರೋ ಯಶ್ ಹೇಳಿದ್ದರು ಅವತ್ತೇ
ಇವತ್ತು ಅಂಬರೀಶ್ ಹುಟ್ಟುಹಬ್ಬ. ಹೀರೋ ಯಶ್ ಅವತ್ತೆ ಹೇಳಿದ್ದರು. ಮೇ 29 ಅಂಬಿ ಹುಟ್ಟುಹಬ್ಬಕ್ಕೆ ಮಂಡ್ಯದ ಜನ 23ಕ್ಕೆ ದೊಡ್ಡ ಗಿಫ್ಟ್ ಕೊಡಲಿದ್ದಾರೆ ಎಂದು. ಆ ಮಾತು ಸತ್ಯ ಆಗಿದೆ. ಅಂಬರೀಶ್ ಹುಟ್ಟುಹಬ್ಬಕ್ಕೆ ದೊಡ್ಡ ಗಿಫ್ಟ್ ಕೊಟ್ಟಿದ್ದಾರೆ ಎಂದು ಹೇಳುವ ಮೂಲಕ ಯಶ್ ಮಾತನ್ನು ಮತ್ತೊಮ್ಮೆ ನೆನಪಿಸಿಕೊಂಡಿದ್ದಾರೆ ದರ್ಶನ್.
ಸಂಸತ್ ಪ್ರವೇಶಿಸಿದ ಚಾಲೆಂಜಿಂಗ್ ಸ್ಟಾರ್ 'ದರ್ಶನ್' ಚಿತ್ರದ ನಾಯಕಿ
ನಮಗೆ ನೀರಿಲ್ಲ, ಇನ್ನ ಕೊಡುವುದೆಲ್ಲಿ
ತಮಿಳುನಾಡಿಗೆ ಮತ್ತೆ ಕಾವೇರಿ ನೀರು ಬಿಡುವ ಬಗ್ಗೆ ಪ್ರಧಾಕಾರ ನೀಡಿರುವ ಆದೇಶದ ಬಗ್ಗೆ ದರ್ಶನ್ ಮಾತನಾಡಿದ್ದಾರೆ. ನಮಗೆ ಹೊಟ್ಟೆ ತುಂಬಿದ್ರೆ ಮಾತ್ರ ಬೇರೆಯವರಿಗೆ ಕೊಡಲು ಸಾದ್ಯ. ನಮಗೆ ಇಲ್ಲಿ ಕುಡಿಯಲು ನೀರಿಲ್ಲ. ಇನ್ನ ಕೊಡುವುದೆಲ್ಲಿ. ಒಬ್ಬರ ಊಟವನ್ನು ಹತ್ತು ಜನರಿಗೆ ಹಂಚೋಕೆ ಆಗಲ್ಲ ಎಂದು ಹೇಳಿದ್ದಾರೆ.
ರಾಜಕೀಯಕ್ಕೆ ಬರ್ತೀರಾ ದರ್ಶನ್?
ಮಂಡ್ಯ ಚುನಾವಣೆ ಪ್ರಚಾರಕ್ಕಾಗಿ ಹಗಲು ರಾತ್ರಿ ಶ್ರಮಮಿಸಿದ ದರ್ಶನ್ ಅವರನ್ನು ನೋಡಿ ಅನೇಕರು ರಾಜಕೀಯ ಬರ್ತಾರಾ ಎನ್ನುವ ಕುತೂಹಲದಲ್ಲಿದ್ದರು. ಈ ಬಗ್ಗೆ ರಾಜಕೀಯಕ್ಕೆ ಬರ್ತೀರಾ ದರ್ಶನ್ ಎಂದು ಕೇಳಿದ್ರೆ, ಈ ಬಗ್ಗೆ ಆಮೇಲೆ ಮಾತಾನೋಣ ಎಂದು ಹೇಳಿದ್ದಾರೆ. ಆದ್ರೆ ಈ ಹಿಂದೆಯಿಂದನೂ ರಾಜಕೀದಿಂದ ದೂರ ಇರುವ ದಚ್ಚು ಯಾವುದೆ ಕಾರಣಕ್ಕೂ ರಾಜಕೀಯಕ್ಕೆ ಬರುವುದಿಲ್ಲ ಎಂದು ಹೇಳುತ್ತಲೆ ಬಂದಿದ್ದಾರೆ.