Don't Miss!
- News Mukhtar Ansari's death: ಉತ್ತರಪ್ರದೇಶದಲ್ಲಿ ಕಿಚ್ಚು ಹಚ್ಚಿದ ಗ್ಯಾಂಗ್ಸ್ಟಾರ್, ರಾಜಕಾರಣಿ ಮುಖ್ತಾರ್ ಅನ್ಸಾರಿ ನಿಧನ
- Technology iPhone: ಆಪಲ್ ಅಂತಿಮವಾಗಿ ಐಫೋನ್ 12 ಬಳಕೆದಾರರಿಗೆ ಗುಡ್ ನ್ಯೂಸ್ ನೀಡಿಯೇ ಬಿಟ್ಟಿತು! ಏನದು?
- Automobiles Tata Nexon: ಟಾಟಾ ನೆಕ್ಸಾನ್ ಹೊಸ ರೂಪಾಂತರಗಳು ಬಿಡುಗಡೆ, ರೂ.10 ಲಕ್ಷ ಬೆಲೆ.. ಆಕರ್ಷಕ ವೈಶಿಷ್ಟ್ಯಗಳು
- Sports Riyan Parag: 'ಗಾಯದಿಂದ ಮೂರು ದಿನ ಒದ್ದಾಡಿ ಹೋಗಿದ್ದೆ': ರಿಯಾನ್ ಪರಾಗ್
- Finance ಇನ್ಮುಂದೆ ದುಬಾರಿಯಾಗಲಿದೆ ಎಸ್ಬಿಐ ಡೆಬಿಟ್, ಕ್ರೆಡಿಟ್ ಕಾರ್ಡ್ ನಿರ್ವಹಣಾ ಶುಲ್ಕ
- Lifestyle ಗುಡ್ಫ್ರೈಡೆ ಆಚರಣೆ ಹುಟ್ಟಿದ್ದು ಹೇಗೆ? ಇದರ ಮಹತ್ವವೇನು ಗೊತ್ತಾ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ರಾಧಿಕಾ ಕುಮಾರಸ್ವಾಮಿ ನನಗಿಂತ ಸೀನಿಯರ್' - ದರ್ಶನ್
Recommended Video
''ರಾಧಿಕಾ ಕುಮಾರಸ್ವಾಮಿ ಅವರ ನನಗಿಂತ ಸೀನಿಯರ್. ದಮಯಂತಿ ಅಂತಹ ಸಿನಿಮಾ ಮಾಡುವುದಕ್ಕೆ ಡೆಡಿಕೇಶನ್ ಇದ್ದರೆ ಮಾತ್ರ ಸಾಧ್ಯ. ಅದಕ್ಕೆ ಗಟ್ಸ್ ಬೇಕು. ಟ್ರೈಲರ್ ನೋಡಿದಾಗ ರೋಮಾಂಚನ ಆಯ್ತು'' ಎಂದು ನಟ ದರ್ಶನ್ ಹೇಳಿದ್ದಾರೆ.
ರಾಧಿಕಾ ಕುಮಾರಸ್ವಾಮಿ ನಟನೆಯ 'ದಮಯಂತಿ' ಸಿನಿಮಾದ ಟ್ರೈಲರ್ ಲಾಂಚ್ ಮಾಡಿದ ಡಿ ಬಾಸ್, ಸಿನಿಮಾ ಹಾಗೂ ರಾಧಿಕಾ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ನಟಿ ರಾಧಿಕಾ ಮಗಳು ಸ್ಯಾಂಡಲ್ ವುಡ್ ನ 'ಈ ಸ್ಟಾರ್' ನಟನ ದೊಡ್ಡ ಅಭಿಮಾನಿಯಂತೆ
'ನಾನು ಮೆಜಿಸ್ಟಿಕ್ ಸಿನಿಮಾ ಮಾಡುವುದಕ್ಕೂ ಮೊದಲೇ, ರಾಧಿಕಾ 'ನೀಲಾ ಮೇಘ ಶ್ಯಾಮ' ಸಿನಿಮಾ ಮಾಡಿದ್ದರು. ಅವರು ನನಗಿಂತ ಒಂದು ಸಿನಿಮಾ ಸೀನಿಯರ್. ಅವರ ಕಾಲದಲ್ಲಿದ್ದ ನಟಿಯರು ಯಾರೂ ಸಿನಿಮಾ ಮಾಡ್ತಿಲ್ಲ. ಈಗಲು ರಾಧಿಕಾ ಸಿನಿಮಾ ಮಾಡ್ತಿದ್ದಾರೆ. ನಿಜಕ್ಕೂ ಖುಷಿ ಆಗ್ತಿದೆ'' ಎಂದು ದರ್ಶನ್ ಸಂತಸ ವ್ಯಕ್ತಪಡಿಸಿದರು.
ಆ ಸಂದರ್ಭದಲ್ಲಿ 'ಮತ್ತೆ ನಟಿಸುವುದೇ ಬೇಡ' ಎಂದುಕೊಂಡಿದ್ದರಂತೆ ರಾಧಿಕಾ! ಕಾರಣ ಏನಾಗಿತ್ತು?
ಇದಕ್ಕೂ ಮೊದಲು ಮಾತನಾಡಿದ ರಾಧಿಕಾ ಕುಮಾರಸ್ವಾಮಿ ''ಈ ವರ್ಷ ನನ್ನ ಹುಟ್ಟುಹಬ್ಬದ ಸಂಭ್ರಮ ಹೆಚ್ಚಾಗಿದೆ. ಬಹಳ ಬ್ಯುಸಿ ಇದ್ದರೂ ನನ್ನ ಸಿನಿಮಾ ಕಾರ್ಯಕ್ರಮಕ್ಕೆ ದರ್ಶನ್ ಅವರು ಬಂದಿದ್ದಾರೆ. ಅವರು ಟ್ರೈಲರ್ ಲಾಂಚ್ ಮಾಡಿದ್ದು, ನನ್ನ ಬರ್ತಡೇಗೆ ಸಿಕ್ಕ ಬಹುದೊಡ್ಡ ಗಿಫ್ಟ್'' ಎಂದರು.
ಅಂದ್ಹಾಗೆ, ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ 'ಮಂಡ್ಯ' ಮತ್ತು 'ಅನಾಥರು' ಚಿತ್ರದಲ್ಲಿ ರಾಧಿಕಾ ಕುಮಾರಸ್ವಾಮಿ ನಾಯಕಿಯಾಗಿ ನಟಿಸಿದ್ದಾರೆ.