Don't Miss!
- News ಹುಬ್ಬಳ್ಳಿ ಹತ್ಯೆಯನ್ನು ಲವ್ ಜಿಹಾದ್ ಆಯಾಮದಲ್ಲಿ ತನಿಖೆ ನಡೆಸಿ: ಪ್ರಹ್ಲಾದ್ ಜೋಶಿ
- Technology ಇಂದು ಮತ್ತೆ ಮೊಟೊರೊಲಾ ಎಡ್ಜ್ 50 ಪ್ರೊ ಫೋನಿನ ಸ್ಪೆಷಲ್ ಸೇಲ್!..ಡಿಸ್ಕೌಂಟ್ ಎಷ್ಟು?
- Sports PBKS vs MI IPL 2024: ಮತ್ತೊಮ್ಮೆ ಕೊನೆಯ ಓವರ್ನಲ್ಲಿ ಮುಗ್ಗರಿಸಿದ ಪಂಜಾಬ್ ಕಿಂಗ್ಸ್ ಪ್ಲೇಆಫ್ ಸನ್ನಿವೇಶ ಹೇಗಿದೆ?
- Finance ಕಚ್ಚಾ ತೈಲ ಆಮದು ಗಣನೀಯ ಇಳಿಕೆ, ಪೆಟ್ರೋಲ್ ಡಿಸೇಲ್ ಬೆಲೆ ಹೆಚ್ಚಾಗುತ್ತಾ?
- Lifestyle ಶುಕ್ರವಾರ ವೈಭವ ಲಕ್ಷ್ಮಿ ವ್ರತ ಮಾಡೋದೇಕೆ..? ಹೇಗೆ ಆಚರಿಸಬೇಕು ಎಂಬ ಮಾಹಿತಿ ಇಲ್ಲಿದೆ..!
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ರಾಧಿಕಾ ಕುಮಾರಸ್ವಾಮಿ ನನಗಿಂತ ಸೀನಿಯರ್' - ದರ್ಶನ್
Recommended Video
''ರಾಧಿಕಾ ಕುಮಾರಸ್ವಾಮಿ ಅವರ ನನಗಿಂತ ಸೀನಿಯರ್. ದಮಯಂತಿ ಅಂತಹ ಸಿನಿಮಾ ಮಾಡುವುದಕ್ಕೆ ಡೆಡಿಕೇಶನ್ ಇದ್ದರೆ ಮಾತ್ರ ಸಾಧ್ಯ. ಅದಕ್ಕೆ ಗಟ್ಸ್ ಬೇಕು. ಟ್ರೈಲರ್ ನೋಡಿದಾಗ ರೋಮಾಂಚನ ಆಯ್ತು'' ಎಂದು ನಟ ದರ್ಶನ್ ಹೇಳಿದ್ದಾರೆ.
ರಾಧಿಕಾ ಕುಮಾರಸ್ವಾಮಿ ನಟನೆಯ 'ದಮಯಂತಿ' ಸಿನಿಮಾದ ಟ್ರೈಲರ್ ಲಾಂಚ್ ಮಾಡಿದ ಡಿ ಬಾಸ್, ಸಿನಿಮಾ ಹಾಗೂ ರಾಧಿಕಾ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ನಟಿ ರಾಧಿಕಾ ಮಗಳು ಸ್ಯಾಂಡಲ್ ವುಡ್ ನ 'ಈ ಸ್ಟಾರ್' ನಟನ ದೊಡ್ಡ ಅಭಿಮಾನಿಯಂತೆ
'ನಾನು ಮೆಜಿಸ್ಟಿಕ್ ಸಿನಿಮಾ ಮಾಡುವುದಕ್ಕೂ ಮೊದಲೇ, ರಾಧಿಕಾ 'ನೀಲಾ ಮೇಘ ಶ್ಯಾಮ' ಸಿನಿಮಾ ಮಾಡಿದ್ದರು. ಅವರು ನನಗಿಂತ ಒಂದು ಸಿನಿಮಾ ಸೀನಿಯರ್. ಅವರ ಕಾಲದಲ್ಲಿದ್ದ ನಟಿಯರು ಯಾರೂ ಸಿನಿಮಾ ಮಾಡ್ತಿಲ್ಲ. ಈಗಲು ರಾಧಿಕಾ ಸಿನಿಮಾ ಮಾಡ್ತಿದ್ದಾರೆ. ನಿಜಕ್ಕೂ ಖುಷಿ ಆಗ್ತಿದೆ'' ಎಂದು ದರ್ಶನ್ ಸಂತಸ ವ್ಯಕ್ತಪಡಿಸಿದರು.
ಆ ಸಂದರ್ಭದಲ್ಲಿ 'ಮತ್ತೆ ನಟಿಸುವುದೇ ಬೇಡ' ಎಂದುಕೊಂಡಿದ್ದರಂತೆ ರಾಧಿಕಾ! ಕಾರಣ ಏನಾಗಿತ್ತು?
ಇದಕ್ಕೂ ಮೊದಲು ಮಾತನಾಡಿದ ರಾಧಿಕಾ ಕುಮಾರಸ್ವಾಮಿ ''ಈ ವರ್ಷ ನನ್ನ ಹುಟ್ಟುಹಬ್ಬದ ಸಂಭ್ರಮ ಹೆಚ್ಚಾಗಿದೆ. ಬಹಳ ಬ್ಯುಸಿ ಇದ್ದರೂ ನನ್ನ ಸಿನಿಮಾ ಕಾರ್ಯಕ್ರಮಕ್ಕೆ ದರ್ಶನ್ ಅವರು ಬಂದಿದ್ದಾರೆ. ಅವರು ಟ್ರೈಲರ್ ಲಾಂಚ್ ಮಾಡಿದ್ದು, ನನ್ನ ಬರ್ತಡೇಗೆ ಸಿಕ್ಕ ಬಹುದೊಡ್ಡ ಗಿಫ್ಟ್'' ಎಂದರು.
ಅಂದ್ಹಾಗೆ, ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ 'ಮಂಡ್ಯ' ಮತ್ತು 'ಅನಾಥರು' ಚಿತ್ರದಲ್ಲಿ ರಾಧಿಕಾ ಕುಮಾರಸ್ವಾಮಿ ನಾಯಕಿಯಾಗಿ ನಟಿಸಿದ್ದಾರೆ.