Don't Miss!
- News ಬಿಸಿಲಿನ ಶಾಖಕ್ಕೆ ಬೇಸತ್ತು ಎಸಿ ಹೆಲ್ಮೆಟ್ ಮೊರೆಹೋದ ಟ್ರಾಫಿಕ್ ಪೊಲೀಸರು-ಎಲ್ಲಿ?
- Lifestyle ಸೌರಮಂಡಲದಲ್ಲಿದೆ 9ನೇ ಗ್ರಹ..! ಯಾವುದದು..? ಎಲ್ಲಿದೆ..?
- Automobiles ಟಿವಿಎಸ್ ಐಕ್ಯೂಬ್ಗೆ ನಡುಕ ಶುರು!: ಸದ್ಯದಲ್ಲೇ ಕಡಿಮೆ ಬೆಲೆ ಮಾರುಕಟ್ಟೆಗೆ ಬಜಾಜ್ ಚೇತಕ್ ಎಲೆಕ್ಟ್ರಿಕ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Sports LSG vs CSK IPL 2024: ಲಕ್ನೋ vs ಚೆನ್ನೈ ಪಂದ್ಯದ ವರದಿ, ಫ್ಯಾಂಟಸಿ ಡ್ರೀಮ್ ಟೀಂ, ಸಂಭಾವ್ಯ ಆಡುವ 11ರ ಬಳಗ
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತು ನಿಖಿಲ್ ಕುಮಾರ್ ಮುಖಾಮುಖಿಗೆ ವೇದಿಕೆ ಸಜ್ಜು
Recommended Video
ಜಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತು ನಿಖಿಲ್ ಕುಮಾರ್ ಮುಖಾಮುಖಿಗೆ ವೇದಿಕೆ ಸಜ್ಜಾಗಿದೆ. ಮಂಡ್ಯ ಚುನಾವಣೆ ನಂತರ ದರ್ಶನ್ ಮತ್ತು ನಿಖಿಲ್ ಇಬ್ಬರು ಎಲ್ಲಿಯೂ ಒಟ್ಟಿಗೆ ಕಾಣಿಸಿಕೊಂಡಿರಲಿಲ್ಲ. ಆದರೀಗ ಆ ಸಮಯ ಬಂದಿದೆ. ಈ ಸ್ಟಾರ್ ನಟರ ಸಮಾಗಮಕ್ಕೆ ಈ ಬಾರಿಯ ಶಿವರಾತ್ರಿ ಸಾಕ್ಷಿಯಾಗಲಿದೆ.
ಹೌದು, ಕುರುಕ್ಷೇತ್ರ ಸಿನಿಮಾದ ಶತದಿನೋತ್ಸವ ಅದ್ದೂರಿಯಾಗಿ ನಡೆಯುತ್ತಿದೆ. ನಿರ್ಮಾಪಕ ಮುನಿರತ್ನ ಕಾರ್ಯಕ್ರಮವನ್ನು ಅದ್ದೂರಿಯಾಗಿ ಮಾಡಲು ನಿರ್ಧರಿಸಿದ್ದಾರೆ. ಇದೆ ತಿಂಗಳು 21ಕ್ಕೆ ಶಿವರಾತ್ರಿಯ ದಿನ ಕುರುಕ್ಷೇತ್ರ 100ನೇ ದಿನದ ಕಾರ್ಯಕ್ರಮ ನಡೆಯುತ್ತಿದೆ. ಈ ಕಾರ್ಯಕ್ರಮದಲ್ಲಿ ಕುರುಕ್ಷೇತ್ರ ಕಲಾವಿದರೆಲ್ಲ ಭಾಗಿಯಾಗುವ ಸಾಧ್ಯತೆ ಇದೆ.
'ಡಿ' ಅಂದ್ರೆ ಡೆಡಿಕೇಷನ್: ಬರ್ತಡೇ ದಿನವೂ ವೃತ್ತಿಪರತೆ ಮೆರೆದ ಡಿ-ಬಾಸ್ ದರ್ಶನ್.!
ಅಭಿಮನ್ಯು ಪಾತ್ರಧಾರಿ ನಿಖಿಲ್ ಕೂಡ ಕಾರ್ಯಕ್ರಮದಲ್ಲಿ ಹಾಜರಾಗುವ ಸಾಧ್ಯತೆ ಇದೆ. ಇನ್ನು ಈ ಬಗ್ಗೆ ಇತ್ತೀಚಿಗೆ ಮಾತನಾಡಿದ ನಟ ದರ್ಶನ್ ಈ ಕಾರ್ಯಕ್ರಮದಲ್ಲಿ ಭಾಗಿಯಾಗುವುದಾಗಿ ಹೇಳಿದ್ದಾರೆ. ಹಾಗಾಗಿ ಈ ಇಬ್ಬರು ನಟರು ಶತದಿನೋತ್ಸವ ಕಾರ್ಯಕ್ರಮದಲ್ಲಿ ವೇದಿಕೆ ಹಂಚಿಕೊಳ್ಳುವ ಸಾಧ್ಯತೆ ಇದೆ. ಇನ್ನು ಅದ್ದೂರಿಯಾಗಿ ನಡೆಯುವ ಈ ಕಾರ್ಯಕ್ರಮದಲ್ಲಿ ಚಿತ್ರತಂಡ ಬಿಟ್ಟು ಬೇರೆ ಯಾರೆಲ್ಲ ಕಲಾವಿದರು ಭಾಗಿಯಾಗಲಿದ್ದಾರೆ ಎನ್ನುವುದು ಕುತೂಹಲ ಮೂಡಿಸಿದೆ.
ಅಂದ್ಹಾಗೆ ಈ ಕಾರ್ಯಕ್ರಮ ಬೆಂಗಳೂರಿನ ಜೆ.ಪಿ ಪಾರ್ಕ್ ನಲ್ಲಿ ನಡೆಯಲಿದೆ. ಸಂಜೆ 7ರಿಂದ ರಾತ್ರಿ 11 ಗಂಟೆವರೆಗೂ ಕಾರ್ಯಕ್ರಮ ನಡೆಯಲಿದೆ. ಕುರುಕ್ಷೇತ್ರ ಸಿನಿಮಾ ಕಳೆದ ವರ್ಷ ಆಗಸ್ಟ್ ನಲ್ಲಿ ತೆರೆಗೆ ಬಂದಿದೆ. ದುರ್ಯೋದನನಾಗಿ ದರ್ಶನ್ ಅಬ್ಬರಿಸಿದ್ದ ದರ್ಶನ್ ಗೆ ಅಭಿಮಾನಿಗಳು ಫಿದಾ ಆಗಿದ್ದರು.
ನಾಗಣ್ಣ ನಿರ್ದೇಶನ, ಮುನಿರತ್ನ ನಿರ್ಮಾಣದ ಕುರುಕ್ಷೇತ್ರದಲ್ಲಿ ಸಾಕಷ್ಟು ಕಲಾವಿದರು ಬಣ್ಣಹಚ್ಚಿದ್ದರು. ವಿಶೇಷ ಅಂದರೆ ರೆಬಲ್ ಸ್ಟಾರ್ ಅಂಬರೀಶ್ ಕೂಡ ಕಾಣಿಸಿಕೊಂಡಿದ್ದಾರೆ. ಸ್ಯಾಂಡಲ್ ವುಡ್ ನಲ್ಲಿ ಭರ್ಜರಿ ಗೆಲುವು ದಾಖಲಿಸಿದ ಕುರುಕ್ಷೇತ್ರ ಶತದಿನೋತ್ಸವವನ್ನು ತಡವಾಗಿ ಆರಿಸಿಕೊಳ್ಳುತ್ತಿದೆ.