Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ದರ್ಶನ್ 'ರಾಜವೀರ ಮದಕರಿನಾಯಕ' ಚಿತ್ರದಿಂದ ಬಂತು ಭರ್ಜರಿ ಸುದ್ದಿ
ಚಾಲೆಂಜಿಂಗ್ ಸ್ಟಾರ್ ದರ್ಶನ್ ಭಾರಿ ನಿರೀಕ್ಷೆಯ 'ರಾಜವೀರ ಮದಕರಿನಾಯಕ' ಸಿನಿಮಾದ ಮುಹೂರ್ತ ನಡೆದು ಅನೇಕ ದಿನಗಳಾಯಿತು. ಚಿತ್ರದುರ್ಗದಲ್ಲಿ ಮೊದಲ ಮುಹೂರ್ತ ಮಾಡಿಕೊಂಡು ನಂತರ ಬೆಂಗಳೂರಿನಲ್ಲಿ ಎರಡನೆ ಬಾರಿ ಅದ್ದೂರಿ ಮುಹೂರ್ತ ಮಾಡಿಕೊಳ್ಳುವ ಮೂಲಕ ಎರೆಡೆರಡು ಬಾರಿ ಮುಹೂರ್ತ ಮಾಡಿಕೊಂಡಿರುವ ಮದಕರಿನಾಯಕ ಇನ್ನು ಚಿತ್ರೀಕರಣಕ್ಕೆ ಇಳಿದಿಲ್ಲ.
ಯಾವಾಗ ಚಿತ್ರೀಕರಣ ಪ್ರಾರಂಭವಾಗುತ್ತೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಇದೆ. ಆದರೀಗ ಈ ಕುತೂಹಲಕ್ಕೆ ತೆರೆ ಬಿದ್ದಿದೆ. ಯಾಕಂದ್ರೆ ಮದಕರಿನಾಯಕ ಇದೆ ತಿಂಗಳು 21ರಿಂದ ಚಿತ್ರೀಕರಣಕ್ಕೆ ಹೊರಡುತ್ತಿದ್ದಾರೆ. ಈಗಾಗಲೆ ಎಲ್ಲಾ ತಯಾರಿಗಳನ್ನು ಮಾಡಿಕೊಂಡಿರುವ ಚಿತ್ರತಂಡ ಈಗ ಚಿತ್ರೀಕರಣದ ಅಖಾಡಕ್ಕೆ ಇಳಿಯುತ್ತಿದೆ.
'ರಾಬರ್ಟ್' ಬಿಗ್ ನ್ಯೂಸ್: ತ್ರಿಪಾತ್ರದಲ್ಲಿ ಡಿ ಬಾಸ್ ದರ್ಶನ್!
ವಿಶೇಷ ಅಂದರೆ ಈಗಾಗಲೆ ದರ್ಶನ್ ಅವರಿಗೆ ಮದಕರಿನಾಯಕ ಕಾಸ್ಟ್ಯೂಮ್ ಹಾಕಿ ಕಾಸ್ಟ್ಯೂಮ್ ಟೆಸ್ಟ್ ಕೂಡ ಮುಗಿದಿದೆಯಂತೆ. ಇನ್ನೇನಿದ್ದರು ಚಿತ್ರೀಕರಣಕ್ಕೆ ಹೊರಡುವುದೊಂದೆ ಬಾಕಿ ಉಳಿಸಿಕೊಂಡಿದೆ. ಚಿತ್ರದ ಚಿತ್ರೀಕರಣ ಕೇರಳದಿಂದ ಪ್ರಾರಂಭಿಸುವ ನಿರ್ಧಾರ ಮಾಡಿದೆ ಮದಕರಿನಾಯಕ ತಂಡ.
ಕೇರಳದ ಸುಂದರ ಜಲಪಾತದ ಬಳಿ ಮೊದಲು ಮೂರ್ನಾಲ್ಕು ದಿನಗಳ ಚಿತ್ರೀಕರಣ ನಡೆಸಿ ನಂತರ ಮತ್ತೆ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ. ಆ ನಂತರ ಬೆಂಗಳೂರಿನ ಸ್ಟೂಡಿಯೊದಲ್ಲಿ ಸೆಟ್ ಹಾಕಿ ಚಿತ್ರೀಕರಣ ಮಾಡಲಾಗುತ್ತೆ. ಇನ್ನು ಚಿತ್ರದಲ್ಲಿ ಯಾರೆಲ್ಲ ಕಾಣಿಕೊಳ್ಳಲಿದ್ದಾರೆ ಎನ್ನುವುದು ಇನ್ನು ಫೈನಲ್ ಆಗಿಲ್ಲ.
ಈಗಾಗಲೆ ಕಲಾವಿದರ ಆಯ್ಕೆಯಲ್ಲಿ ಚಿತ್ರತಂಡ ನಿರವಾಗಿದೆ. ಸಾಕಷ್ಟು ಬಾರಿ ಚರ್ಚೆನಡೆಸುತ್ತಿದ್ದಾರಂತೆ. ದರ್ಶನ್ ಜೊತೆ ನಾಯಕಿಯಾಗಿ ಯಾರು ಕಾಣಿಕೊಳ್ಳಲಿದ್ದಾರೆ ಎನ್ನುವುದು ಅಭಿಮಾನಿಗಳ ಕುತೂಹಲ. ದೊಡ್ಡ ದೊಡ್ಡ ನಟಿಯ ಹೆಸರು ಕೇಳಿಬರುತ್ತಿದೆ. ಆದರೆ ಯಾರು ನಾಯಕಿಯಾಗಿಯಾಗ್ತಾರೆ ಎನ್ನುವುದೆ ಸದ್ಯದ ಕುತೂಹಲ. ಆದರೆ ಚಿತ್ರದಲ್ಲಿ ಇಬ್ಬರು ನಾಯಕಿಯರು ಇರಲಿದ್ದಾರೆ ಎಂದು ಹೇಳಲಾಗುತ್ತಿದೆ.
ರಾಜ ವೀರ ಮದಕರಿ ನಾಯಕ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ನಿರ್ದೇಶನದಲ್ಲಿ ಮೂಡಿಬರುತ್ತಿರುವ ಸಿನಿಮಾ. ಚಿತ್ರಕ್ಕೆ ನಿರ್ಮಾಪಕ ರಾಜ್ ಲೈನ್ ವೆಂಕಟೇಶ್ ಬಂಡವಾಳ ಹೂಡುತ್ತಿದ್ದಾರೆ. ದೊಡ್ಡ ಮಟ್ಟದಲ್ಲಿ ತಯಾರಾಗುತ್ತಿರುವ ರಾಜ ವೀರ ಮದಕರಿನಾಯಕ ಭಾರತೀಯ ಚಿತ್ರರಂಗದಲ್ಲಿಯೆ ಅದ್ದೂರಿ ಸಿನಿಮಾವಾಗಲಿದೆ ಎನ್ನುವುದು ಚಿತ್ರತಂಡದ ನಂಬಿಕೆ.