Don't Miss!
- News Bengaluru Rain: ಬೆಂಗಳೂರಿನ ಹಲವೆಡೆ ಗುಡುಗು ಜಿನುಗು ಮಳೆ.. ಮನೆಯಿಂದ ಹೊರಬಂದು ಕುಣಿದು ಕುಪ್ಪಳಿಸಿದ ಮಕ್ಕಳು
- Automobiles ಸಣ್ಣ ಕುಟುಂಬಗಳಿಗೆ ಬೆಸ್ಟ್ ಕಾರು... 5.36 ಲಕ್ಷ ರೂ. ಬೆಲೆ... 34 ಕಿ.ಮೀ ಮೈಲೇಜ್!
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Technology ಒಪ್ಪೋ ಸಂಸ್ಥೆಯ ಈ ಫೋನ್ ಬೆಲೆಯಲ್ಲಿ ಭರ್ಜರಿ ಇಳಿಕೆ; ಆಫರ್ಗೆ ಗ್ರಾಹಕರು ಫಿದಾ!
- Sports ಐಪಿಎಲ್ನಿಂದ ದೂರವುಳಿದಿದ್ದ ಟೀಮ್ ಇಂಡಿಯಾ ವೇಗಿ ಟಿ20 ವಿಶ್ವಕಪ್ ಆಡುತ್ತಾರಾ?: ಆಟಗಾರ ಹೇಳಿದ್ದೇನು?
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬ್ರೇಕ್ ಬಳಿಕ ಅಖಾಡಕ್ಕೆ ಸಜ್ಜಾದ ಡಿ ಬಾಸ್: ಹೊಸ ಲುಕ್, ಹೊಸ ಸ್ಟೈಲ್!
ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ರಾಬರ್ಟ್ ಸಿನಿಮಾ ಚಿತ್ರೀಕರಣ ಮುಗಿಸಿ ಬಿಡುಗಡೆಗೆ ಸಜ್ಜಾಗಿದೆ. ಚಿತ್ರಮಂದಿರಗಳಿಗೆ ಅವಕಾಶ ಸಿಗುತ್ತಿದ್ದಂತೆ ರಿಲೀಸ್ ದಿನಾಂಕ ಘೋಷಿಸಿ ಪ್ರೇಕ್ಷಕರ ಮುಂದೆ ಬರುವ ತಯಾರಿ ನಡೆಸಿದೆ.
ಎಲ್ಲ ಅಂದುಕೊಂಡಂತೆ ಆಗಿದ್ದರೆ ಏಪ್ರಿಲ್ ತಿಂಗಳಲ್ಲಿ ರಾಬರ್ಟ್ ತೆರೆಗೆ ಬರಬೇಕಿತ್ತು. ಆದ್ರೆ, ಕೊರೊನಾ ಲಾಕ್ಡೌನ್ ಎಲ್ಲದಕ್ಕೂ ಮುಳುವಾಯಿತು. ಅಲ್ಲಿಂದ ನಟ ದರ್ಶನ್ ಸಂಪೂರ್ಣವಾಗಿ ವಿಶ್ರಾಂತಿಯಲ್ಲಿದ್ದಾರೆ. ಮೈಸೂರು ಫಾರ್ಮ್ ಹೌಸ್, ಪ್ರಾಣಿಗಳ ಹಾರೈಕೆ ಹೀಗೆ ಖಾಸಗಿ ಜೀವನವನ್ನು ಎಂಜಾಯ್ ಮಾಡ್ತಿದ್ದರು. ಇದೀಗ, ಕೊರೊನಾ ಬ್ರೇಕ್ ಮುಗಿದಿದೆ. ಮತ್ತೆ ಶೂಟಿಂಗ್ ಆರಂಭಿಸುತ್ತಿದ್ದು, ಅದಕ್ಕಾಗಿ ಡಿ ಬಾಸ್ ಸಂಪೂರ್ಣವಾಗಿ ಲುಕ್ ಬದಲಾಯಿಸಿಕೊಂಡಿದ್ದಾರೆ. ಯಾವ ಚಿತ್ರಕ್ಕೆ? ಮುಂದೆ ಓದಿ...
ಅಕ್ಟೋಬರ್ನಿಂದ ಮದಕರಿ ನಾಯಕ!
ಕೇರಳದಲ್ಲಿ ಮೊದಲ ಹಂತದ ಚಿತ್ರೀಕರಣ ಮುಗಿಸಿರುವ ರಾಜವೀರ ಮದಕರಿ ನಾಯಕ ಚಿತ್ರತಂಡ ಈಗ ಮತ್ತೊಂದು ಹಂತದ ಶೂಟಿಂಗ್ಗೆ ಸಜ್ಜಾಗಿದೆ. ಅಕ್ಟೋಬರ್ ತಿಂಗಳಿನಿಂದ ಮದಕರಿ ನಾಯಕ ಮತ್ತೆ ಅಖಾಡಕ್ಕೆ ಇಳಿಯಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ರಾಕ್ಲೈನ್ ವೆಂಕಟೇಶ್ 'ಮದಕರಿ ನಾಯಕ' ಚಿತ್ರ ಮಾಡಲು 'ಈ ವ್ಯಕ್ತಿ' ಪ್ರೇರಣೆ
ಶೂಟಿಂಗ್ಗೆ ಡಿ ಬಾಸ್ ರೆಡಿ
ರಾಜವೀರ ಮದಕರಿ ನಾಯಕ ಚಿತ್ರೀಕರಣಕ್ಕಾಗಿ ದರ್ಶನ್ ರೆಡಿಯಾಗಿದ್ದಾರೆ. ಐತಿಹಾಸಿಕ ಚಿತ್ರಕ್ಕಾಗಿ ದರ್ಶನ್ ಸಜ್ಜಾಗಿದ್ದು, ಮೀಸೆ ಫುಲ್ ಟ್ರಿಂ ಮಾಡಿದ್ದು, ಹೇರ್ ಸ್ಟೈಲ್ ಸಹ ಬದಲಾಯಿಸಿಕೊಂಡಿದ್ದಾರೆ. ಆ ಫೋಟೋಗಳು ಸಹ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಕರ್ನಾಟಕದಲ್ಲೇ ಚಿತ್ರೀಕರಣ
ರಾಜಸ್ಥಾನದಲ್ಲಿ ಮದಕರಿ ನಾಯಕ ಸಿನಿಮಾದ ಚಿತ್ರೀಕರಣ ಮಾಡಬೇಕಿತ್ತು. ಕೊರೊನಾ ವೈರಸ್ ಭೀತಿಯಿರುವ ಕಾರಣ ಸದ್ಯಕ್ಕೆ ಬೆಂಗಳೂರು, ಹುಬ್ಬಳ್ಳಿ, ಚಿತ್ರದುರ್ಗ ಸುತ್ತಮುತ್ತ ಶೂಟಿಂಗ್ ಮಾಡುವ ಪ್ಲಾನ್ ಆಗಿದೆ.
ಐಪಿಎಲ್ ಮ್ಯಾಚ್ ನೋಡುವ ಮುನ್ನಾ ದರ್ಶನ್ ಹೇಳಿರುವ ಈ ಮಾತು ಕೇಳಿ
Recommended Video
ಸುಮಲತಾ ಸಹ ನಟನೆ
ಹಿರಿಯ ನಿರ್ದೇಶಕ ಎಸ್ ವಿ ರಾಜೇಂದ್ರ ಸಿಂಗ್ ಬಾಬು ಈ ಚಿತ್ರ ನಿರ್ದೇಶನ ಮಾಡುತ್ತಿದ್ದಾರೆ. ರಾಕ್ಲೈನ್ ವೆಂಕಟೇಶ್ ನಿರ್ಮಾಣವಿದೆ. ಸಂಸದೆ ಸುಮಲತಾ ಅಂಬರೀಶ್ ವಿಶೇಷ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಹಂಸಲೇಖ ಅವರ ಸಂಗೀತ ಇರಲಿದೆ.