Don't Miss!
- Technology ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಡೀಪ್ಫೇಕ್ ದೊಡ್ಡ ಕಳವಳಕಾರಿ ಎಂದ ಮೋದಿ
- News ಚಿತ್ರದುರ್ಗದಲ್ಲಿ ಬಿಜೆಪಿಗೆ ಬಂಡಾಯದ ಬಿಸಿ: ಅಭ್ಯರ್ಥಿ ಬದಲಿಸದಿದ್ದರೆ ಪಕ್ಷೇತರ ಸ್ಪರ್ಧೆ, ಏ.3ಕ್ಕೆ ನಾಮಪತ್ರ ಸಲ್ಲಿಕೆ?
- Automobiles 20 ವರ್ಷದ ಬಳಿಕ ಲ್ಯಾಂಬೋರ್ಗಿನಿ ಲೋಗೋಗೆ ಹೊಸ ಟಚ್: ಈ ಕಂಪನಿಯ ಕಾರುಗಳು ಯಾಕೆ ಫೇಮಸ್?
- Lifestyle ಯಾವ ದಿಕ್ಕಿಗೆ ತಲೆ ಇಟ್ಟು ಮಲಗಬಾರದು..? ಹಿರಿಯರು ಈ ರೀತಿ ಹೇಳೋದೇಕೆ.?
- Sports RCB vs KKR: ಗೇಮ್ ಚೇಂಜರ್ ಆಗಬಹುದು ಈ ಪ್ಲೇಯರ್ಸ್; ಈ ಆಟಗಾರರ ಮೇಲೆ ಕಣ್ಣು
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸೆಂಚುರಿ ಬಾರಿಸಿದ ದರ್ಶನ್ 'ಯಜಮಾನ' ಸಿನಿಮಾ
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ 'ಯಜಮಾನ' ಸಿನಿಮಾ ಯಶಸ್ವಿ ಪ್ರದರ್ಶನ ಕಾಣುತ್ತಿದೆ. 100 ದಿನಗಳನ್ನು ಪೂರೈಸಿ ಭರ್ಜರಿಯಾಗಿ ಮುನ್ನುಗುತ್ತಿದೆ. ಶತಕದ ಗಡಿದಾಟಿದ್ರು 'ಯಜಮಾನ'ನಿಗೆ ಇದ್ದ ಬೇಡಿಕೆ ಮಾತ್ರ ಇನ್ನು ಕಮ್ಮಿ ಆಗಿಲ್ಲ. ಸ್ಯಾಂಡಲ್ ವುಡ್ ನಲ್ಲಿ ಭಾರಿ ನಿರೀಕ್ಷೆಯೊಂದಿಗೆ ತೆರೆಗೆ ಬಂದ 'ಯಜಮಾನ' ಈಗ ನೂರರ ಸಂಭ್ರಮ ಆಚರಿಸುವ ಮೂಲಕ ಗೆದ್ದು ಬೀಗುತ್ತಿದೆ.
ಸೆಂಚುರಿ ಬಾರಿಸಿ ಮುನ್ನುಗ್ಗುತ್ತಿರುವ 'ಯಜಮಾನ'ನಿಗೆ ಅಭಿಮಾನಿಗಳ ಮಚ್ಚಿಗೆಯ ಮಹಾಪೂರವೆ ಹರಿದು ಬರುತ್ತಿದೆ. ಚಿತ್ರ ಮಾರ್ಚ್ 1 ಕ್ಕೆ ದೇಶದಾದ್ಯಂತ ತೆರೆಗೆ ಬಂದಿತ್ತು. ಇನ್ನು ಕೂಡ ಸಾಕಷ್ಟು ಚಿತ್ರಮಂದಿರಗಳಲ್ಲಿ ಯಶಸ್ವಿ ಪ್ರದರ್ಶನ ಕಾಣುತ್ತಿದೆ.
ಅಂದ್ಹಾಗೆ 'ಯಜಮಾನ' ಚಿತ್ರಕ್ಕೆ ಪೊನ್ನು ಕುಮಾರ್ ಮತ್ತು ವಿ ಹರಿಕೃಷ್ಣ ಆಕ್ಷನ್ ಕಟ್ ಹೇಳಿದ್ದಾರೆ. 'ಯಜಮಾನ' ಸಿನಿಮಾ ಮೂಲಕ ವಿ ಹರಿಕೃಷ್ಣ ನಿರ್ದೇಶಕರಾಗಿಯು ಗುರುತಿಸಿಕೊಂಡಿದ್ದಾರೆ. ಸಂಗೀತ ಸಂಯೋಜನೆ ಜವಾಬ್ದಾರಿಯ ಜೊತೆಗೆ ನಿರ್ದೇಶನದ ವಿಭಾಗದಲ್ಲಿ ಕೆಲಸ ಮಾಡಿದ್ದಾರೆ.
'ಯಜಮಾನ' ಪಕ್ಕಾ ಫ್ಯಾಮಿಲಿ ಚಿತ್ರ ಜೊತೆಗೆ ಮಾಸ್ ಟಚ್ ಕೂಡ ಇದೆ. ಆಕ್ಷನ್, ಸೆಂಟಿಮೆಂಟ್ ಎಲ್ಲವು 'ಯಜಮಾನ'ಲ್ಲಿದೆ. ಚಿತ್ರದಲ್ಲಿ ಹಿರಿಯ ನಟ ದೇವರಾಜ್ ಪ್ರಮುಕ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಇನ್ನು ನಾಯಕಿಯರಾಗಿ ರಶ್ಮಿಕಾ ಮಂದಣ್ಣ ಮತ್ತು ತ್ಯಾನ್ಯಾ ಹೋಪ್ ಮಿಂಚಿದ್ದಾರೆ.