Don't Miss!
- News Bengaluru Heat Wave: ಮುಂದಿನ ಒಂದು ವಾರ 'ರಣಬಿಸಿಲು': ಏ.2 ತನಕ 'ಶಾಖ'ದ ಅಲೆ ಮುನ್ಸೂಚನೆ
- Finance ನಿಮಗೆ ಗೊತ್ತಲ್ಲದೇ ನಿಮ್ಮ ಹೆಸರಲ್ಲಿ ಖಾತೆ ತೆರೆದಿರ್ತಾರೆ, ಪಿಂಚಣಿ ಯೋಜನೆ ಬಗ್ಗೆ ಹುಷಾರಾಗಿರಿ
- Automobiles ಜನಪ್ರಿಯ ಕಂಪನಿಗಳಿಂದ ಮುಂಬರುವ ಪುಟ್ಟ ಕಾರುಗಳಿವು.. ಇವೇ ಮಿಡಲ್ ಕ್ಲಾಸ್ ಜನರ ಫೇವರಿಟ್ ಆಗುವುದು ಪಕ್ಕಾ!
- Sports IPL 2024: ಐಪಿಎಲ್ನಲ್ಲಿ ವಿಶಿಷ್ಟ ದಾಖಲೆ ಬರೆದ ಜಯದೇವ್ ಉನಾದ್ಕಟ್; ಈ ಸಾಧನೆ ಮಾಡಿದ ಮೊದಲ ಭಾರತೀಯ
- Technology iPhones: ಬೇಕಿತ್ತಾ ಇದೆಲ್ಲ? ನಕಲಿ ಐಫೋನ್ ಮೂಲಕ ಆಪಲ್ಗೆ ಪಂಗನಾಮ ಹಾಕಿದವನಿಗೆ ಜೈಲೂಟ
- Lifestyle ಮದ್ಯದ ಅಮಲಲ್ಲಿ ತೇಲಾಡುತ್ತಿದ್ದ ಶಿಕ್ಷಕನಿಗೆ ಮಕ್ಕಳಿಂದಲೇ ಚಪ್ಪಲಿ ಏಟು..!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸೆಂಚುರಿ ಬಾರಿಸಿದ ದರ್ಶನ್ 'ಯಜಮಾನ' ಸಿನಿಮಾ
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ 'ಯಜಮಾನ' ಸಿನಿಮಾ ಯಶಸ್ವಿ ಪ್ರದರ್ಶನ ಕಾಣುತ್ತಿದೆ. 100 ದಿನಗಳನ್ನು ಪೂರೈಸಿ ಭರ್ಜರಿಯಾಗಿ ಮುನ್ನುಗುತ್ತಿದೆ. ಶತಕದ ಗಡಿದಾಟಿದ್ರು 'ಯಜಮಾನ'ನಿಗೆ ಇದ್ದ ಬೇಡಿಕೆ ಮಾತ್ರ ಇನ್ನು ಕಮ್ಮಿ ಆಗಿಲ್ಲ. ಸ್ಯಾಂಡಲ್ ವುಡ್ ನಲ್ಲಿ ಭಾರಿ ನಿರೀಕ್ಷೆಯೊಂದಿಗೆ ತೆರೆಗೆ ಬಂದ 'ಯಜಮಾನ' ಈಗ ನೂರರ ಸಂಭ್ರಮ ಆಚರಿಸುವ ಮೂಲಕ ಗೆದ್ದು ಬೀಗುತ್ತಿದೆ.
ಸೆಂಚುರಿ ಬಾರಿಸಿ ಮುನ್ನುಗ್ಗುತ್ತಿರುವ 'ಯಜಮಾನ'ನಿಗೆ ಅಭಿಮಾನಿಗಳ ಮಚ್ಚಿಗೆಯ ಮಹಾಪೂರವೆ ಹರಿದು ಬರುತ್ತಿದೆ. ಚಿತ್ರ ಮಾರ್ಚ್ 1 ಕ್ಕೆ ದೇಶದಾದ್ಯಂತ ತೆರೆಗೆ ಬಂದಿತ್ತು. ಇನ್ನು ಕೂಡ ಸಾಕಷ್ಟು ಚಿತ್ರಮಂದಿರಗಳಲ್ಲಿ ಯಶಸ್ವಿ ಪ್ರದರ್ಶನ ಕಾಣುತ್ತಿದೆ.
ಅಂದ್ಹಾಗೆ 'ಯಜಮಾನ' ಚಿತ್ರಕ್ಕೆ ಪೊನ್ನು ಕುಮಾರ್ ಮತ್ತು ವಿ ಹರಿಕೃಷ್ಣ ಆಕ್ಷನ್ ಕಟ್ ಹೇಳಿದ್ದಾರೆ. 'ಯಜಮಾನ' ಸಿನಿಮಾ ಮೂಲಕ ವಿ ಹರಿಕೃಷ್ಣ ನಿರ್ದೇಶಕರಾಗಿಯು ಗುರುತಿಸಿಕೊಂಡಿದ್ದಾರೆ. ಸಂಗೀತ ಸಂಯೋಜನೆ ಜವಾಬ್ದಾರಿಯ ಜೊತೆಗೆ ನಿರ್ದೇಶನದ ವಿಭಾಗದಲ್ಲಿ ಕೆಲಸ ಮಾಡಿದ್ದಾರೆ.
'ಯಜಮಾನ' ಪಕ್ಕಾ ಫ್ಯಾಮಿಲಿ ಚಿತ್ರ ಜೊತೆಗೆ ಮಾಸ್ ಟಚ್ ಕೂಡ ಇದೆ. ಆಕ್ಷನ್, ಸೆಂಟಿಮೆಂಟ್ ಎಲ್ಲವು 'ಯಜಮಾನ'ಲ್ಲಿದೆ. ಚಿತ್ರದಲ್ಲಿ ಹಿರಿಯ ನಟ ದೇವರಾಜ್ ಪ್ರಮುಕ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಇನ್ನು ನಾಯಕಿಯರಾಗಿ ರಶ್ಮಿಕಾ ಮಂದಣ್ಣ ಮತ್ತು ತ್ಯಾನ್ಯಾ ಹೋಪ್ ಮಿಂಚಿದ್ದಾರೆ.