ಕೃಷಿ ರಾಯಭಾರಿಯಾಗಿ ತಾವು ಮಾಡಲಿರುವ ಕಾರ್ಯದ ಬಗ್ಗೆ ದರ್ಶನ್ ಮಾತು

ನಟ ದರ್ಶನ್ ಅವರು ಕೃಷಿ ಇಲಾಖೆಯ ರಾಯಭಾರಿಯಾಗಿ ನೇಮಕಗೊಂಡಿದ್ದು. ಕೃಷಿ ಇಲಾಖೆಯ ರಾಯಭಾರಿಯಾಗಿ ಪದಗ್ರಹಣ ಕಾರ್ಯಕ್ರಮವನ್ನು ಇಂದು ವಿಕಾಸ ಸೌಧದಲ್ಲಿ ಆಯೋಜಿಸಲಾಗಿತ್ತು.

Recommended Video

ರಾಬರ್ಟ್ ಬಗ್ಗೆ ಅಚ್ಚರಿಯ ಹೇಳಿಕೆ ಕೊಟ್ಟ ಯಡಿಯೂರಪ್ಪ | Roberrt | Darshan | Filmibeat Kannada

ಸಮಾರಂಭದಲ್ಲಿ ಮಾತನಾಡಿದ ದರ್ಶನ್, 'ನಾನು ಬಹಳ ದೊಡ್ಡದೇನು ಮಾಡುತ್ತಿಲ್ಲ, ಸರ್ಕಾರದಿಂದ ರೈತರಿಗೆ ಏನೇನು ಸವಲತ್ತುಗಳಿರುತ್ತವೆಯೋ ಅದನ್ನು ಜಾಹೀರಾತು ಮೂಲಕ ರೈತರಿಗೆ ತಲುಪಿಸುವ ಕಾರ್ಯ ಅಷ್ಟನ್ನೇ ಮಾಡುತ್ತಿದ್ದೇವೆ' ಎಂದರು.

'ರೈತ ಎಂಬುದು ಎಮೋಷನ್ (ಭಾವನಾತ್ಮಕ ವಿಷಯ) ಎಂದು ಎಲ್ಲರು ಹೇಳುತ್ತಾರೆ, ಆದರೆ ಅದು ಹಾಗಲ್ಲ, ಅದು ಬ್ಲಡ್ ರಿಲೇಶನ್, (ರಕ್ತ ಸಂಬಂಧ) ಅವರು ಕೃಷಿ ಮಾಡಿ ನಮಗೆ ಅನ್ನ ಕೊಟ್ಟರಷ್ಟೆ ನಮ್ಮ ದೇಹದಲ್ಲಿ ರಕ್ತಪರಿಚಲನೆ ಸಾಧ್ಯ. ನನ್ನ ಕೈಯಿಂದ ರೈತರಿಗೆ ಏನೇನು ಒಳ್ಳೆಯದು ಮಾಡಲು ಸಾಧ್ಯವೋ ಅಷ್ಟು ಒಳ್ಳೆಯ ಕಾರ್ಯಕ್ರಗಳನ್ನು ನಾನು ಮಾಡುತ್ತೇನೆ' ಎಂದು ಭರವಸೆ ನೀಡಿದರು ದರ್ಶನ್.

 Darshan Talked What His Job As Karnataka Agriculture Ambassador

ಭಾಷಣದ ಆರಂಭದಲ್ಲಿ ಕೃಷಿ ಸಚಿವ ಬಿಸಿ ಪಾಟೀಲ್ ಅವರನ್ನು ಹೊಗಳಿದ ನಟ ದರ್ಶನ್, 'ಬಿಸಿ ಪಾಟೀಲ್ ಅವರು ಮೊದಲಿಗೆ ಪೊಲೀಸ್ ನೌಕರರಾಗಿದ್ದರು. ಆ ನಂತರ ನಟರಾದರು, ಈಗ ಸಚಿವರಾಗಿದ್ದಾರೆ. ಅಲ್ಲಿಗೆ ಅವರು ಜೀವನವೆಲ್ಲಾ ಜನರ ಸೇವೆಯ ದಾರಿಯನ್ನು ಮಾತ್ರವೇ ಆಯ್ಕೆ ಮಾಡಿಕೊಂಡಿದ್ದಾರೆ' ಎಂದರು ದರ್ಶನ್.

ಸಮಾರಂಭದಲ್ಲಿ ಹಾಜರಿದ್ದ ಎಲ್ಲರಿಗೂ ಗೌರವ ಪೂರ್ವಕವಾಗಿ ವಂದಿಸಿದರು ದರ್ಶನ್. ಸಿಎಂ ಯಡಿಯೂರಪ್ಪ ಅವರಿಗೆ ವಿಶೇಷ ವಂದನೆಗಳನ್ನು ಸಲ್ಲಿಸಿದರು. ಸಂದೇಶ್ ನಾಗರಾಜ್ ಅವರೂ ಸಹ ಸಮಾರಂಭದಲ್ಲಿ ಹಾಜರಿದ್ದರು.

ನಟ ದರ್ಶನ್ ಅವರು ಕರ್ನಾಟಕ ಕೃಷಿ ಇಲಾಖೆಯ ರಾಯಭಾರಿ ಆಗಿ ನೇಮಕಗೊಂಡಿದ್ದಾರೆ. ರಾಯಭಾರಿ ಆಗಲು ಯಾವುದೇ ಸಂಭಾವನೆಯನ್ನು ದರ್ಶನ್ ಅವರು ಸರ್ಕಾರದಿಂದ ಪಡೆದಿಲ್ಲ.

More from Filmibeat

English summary
Darshan talked about what his job as Karnataka agriculture ambassador in future days.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X