Don't Miss!
- News ಲೋಕಸಭಾ ಚುನಾವಣೆ: ಮೈಸೂರು ಜಿಲ್ಲೆಯಲ್ಲಿ ಭದ್ರತೆಗೆ 5 ಸಾವಿರ ಪೊಲೀಸರ ನಿಯೋಜನೆ
- Sports IPL 2024: ಆರ್ಸಿಬಿಗೆ ವಿರಾಟ್, ಪಾಟಿದಾರ್ ಆಸರೆ: ಹೈದರಾಬಾದ್ಗೆ ಸವಾಲಿನ ಟಾರ್ಗೆಟ್
- Lifestyle ಪುಟ್ಟ ಕಂದಮ್ಮಗಳ ಮುಖದಲ್ಲಿ ನಗು ತರಿಸಲು ಟೀಚರ್ ಮಾಡಿದ ಕೆಲಸ ನೋಡಿ, ಮಕ್ಕಳ ಪಾಲಿನ ದೇವತೆ ಇವರು
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕ್ರಿಸ್ಮಸ್ಗೆ 'ರಾಬರ್ಟ್' ದರ್ಶನ್ ಶುಭಾಶಯ
ನಟ ದರ್ಶನ್ ಅವರು ಕ್ರಿಸ್ಮಸ್ ಹಬ್ಬದಂದು ಎಲ್ಲ ಕ್ರೈಸ್ತ ಬಾಂಧವರಿಗೆ ಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ.
ಟ್ವಿಟ್ಟರ್ನಲ್ಲಿ ಶುಭಾಶಯ ಕೋರಿರುವ ದರ್ಶನ್, 'ಗೆಳೆತನದ ಮಹತ್ವ ಸಾರುವ, ಬಾಂಧವ್ಯವನ್ನು ವೃದ್ಧಿಸುವ, ಖುಷಿಯನ್ನು ಹಂಚುವ ಈ ಕ್ರಿಸ್ಮಸ್ ಹಬ್ಬದ ಸಂದರ್ಭದಲ್ಲಿ ಎಲ್ಲಾ ಕ್ರೈಸ್ತ ಬಾಂಧವರಿಗೆ ಹಾರ್ಧಿಕ ಶುಭಾಶಯಗಳು. ಎಲ್ಲರ ಮನೆ ಮನಗಳಲ್ಲಿ ಶಾಂತಿ- ನೆಮ್ಮದಿ ನೆಲಸಲಿ ಎಂದು ಆಶಿಸುತ್ತೇನೆ.' ಎಂದಿದ್ದಾರೆ. ಶುಭಾಶಯದ ಜೊತೆಗೆ ರಾಬರ್ಟ್ ಸಿನಿಮಾದ ತಮ್ಮದೇ ಚಿತ್ರಗಳನ್ನು ಹಂಚಿಕೊಂಡಿದ್ದಾರೆ ದರ್ಶನ್.
ದರ್ಶನ್ ಅಭಿನಯದ ಮುಂದಿನ ಸಿನಿಮಾ ರಾಬರ್ಟ್ ಕಡೆಯಿಂದ ಕ್ರಿಸ್ಮಸ್ಗೆ ಉಡುಗೊರೆ ನೀಡಲಾಗುತ್ತಿದೆ. ವಿಶೇಷ ರಾಬರ್ಟ್ ಮರ್ಚಂಡೈಸ್ ಗಳನ್ನು ಇಂದು ಬಿಡುಗಡೆ ಮಾಡಲಾಗುತ್ತಿದ್ದು, ರಾಬರ್ಟ್ ಫೋಟೊಗಳು, ದರ್ಶನ್ ಹೆಸರುಳ್ಳ ವಿಶೇಷ ಉಡುಗೊರೆಗಳನ್ನು ನೀಡಲಾಗುತ್ತಿದೆ. ಈ ಉಡುಗೊರೆಗಳನ್ನು ಆನ್ಲೈನ್ನಲ್ಲಿ ಖರೀದಿ ಸಹ ಮಾಡಬಹುದಾಗಿದೆ.
ದರ್ಶನ್ ಅಭಿನಯದ ಮುಂಬರುವ ಸಿನಿಮಾ 'ರಾಬರ್ಟ್' ನಲ್ಲಿ ದರ್ಶನ್ ಕ್ರೈಸ್ತ ಧರ್ಮೀಯನ ಪಾತ್ರ ಮಾಡಿದ್ದಾರೆ ಎನ್ನಲಾಗುತ್ತಿದೆ. ರಾಬರ್ಟ್ ಸಿನಿಮಾದ ಪೋಸ್ಟರ್ಗಳಲ್ಲಿ ಇದು ಗೊತ್ತಾಗುತ್ತಿದೆ. ಸಿನಿಮಾದಲ್ಲಿ ವಿನೋದ್ ಪ್ರಭಾಕರ್ ಸಹ ಇದ್ದು, ಗೆಳೆತನದ ಕತೆ ಸಾರುವ ಸಿನಿಮಾ ಇದಾಗಿರಲಿದೆ.
ರಾಬರ್ಟ್ ಸಿನಿಮಾವನ್ನು ತರುಣ್ ಸುಧೀರ್ ನಿರ್ದೇಶಿಸಿದ್ದು, ಉಮಾಪತಿ ಶ್ರೀನಿವಾಸ್ ನಿರ್ಮಿಸಿದ್ದಾರೆ. ಸಿನಿಮಾದಲ್ಲಿ ಆಶಾ ಭಟ್ ನಾಯಕಿಯಾಗಿದ್ದು, ದೇವರಾಜ್, ರವಿಶಂಕರ್, ಜಗಪತಿ ಬಾಬು ಇನ್ನೂ ಹಲವರು ಪ್ರತಿಭಾವಂತ ನಟರ ದಂಡೇ ಇದೆ.
Recommended Video
ದರ್ಶನ್ ಮಾತ್ರವಲ್ಲದೆ ಇನ್ನೂ ಕೆಲವು ನಟ-ನಟಿಯರು ಕ್ರಿಸ್ಮಸ್ ಹಬ್ಬಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಶುಭಾಶಯ ಕೋರಿದ್ದಾರೆ.