Don't Miss!
- Technology iPhone: ಆಪಲ್ ಅಂತಿಮವಾಗಿ ಐಫೋನ್ 12 ಬಳಕೆದಾರರಿಗೆ ಗುಡ್ ನ್ಯೂಸ್ ನೀಡಿಯೇ ಬಿಟ್ಟಿತು! ಏನದು?
- News Karnataka Lok Sabha Election 2024: ಮೊದಲ ದಿನ ನಾಮಪತ್ರ ಸಲ್ಲಿಸಿದ ಅಭ್ಯರ್ಥಿಗಳ ಪಟ್ಟಿ
- Automobiles Tata Nexon: ಟಾಟಾ ನೆಕ್ಸಾನ್ ಹೊಸ ರೂಪಾಂತರಗಳು ಬಿಡುಗಡೆ, ರೂ.10 ಲಕ್ಷ ಬೆಲೆ.. ಆಕರ್ಷಕ ವೈಶಿಷ್ಟ್ಯಗಳು
- Sports Riyan Parag: 'ಗಾಯದಿಂದ ಮೂರು ದಿನ ಒದ್ದಾಡಿ ಹೋಗಿದ್ದೆ': ರಿಯಾನ್ ಪರಾಗ್
- Finance ಇನ್ಮುಂದೆ ದುಬಾರಿಯಾಗಲಿದೆ ಎಸ್ಬಿಐ ಡೆಬಿಟ್, ಕ್ರೆಡಿಟ್ ಕಾರ್ಡ್ ನಿರ್ವಹಣಾ ಶುಲ್ಕ
- Lifestyle ಗುಡ್ಫ್ರೈಡೆ ಆಚರಣೆ ಹುಟ್ಟಿದ್ದು ಹೇಗೆ? ಇದರ ಮಹತ್ವವೇನು ಗೊತ್ತಾ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅಂಬಿ ಸಮಾಧಿಗೆ ನಮನ ಸಲ್ಲಿಸಿದ ದರ್ಶನ್, ಸುಮಲತಾ
ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತು ಮಂಡ್ಯ ಸಂಸದೆ ಸುಮಲತಾ ಇಬ್ಬರು ಇಂದು ಬೆಳಿಗ್ಗೆ ಕಂಠೀರವ ಸ್ಟುಡಿಯೋಗೆ ತೆರಳಿ, ಅಂಬರೀಶ್ ಅವರ ಸಮಾಧಿಗೆ ನಮನ ಸಲ್ಲಿಸಿದರು.
ಇಂದಿಗೆ ಅಂಬರೀಶ್ ಅಗಲಿ ಏಳು ತಿಂಗಳು ಕಳೆದಿದೆ. ಏಳನೇ ತಿಂಗಳ ಪುಣ್ಯ ತಿಥಿಯ ಹಿನ್ನೆಲೆ ಅಂಬಿ ಸಮಾಧಿಗೆ ಪತ್ನಿ ಸುಮಲತಾ ನಮಿಸಿದ್ದಾರೆ. ಅಂಬಿಯ ಇನ್ನೊಬ್ಬ ಮಗ ಎಂದೇ ಕರೆಸಿಕೊಳ್ಳುವ ದರ್ಶನ್ ಕೂಡ ಇಂದು ಕಂಠೀರವ ಸ್ಟುಡಿಯೋಗೆ ಹೋಗಿ ಅಂಬಿ ಅಪ್ಪಾಜಿಗೆ ನಮಸ್ಕರಿಸಿದ್ದಾರೆ.
ಅಂಬಿ ಚಿಕಿತ್ಸೆಗಾಗಿ ಸಿಂಗಾಪೂರ್ ಗೆ ಹೋಗಿದ್ದು ಅತ್ಯಂತ ಕಷ್ಟದ ಸ್ಥಿತಿ: ಸುಮಲತಾ
ಅಂದ್ಹಾಗೆ, ನಟ ದರ್ಶನ್ ಅವರು ರಾಬರ್ಟ್ ಚಿತ್ರದ ಚಿತ್ರೀಕರಣದಲ್ಲಿ ತೊಡಗಿಕೊಂಡಿದ್ದು, ಕಂಠೀರವ ಸ್ಟುಡಿಯೋದಲ್ಲೇ ಶೂಟಿಂಗ್ ನಡೆಯುತ್ತಿದೆ. ಹೀಗಾಗಿ, ದರ್ಶನ್ ಜೊತೆ ನಿರ್ದೇಶಕ ತರುಣ್ ಸುಧೀರ್ ಕೂಡ ಅಂಬಿ ಸಮಾಧಿಗೆ ನಮನ ಸಲ್ಲಿಸಿದರು.
ಮಂಡ್ಯ ಜನರಿಗಾಗಿ ರಾಕ್ ಲೈನ್ ವೆಂಕಟೇಶ್ ಕೈಗೊಂಡ ಹೊಸ ನಿರ್ಧಾರ
ನಿರ್ಮಾಪಕ ರಾಕ್ ಲೈನ್ ವೆಂಕಟೇಶ್, ಹಿರಿಯ ನಟ ದೊಡ್ಡಣ್ಣ, ಅಂಬಿ ಪುತ್ರಿ ಅಭಿಷೇಕ್ ಕೂಡ ಸಮಾಧಿ ಬಳಿ ಭೇಟಿ ನೀಡಿದ್ದರು. ಕಳೆದ ನವೆಂಬರ್ 24 ರಂದು ರೆಬೆಲ್ ಸ್ಟಾರ್ ಅಂಬರೀಶ್ ಅವರ ನಿಧನರಾಗಿದ್ದರು.