Don't Miss!
- Sports IPL 2024: ವಿರಾಟ್ ಕೊಹ್ಲಿ ವಿವಾದಾತ್ಮಕ ಔಟ್; ಅಂಪೈರಿಂಗ್ ವಿರುದ್ಧ ಕೆಂಡಕಾರಿದ ಮೊಹಮ್ಮದ್ ಕೈಫ್!
- News Weather Update: ಮುಗಿಯಿತಾ ಮಳೆ ಅಧ್ಯಾಯ, ಮತ್ತೆ ಎದ್ದಿವೆ ಶಾಖದ ಅಲೆಗಳು!
- Finance ರಿಲಯನ್ಸ್ ಇಂಡಸ್ಟ್ರೀಸ್ ನಾಲ್ಕನೇ ತ್ರೈಮಾಸಿಕ ಫಲಿತಾಂಶ ಪ್ರಕಟ; ನಿವ್ವಳ ಲಾಭ 18,951 ಕೋಟಿ ರೂಪಾಯಿ
- Lifestyle ಮನೆಯಲ್ಲಿ ಘಮ ಘಮಿಸುವ ಮಲ್ಲಿಗೆ ಗಿಡ ಬೆಳೆಸೋದು ಹೇಗೆ..? ಇಲ್ಲಿದೆ ಮಾಹಿತಿ
- Technology ಇಂದು ಮೊಟೊ G64 5G ಫೋನ್ ಫಸ್ಟ್ ಸೇಲ್!..ಈ ಫೋನಿನ ಪ್ಲಸ್ ಪಾಯಿಂಟ್ ಏನು?
- Automobiles ಹ್ಯುಂಡೈ ವೆರ್ನಾ ಕಾರಿಗೆ ಭಾರೀ ಡಿಸ್ಕೌಂಟ್: ರಾಶಿ ಫೀಚರ್ನ ಕಾರಿಗೆ ಇಷ್ಟು ಆಫರ್ ಯಾಕೆಂದ ನೆಟ್ಟಿಗರು!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಮನೆಗೆ ಭೇಟಿ ನೀಡಿದ ಚಾಲೆಂಜಿಂಗ್ ಸ್ಟಾರ್ ದರ್ಶನ್
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳು ಮತ್ತು ನವರಸ ನಾಯಕ ಜಗ್ಗೇಶ್ ನಡುವಿನ ವಿವಾದ ಅಂತ್ಯಗೊಂಡಿದೆ. ದರ್ಶನ್, ಜಗ್ಗೇಶ್ ಗೆ ಬಹಿರಂಗವಾಗಿ ಕ್ಷಮೆಯಾಚಿಸಿದ ಬಳಿಕ ವಿವಾದ ತಾರ್ಕಿಕ ಅಂತ್ಯ ಕಂಡಿದೆ.
ಇದಾದ ಬಳಿಕ ದರ್ಶನ್, ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಮನೆಗೆ ಭೇಟಿ ನೀಡಿದ್ದಾರೆ. ಜಮೀರ್ ಅಹ್ಮದ್ ಅವರನ್ನು ಭೇಟಯಾಗಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಚಾಲೆಂಜಿಂಗ್ ಮನೆಗೆ ಎಂಟ್ರಿ ಕೊಟ್ಟಿರುವ ಫೋಟೋವನ್ನು ಜಮೀರ್ ಅಹ್ಮದ್ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
ಅಭಿಮಾನಿಗಳ ಪರವಾಗಿ ಜಗ್ಗೇಶ್ ಕ್ಷಮೆ ಕೇಳಿದ ದರ್ಶನ್
'ಕನ್ನಡ ಚಿತ್ರರಂಗದ ಖ್ಯಾತ ನಟ, ನಿರ್ಮಾಪಕ ದರ್ಶನ್ ತೂಗುದೀಪ್ ಅವರು ಇಂದು ನನ್ನ ನಿವಾಸಕ್ಕೆ ಆಗಮಿಸಿದ ಕ್ಷಣಗಳು' ಎಂದು ಬರೆದುಕೊಂಡು ಫೋಟೋಗಳನ್ನು ಹಂಚಿಕೊಂಡಿದ್ದಾರೆ. ದರ್ಶನ್ ಜೊತೆ ನಿರ್ಮಾಪಕ ಉಮಾಪತಿ ಕೂಡ ಜಮೀರ್ ಮನೆಗೆ ಭೇಟಿ ನೀಡಿದ್ದಾರೆ.
ದರ್ಶನ್ ಅವರನ್ನು ಪ್ರೀತಿಯಿಂದ ಬರಮಾಡಿಕೊಂಡ ಜಮೀರ್ ಅಹ್ಮದ್ ಮತ್ತು ಪುತ್ರ ಹಾಗೂ ನಟ ಜೈದ್ ಖಾನ್ ಕೆಲವು ಸಮಯ ಮಾತುಕತೆ ನಡೆಸಿದ್ದಾರೆ. ಜಮೀರ್ ಪುತ್ರ ಜೈದ್ ಖಾನ್ ಸಹ ಮೊದಲ ಸಿನಿಮಾ ರಿಲೀಸ್ ಗೆ ಎದುರು ನೋಡುತ್ತಿದ್ದಾರೆ. ಜಮೀರ್ ಮತ್ತು ಪುತ್ರ ಜೈದ್ ಖಾನ್, ದರ್ಶನ್ ಜೊತೆ ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ.
ದರ್ಶನ್ ಭೇಟಿ ಜಮೀರ್ ಕುಟುಂಬಕ್ಕೆ ಸಂತಸ ತಂದಿದೆ. ಇತ್ತೀಚಿಗಷ್ಟೆ ಜಮೀರ್ ಅಹ್ಮದ್ ಮಗಳ ಮದುವೆಯನ್ನು ಅದ್ದೂರಿಯಾಗಿ ನೆರವೇರಿಸಿದ್ದಾರೆ. ಮಗಳ ಮದುವೆಗೆ ಸ್ಯಾಂಡಲ್ ವುಡ್ ನ ಅನೇಕ ಗಣ್ಯರಿಗೆ ಆಮಂತ್ರಣ ನೀಡಿದ್ದರು. ಸ್ಯಾಂಡಲ್ ವುಡ್ ನಿಂದ ಕೆಲವರು ಮಾತ್ರ ಮದುವೆಯಲ್ಲಿ ಭಾಗಿಯಾಗಿದ್ದರು.
Recommended Video
ಇದೀಗ ದರ್ಶನ್ ಮನೆಗೆ ಭೇಟಿ ನೀಡಿ ಜಮೀರ್ ಕುಟುಂಬದ ಜೊತೆ ಕೆಲ ಸಮಯ ಕಾಲಕಳೆದಿದ್ದಾರೆ. ಅಂದಹಾಗೆ ದರ್ಶನ್ ಸದ್ಯ ರಾಬರ್ಟ್ ಸಿನಿಮಾ ರಿಲೀಸ್ ಗೆ ಎದುರು ನೋಡುತ್ತಿದ್ದಾರೆ. ಮಾರ್ಚ್ 11ಕ್ಕೆ ಸಿನಿಮಾ ರಿಲೀಸ್ ಆಗುತ್ತಿದ್ದು, ತೆಲುಗು ಮತ್ತು ಕನ್ನಡದಲ್ಲಿ ಏಕಕಾಲಕ್ಕೆ ತೆರೆಗೆ ಬರುತ್ತಿದೆ.